![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 26, 2023, 3:48 PM IST
ಚೆನ್ನೈ: ದಳಪತಿ ವಿಜಯ್ ಅವರ ʼಲಿಯೋʼ ಸಿನಿಮಾ ಸದ್ಯ ಕಾಲಿವುಡ್ ನಲ್ಲಿ ಟ್ರೆಂಡಿಂಗ್ ಟಾಕ್. ಇತ್ತೀಚೆಗಷ್ಟೇ ಸಿನಿಮಾದ ಫಸ್ಟ್ ಲುಕ್ ಹಾಗೂ ಹಾಡು ರಿಲೀಸ್ ಆಗಿದ್ದು, ವಿಜಯ್ ಅಭಿಮಾನಿಗಳಿಗೆ ಡಬಲ್ ಖುಷಿ ಕೊಟ್ಟಿದೆ.
ಲೋಕೇಶ್ ಕನಕರಾಜ್ ನಿರ್ದೇಶನದ ʼಲಿಯೋʼ ವರ್ಷದ ಬಹು ನಿರೀಕ್ಷಿತ ಸಿನಿಮಾಗಳ ಸಾಲಿಗೆ ಸೇರಿದೆ. ಇತ್ತೀಚೆಗಷ್ಟೇ ವಿಜಯ್ ಹುಟ್ಟುಹಬ್ಬಕ್ಕೆ ʼಲಿಯೋʼ ಚಿತ್ರತಂಡ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದೆ. ಕೈಯಲ್ಲಿ ಸುತ್ತಿಗೆಯೊಂದನ್ನು ಹಿಡಿದುಕೊಂಡು ಮಾಸ್ ಅವತಾರದಲ್ಲಿ ವಿಜಯ್ ಕಾಣಿಸಿಕೊಂಡಿದ್ದಾರೆ. “ಪಳಗಿಸದ ನದಿಗಳ ಜಗತ್ತು, ಶಾಂತವಾದ ನೀರು ದೈವಿಕ ದೇವತೆಗಳಾಗುತ್ತವೆ ಅಥವಾ ಭಯಾನಕ ರಾಕ್ಷಸರಾಗುತ್ತವೆ.” ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ. ಈ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇದರ ಜೊತೆ ಸಿನಿಮಾ ತಂಡ ʼನಾ ರೆಡಿʼ ಲಿರಿಕಲ್ ವಿಡಿಯೋ ಹಾಡನ್ನು ಕೂಡ ರಿಲೀಸ್ ಮಾಡಿದೆ. ಈ ಹಾಡು ಸೋಶಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿದೆ. ವಿಜಯ್ ಅವರ ಸ್ಟೆಪ್ ಗಳನ್ನು ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಹಾಡಿನ ಸುತ್ತ ಈಗ ವಿವಾದ ಸುತ್ತಿಕೊಂಡಿದೆ. ಅದಕ್ಕೆ ಕಾರಣ ಆರ್ ಟಿಐ ಕಾರ್ಯಕರ್ತರೊಬ್ಬರು ನೀಡಿರುವ ದೂರು.
ಕೊರುಕ್ಕುಪ್ಪೆಟ್ಟೈ ಮೂಲದ ಆರ್ಟಿಐ ಕಾರ್ಯಕರ್ತ ಸೆಲ್ವಂ ಹಾಡಿನಲ್ಲಿ ಡ್ರಗ್ಸ್ ಸೇವನೆ ಮತ್ತು ರೌಡಿಸಂನ್ನು ವೈಭವೀಕರಿಸುವ ದೃಶ್ಯಗಳಿವೆ ಎಂದು ಜೂನ್ 25ರಂದು ಆನ್ಲೈನ್ನಲ್ಲಿ ದೂರು ದಾಖಲಿಸಿದ್ದು, ಜು.26ರ ಬೆಳಗ್ಗೆ 10 ಗಂಟೆ ಸುಮಾರಿಗೆ ಅರ್ಜಿ ಸಲ್ಲಿಕೆಯಾಗಿದೆ. ಚಿತ್ರತಂಡದ ವಿರುದ್ಧ ಮಾದಕ ದ್ರವ್ಯ ನಿಯಂತ್ರಣ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಮಾದಕ ವಸ್ತುಗಳ ಬಳಕೆಯ ವಿರುದ್ಧ ಚೆನ್ನೈ ಪೊಲೀಸರು ನಗರದಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ನಟ ಕಾರ್ತಿ ಮತ್ತು ವಿಜಯ್ ಆಂಟೋನಿ ಭಾಗವಹಿಸಿದ್ದಾರೆ.
ʼಲಿಯೋʼ ಸಿನಿಮಾಕ್ಕೆ ಅನಿರುದ್ಧ್ ರವಿಚಂದರ್ ಅವರು ಮ್ಯೂಸಿಕ್ ನೀಡಿದ್ದು, ನಟಿ ತ್ರಿಷಾ ಕೃಷ್ಣನ್ 14 ವರ್ಷಗಳ ಬಳಿಕ ವಿಜಯ್ ಅವರ ಜೊತೆಯಾಗಿ ನಟಿಸಿದ್ದಾರೆ. ಸಂಜಯ್ ದತ್ ,ಅರ್ಜುನ್, ಮಿಸ್ಕಿನ್, ಮನ್ಸೂರ್ ಅಲಿ ಖಾನ್, ಗೌತಮ್ ಮೆನನ್, ಪ್ರಿಯಾ ಆನಂದ್, ಮ್ಯಾಥ್ಯೂ ಥಾಮಸ್, ಸ್ಯಾಂಡಿ ಮಾಸ್ಟರ್ ಮುಂತಾದ ನಟರು ಸಿನಿಮಾದಲ್ಲಿ ನಟಿಸಿದ್ದಾರೆ.
‘ಲಿಯೋʼ ಅಕ್ಟೋಬರ್ ವೇಳೆಗೆ ರಿಲೀಸ್ ಆಗುವ ಸಾಧ್ಯತೆಯಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.