ಅಪ್ರಾಪ್ತರ ವ್ಹೀಲಿಂಗ್‌ ಹಾವಳಿಗೆ ಕಡಿವಾಣ ಹಾಕಿ


Team Udayavani, Jun 26, 2023, 3:13 PM IST

ಅಪ್ರಾಪ್ತರ ವ್ಹೀಲಿಂಗ್‌ ಹಾವಳಿಗೆ ಕಡಿವಾಣ ಹಾಕಿ

ಕೆಜಿಎಫ್‌: ನಗರದಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಚಾಲನಾ ಪರವಾನಗಿ ಇಲ್ಲದೆ ದ್ವಿಚಕ್ರ ವಾಹನಗಳನ್ನು ಓಡಿಸುವುದು, ವ್ಹೀಲಿಂಗ್‌ ಮಾಡುವುದು ಹೆಚ್ಚಾಗಿದ್ದು, ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಾಗಿದೆ ಸಾರ್ವಜನಿಕರು ಆರೋಪಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ಹೆಚ್ಚಾಗಿ ಬೈಕ್‌ಗಳಲ್ಲಿ ಬರುತ್ತಿದ್ದರು, ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿಯವರು ಈ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. 18 ವರ್ಷದೊಳಗಿನ ಬಾಲಕ, ಬಾಲಕಿಯರು ಚಾಲನಾ ಪರವಾನಗಿ ಇಲ್ಲದೇ ವಾಹನ ಚಾಲನೆ ಮಾಡುವುದು ಅಪರಾಧವಾಗಿದೆ. ಮಕ್ಕಳಿಗೆ ವಾಹನ ನೀಡುವ ಮೂಲಕ ಪೋಷಕರು, ತಮ್ಮದೇ ಮಕ್ಕಳ ಜೀವದ ಜತೆ ಚೆಲ್ಲಾಟವಾಡುತ್ತಿದ್ದಾರೆ.

ಶಾಲಾ ಆಡಳಿತ ಮಂಡಳಿ ಪೋಷಕರಿಗೆ ನಿರ್ದೇಶನ ನೀಡುತ್ತಿಲ್ಲ: ಮಕ್ಕಳಿಗೆ ಚಲಾಯಿಸಲು ವಾಹನ ನೀಡಿದರೆ ಪೋಷಕರು ಅಥವಾ ವಾಹನ ಮಾಲೀಕರಿಗೆ ಶಿಕ್ಷೆಯಾಗುತ್ತದೆ ಎಂಬ ಕಾನೂನು ಇದ್ದರೂ, ನಗರದಲ್ಲಿನ ಪೋಷಕರು ತಲೆಕಡಿಸಿಕೊಂಡಿಲ್ಲ. ಶಾಲಾ ಕಾಲೇಜುಗಳಿಗೆ ದ್ವಿಚಕ್ರ ವಾಹನಗಳನ್ನು ಚಲಾಯಿಸಿಕೊಂಡು ಬರುವ ಮಕ್ಕಳ ಪೋಷಕರಿಗೆ ಶಾಲಾ ಆಡಳಿತ ಮಂಡಳಿಯವರು ಈ ಬಗ್ಗೆ ಸೂಕ್ತ ನಿರ್ದೇಶನ ನೀಡುತ್ತಿಲ್ಲ ಎಂಬುದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿರುವ ದೂರುಗಳಾಗಿದೆ. ಬೈಕ್‌, ಸ್ಕೂಟರ್‌ಗಳಲ್ಲಿ ಕಾಲೇಜಿಗೆ ಬರುವ ಹುಡುಗರು ಸಂಚಾರ ನಿಯಮಗಳನ್ನು ಉಲ್ಲಂಘಿ ಸುತ್ತಿದ್ದಾರೆ, ಹೆಲ್ಮೆಟ್‌ ಧರಿಸುವುದಿಲ್ಲ, ಒಂದು ಬೈಕ್‌ನಲ್ಲಿ ಮೂವರು, ನಾಲ್ವರನ್ನು ಕೂರಿಸಿಕೊಂಡು ಮನಬಂ ದಂತೆ ಅತಿ ವೇಗದಲ್ಲೂ ಬೈಕ್‌ಗಳನ್ನು ಚಲಾಯಿಸುತ್ತಾರೆ. ಮೊಬೈಲ್‌ನಲ್ಲಿ ಮಾತನಾಡುತ್ತಾ ಬೈಕ್‌ ಚಲಾಯಿಸುವರ ಸಂಖ್ಯೆ ಹೆಚ್ಚಾಗಿದೆ.

