Vijayapura: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಯತ್ನಾಳ್ -ಜಿಗಜಿಣಗಿ ಬೆಂಬಲಿಗರ ಮಧ್ಯ ಗಲಾಟೆ
ಬೊಮ್ಮಾಯಿ ಪಾಲ್ಗೊಂಡಿದ್ದ ಸಭೆಯಿಂದ ಹೊರ ನಡೆದ ಸಂಸದ ಜಿಗಜಿಣಗಿ
Team Udayavani, Jun 26, 2023, 7:24 PM IST
ವಿಜಯಪುರ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದ ಬಿಜೆಪಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಪೊಲೀಸರು ಮಧ್ಯ ಪ್ರವೇಶ ಮಾಡುವಷ್ವಟರ ಮಟ್ಟಿಗೆ ಸಂಸದ ಜಿಗಜಿಣಗಿ ಹಾಗೂ ಶಾಸಕ ಯತ್ನಾಳ ಬೆಂಬಲಿಗರ ಮಧ್ಯೆ ಗಲಾಟೆ ನಡೆದಿದೆ.
ಸೋಮವಾರ ನಗರದ ಲಿಂಗದಗುಡಿ ರಸ್ತೆಯಲ್ಲಿರುವ ಸಂಗನಬಸವ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ನಡೆದ ಕಾರ್ಯಕರ್ತರ ಗಲಾಟೆ ಸಂದರ್ಭದಲ್ಲಿ ವೇದಿಕೆ ಮೇಲಿದ್ದ ಗಣ್ಯರು ಮೂಕಪ್ರೇಕ್ಷಕರಾಗಿದ್ದರು. ಈ ಹಂತದಲ್ಲಿ ಪೊಲೀಸರು ಮಧ್ಯ ಪ್ರವೇಶ ಮಾಡಿದರೂ, ಕಾರ್ಯಕರ್ತರ ಗಲಾಟೆ ನಿಯಂತ್ರಣಕ್ಕೆ ಬರಲಿಲ್ಲ. ಇದರಿಂದ ಬೇಸರಗೊಂಡ ಸಂಸದ ರಮೇಶ ಜಿಗಜಿಣಗಿ ಸೇರಿದಂತೆ ಹಲವು ನಾಯಕರು ಸಭೆಯಿಂದ ಹೊರ ನಡೆದ ಘಟನೆ ಜರುಗಿದೆ.
ಮಹಾನಗರ ಪಾಲಿಕೆ ಸದಸ್ಯರು, ಯತ್ನಾಳ ಬರ ಬೆಂಬಲಿಗರು ಬಿಆರ್ಪಿ, ಬಿಆರ್ಪಿ ಎಂದು ಘೋಷಣೆ ಕೂಗಲಾರಂಭಿಸಿದರು. ಇದರಿಂದ ಸಭೆಯಲ್ಲಿ ಏಕಾಏಕಿ ಗದ್ದಲ ಆರಂಭಗೊಂಡು, ಪರಸ್ಪರ ಘೋಷಣೆ ಜೋರಾಗತೊಡಗಿತು. ಇಷ್ಟಾದರೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂಕಪ್ರೇಕ್ಷರಾಗಿದ್ದರು.
ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಸಂಸದ ರಮೇಶ ಜಿಗಜಿಣಗಿ ಅವರನ್ನು ನಾಲ್ಕನೇ ಬಾರಿಗೆ ಆಯ್ಕೆ ಮಾಡಿ ಸಂಸತ್ಗೆ ಕಳಿಸಬೇಕಿದೆ ಎಂದು ಮಾತು ಮಗಿಸುತ್ತಲೇ ಶಾಸಕ ಯತ್ನಾಳ ಪರ ಬೆಂಬಲಿಗರು ಘೋಷಣೆ ಕೂಗಲು ಆರಂಭಿಸಿದರು. ಆಗ ಭಾರಿ ಸಿಡುಕು ಹೊರ ಹಾಕುತ್ತಲೇ ಸಂಸದ ರಮೇಶ ಜಿಗಜಿಣಗಿ ಹೊರ ನಡೆದರೆ, ವೇದಿಕೆಯಲ್ಲಿದ್ದ ಮಾಜಿ ಸಚಿವ ಮುರುಗೇಶ ನಿರಾಣಿ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ವಿಧಾನಸಭೆ ಸ್ಪರ್ಧಿಯಾಗಿದ್ದ ವಿಜುಗೌಡ ಪಾಟೀಲ ಸೇರಿದಂತೆ ಹಲವು ಗಣ್ಯರು ರಮೆಶ ಜಿಗಜಿಒಣಗಿ ಅವರನ್ನು ಹಿಂಬಾಲಿಸಿದರು.
ಇದನ್ನೂ ಓದಿ: 16 ತಿಂಗಳ ಮಗುವನ್ನು ಒಂಟಿಯಾಗಿ ಮನೆಯಲ್ಲಿ ಬಿಟ್ಟು 10 ದಿನದ ಪ್ರವಾಸಕ್ಕೆ ತೆರಳಿದ ಮಹಾತಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.