ಶಾಲಾ ಪಕ್ಕದ ಅಂಗಡಿ, ಬಂಕ್‌ಗಳಲ್ಲಿ ಬೈಕ್‌ ನಿಲುಗಡೆ: ಇನ್ನು ಕೆಲವರು ಮೀಲಿಂಗ್‌ ಕೂಡ ಮಾಡುತ್ತಾರೆ. ಕೆಲವು ಮಕ್ಕಳು ಪೋಷಕರಿಗೆ ಟ್ಯೂಶನ್‌ಗೆ ಹೋಗಿ ಬರುವುದಾಗಿ ಹೇಳಿ, ಬೈಕ್‌ಗಳನ್ನು ತೆಗೆದುಕೊಂಡು ಹೊರಬರುತ್ತಾರೆ. ಆದರೆ ಟ್ಯೂಶನ್‌ಗೆ ಹೋಗದೆ ಮುಖ್ಯ ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ಸುತ್ತುವುದು ಹೆಚ್ಚಾಗಿದ್ದು, ಟ್ಯೂಶನ್‌ ಶಿಕ್ಷಕರು ಸಹ ಇದರ ಬಗ್ಗೆ ಯಾವ ಮಕ್ಕಳಿಗೂ ಬೈಕ್‌ ತರಬಾರದು ಎಂದು ತಿಳಿ ಹೇಳಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ನಗರದ ಪ್ರತಿಷ್ಠಿತ ಶಾಲಾ ಕಾಲೇಜುಗಳಿಗೆ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬೈಕ್‌ನಲ್ಲಿ ಬರುತ್ತಾರೆ, ಕೆಲವು ಶಾಲೆಗಳಲ್ಲಿ ಮಕ್ಕಳು ಬೈಕ್‌ ತರಬಾರದು ಎಂದು ಶಾಲಾ ಆಡಳಿತ ಮಂಡಳಿಯವರು ಸೂಚನೆ ನೀಡಿದ್ದಾರೆ. ಆದರೂ ಕೆಲವೊಂದು ಮಕ್ಕಳು ಬೈಕ್‌ನಲ್ಲಿ ಬಂದು ಶಾಲೆಯ ಸಮೀಪವಿರುವ ಪೆಟ್ರೋಲ್‌ ಬಂಕ್‌, ಬಸ್‌ ನಿಲ್ದಾಣ, ರಸ್ತೆಗಳ ಪಕ್ಕದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ ಕಾಲೇಜಿಗೆ ಬರುತ್ತಿದ್ದಾರೆ ಎನ್ನಲಾಗಿದೆ.

ಮುಖ್ಯ ರಸ್ತೆಯಲ್ಲಿ ಬೈಕ್‌ ವ್ಹೀಲಿಂಗ್‌ : ಕೆಲವು ಪಡ್ಡೆ ಹುಡುಗರು, ಬೈಕ್‌ಗಳಲ್ಲೇ ಸ್ಟಂಟ್‌ ಮಾಡುತ್ತಾ, ಗಾಡಿಗಳನ್ನು ಓಡಿಸುವ ಮೂಲಕ ಅಮಾಯಕ ಜನರನ್ನು ಹೆದರಿಸುತ್ತಾರೆ. ಒಬ್ಬರು ವ್ಹೀಲಿಂಗ್‌ ಮಾಡುತ್ತಿದ್ದರೆ ಮತ್ತೆ ಕೆಲವರು ಹಿಂದೆ ಗಾಡಿಗಳಲ್ಲಿ ಕುಳಿತು ಮೊಬೈಲ್‌ನಲ್ಲಿ ವಿಡಿಯೋಗಳನ್ನು ಮಾಡುವುದು ಹೆಚ್ಚಾಗಿದೆ. ವಿಡಿಯೋ ಮಾಡುವ ಸಂದರ್ಭದಲ್ಲಿ ಇವರನ್ನು ನೋಡುವುದಕ್ಕೆ ಕೆಲವರು ರಸ್ತೆಯಲ್ಲಿ ನಿಲ್ಲುತ್ತಾರೆ, ಇದರಿಂದ ಅಪಘಾತಗಳೂ ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಸಾರ್ವಜನಿಕರು ದೂರಿದ್ದಾರೆ.

ವೀಲಿಂಗ್‌ ನಿಯಂತ್ರಣಕ್ಕೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ ವೀಲಿಂಗ್‌ ಮಾಡುವವರ ವಿರುದ್ಧ ಹಾಗೂ ಅಂತಹ ಮಕ್ಕಳ ಪೋಷಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕು ಎನ್ನುವುದು ಸಾರ್ವಜನಿಕರ ಒತ್ತಾಯವಾಗಿದೆ. ಮಕ್ಕಳಿಗೆ ಬುದ್ಧಿ ಹೇಳಿ ಮುಂದಾಗುವ ಅವಘಡವನ್ನು ತಡೆಯುವಲ್ಲಿ ಇಲಾಖೆ ಅಧಿಕಾರಿಗಳು ಹಾಗೂ ಪೋಷಕರು ಮುಂದಾಗಬೇಕು. ಶಾಲಾ ಆಡಳಿತ ಮಂಡಳಿಗಳಿಗೆ ಸೂಕ್ತ ನಿರ್ದೇಶನ ನೀಡಿ ಮಕ್ಕಳು ಕಾಲೇಜಿಗೆ ಬೈಕ್‌ ತರದಂತೆ ನಿಯಮಾವಳಿ ಹಾಕಬೇಕೆಂದು ಜನರು ಆಗ್ರಹಿಸಿದ್ದಾರೆ.

ಈಗಾಗಲೇ ಶಾಲಾ ಕಾಲೇಜುಗಳಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಪರವಾ ನಿಗೆ ಇಲ್ಲದೆ ವಾಹನವನ್ನು ಚಾಲಾಯಿಸ ಬಾರದೆಂದು ಅರಿವು ಮೂಡಿಸಲಾಗಿದೆ. ಮಕ್ಕಳು ಬೈಕ್‌ಗಳನ್ನು ಚಲಾಯಿಸಿದರೆ ಪೋಷಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಾಗುವುದು. ಅಪ್ರಾಪ್ತರ ವಾಹನಗಳಿಗೆ ದಂಡ ವಿಧಿ ಸಲಾಗಿದೆ. ಕೆಲವು ಮಕ್ಕಳ ಪೋಷಕರನ್ನು ಠಾಣೆಗಳಿಗೆ ಕರೆಸಿ ಬುದ್ದಿವಾದವನ್ನು ಹೇಳಲಾಗಿದೆ. ಆದಾಗ್ಯೂ ಸಂಚಾರ ನಿಯಮ ಉಲ್ಲಂಘನೆ ಮುಂದುವರಿಸಿದರೆ ವಾಹನವನ್ನೇ ಜಪ್ತಿ ಮಾಡಲಾಗುವುದು. – ಡಾ. ಧರಣಿದೇವಿ, ಪೊಲೀಸ್‌ ವರಿಷ್ಠಾಧಿಕಾರಿ

 – ನಾಗೇಂದ್ರ ಕೆ

ಟಾಪ್ ನ್ಯೂಸ್

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.