Dandeli;ಪ್ರವಾಸಿಗರ ಆಕರ್ಷಣೆಗೆ ಪಾತ್ರವಾಗುತ್ತಿರುವ ಫಣಸೋಲಿಯ ಆನೆ ಶಿಬಿರ

ಆನೆ ಚಂಚಲೆಯ ಮನಮೋಹಕ ಆಟಕ್ಕೆ ಮನಸೋತ ಪ್ರವಾಸಿಗರು

Team Udayavani, Jun 27, 2023, 12:35 PM IST

elಪ್ರವಾಸಿಗರ ಆಕರ್ಷಣೆಗೆ ಪಾತ್ರವಾಗುತ್ತಿರುವ ಫಣಸೋಲಿಯ ಆನೆ ಶಿಬಿರ

ದಾಂಡೇಲಿ : ಒಂದು ಆನೆಯ ಮೂಲಕ ಆರಂಭವಾದ ಜೋಯಿಡಾ ತಾಲ್ಲೂಕಿನ ಫಣಸೋಲಿಯ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಬರುವ ಫಣಸೋಲಿ ಆನೆ ಶಿಬಿರ ಇಂದು 4 ಆನೆಗಳ ಮೂಲಕ ಪ್ರವಾಸಿಗರಿಗೆ ಮನಸಂತೋಷವನ್ನು ನೀಡುವುದರ ಜೊತೆಗೆ ಆನೆ ಶಿಬಿರಕ್ಕೆ ಮತ್ತಷ್ಟು ರಂಗು ತಂದುಕೊಟ್ಟಿದೆ.

ಕಳೆದ ಕೆಲ ವರ್ಷಗಳ ಹಿಂದೆ ಕಾಳಿ ಹುಲಿ ಸಂರಕ್ಷಿತ ಪ್ರದೇಶದಡಿ ಆನೆ ಶಿಬಿರವನ್ನು ಆರಂಭಿಸಲಾಗಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಅಂದು ಪ್ರವಾಸೋದ್ಯಮ ಸಚಿವರಾಗಿದ್ದಾಗ ಈಗಿನ ಶಾಸಕರಾದ ಆರ್.ವಿ.ದೇಶಪಾಂಡೆಯವರು ಆನೆ ಶಿಬಿರದ ಮಹತ್ವಕಾಂಕ್ಷಿ ಯೋಜನೆಗೆ ಚಾಲನೆ ನೀಡಿದ ಪರಿಣಾಮವಾಗಿ ಜೋಯಿಡಾ ತಾಲ್ಲೂಕಿನ ಪ್ರವಾಸೋದ್ಯಮದ ಬೆಳವಣಿಗೆಗೂ ನಾಂದಿಯಾಯಿತ್ತಲ್ಲದೆ ಕೆಲವರಿಗೆ ಉದ್ಯೋಗದ ಆಸರೆಯಾಗಿರುವುದು ವಾಸ್ತವ ಸತ್ಯ. ದೂರದ ಶಿವಮೊಗ್ಗದಿಂದ ಬಂದಿರುವ ನುರಿತ ಮಾವುತರು ಆನೆಗಳನ್ನು ಅತ್ಯಂತ ಪ್ರೀತಿ ವಾತ್ಸಲ್ಯದಿಂದ ನೋಡಿಕೊಳ್ಳುವ ಮೂಲಕ ಇಲ್ಲಿಯ ಆನೆಗಳು ಜನಸ್ನೇಹಿ ಆನೆಗಳಾಗಿ ಮಾರ್ಪಟ್ಟಿವೆ. ಇತ್ತೀಚೆಗಷ್ಟೆ ಜನ್ಮ ಪಡೆದ ಆನೆ ಮರಿಯಂತೂ ತನ್ನ ಮನಮೋಹಕ ಚೇಷ್ಟೆಗಳ ಮೂಲಕ ಎಲ್ಲರ ಪ್ರೀತಿಗೆ ಪಾತ್ರವಾಗುತ್ತಿದೆ. ಇನ್ನೂ 36 ವರ್ಷದ ಆನೆ ಚಂಚಲೆಯ ವಿವಿಧ ಆಟಗಳು ಹಾಗೂ ಮಾವುತನ ಅಣತಿಗೆ ತಕ್ಕಂತೆ ಅದರ ಭಾವ ಭಂಗಿಗಳಿಗೆ ಎಲ್ಲರು ಕೈ ಮುಗಿದು ತಲೆ ಬಾಗಬೇಕು.

ವನ್ಯಜೀವಿ ಇಲಾಖೆಯ ನಿರ್ದೇಶಕರಾದ ಮರಿಯ ಕ್ರಿಸ್ತರಾಜ್ ಮತ್ತು ಎ.ಸಿ.ಎಫ್ ಎಸ್.ಎಸ್.ನಿಂಗಾಣಿಯವರ ಮಾರ್ಗದರ್ಶನ ಹಾಗೂ ವನ್ಯಜೀವಿ ವಲಯದ ವಲಯಾರಣ್ಯಾಧಿಕಾರಿ ರಶ್ಮಿ ದೇಸಾಯಿಯವರ ನೇತೃತ್ವದಲ್ಲಿ ವನ್ಯಜೀವಿ ವಲಯದ ಉಪ ವಲಯಾರಣ್ಯಾಧಿಕಾರಿಗಳು, ವನ್ಯಜೀವಿ ವಲಯದ ಸಿಬ್ಬಂದಿಗಳು ಮತ್ತು ಆನೆ ಶಿಬಿರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ಸಿಬ್ಬಂದಿಗಳ ಅವಿರತ ಮತ್ತು ಕಾಳಜಿಯುಕ್ತ ಸೇವೆಯ ಪರಿಣಾಮವಾಗಿ ಫನಸೋಲಿಯ ಆನೆ ಶಿಬಿರ ಇಂದು ತನ್ನದೇ ಆದ ಹಿರಿಮೆ ಗರಿಮೆಯನ್ನು ಹೆಚ್ಚಿಸಿಕೊಂಡು ಪ್ರವಾಸಿಗರ ಮನಸೆಳೆಯುತ್ತಿದೆ. ವಾರಾಂತ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಆಗಮಿಸಿ, ಕೆಲ ಹೊತ್ತು ನಾಲ್ಕು ಆನೆಗಳ ದರ್ಶನವನ್ನು ಪಡೆದು ಅದರ ವಿವಿಧ ರೀತಿಯ ಆಕರ್ಷಕ ಚಟುವಟಿಕೆಗಳನ್ನು ನೋಡಿ ಸಂಭ್ರಮಿಸುತ್ತಾರೆ.

ಆನೆಗಳನ್ನು ಪಳಗಿಸಿ, ಅದನ್ನು ಪ್ರೀತಿಯ ಮತ್ತು ಜನಸ್ನೇಹಿಯನ್ನಾಗಿಸಿದ ಮಾವುತರ ಸಾಹಸಿಕ ಕಾರ್ಯ ಮಾತ್ರ ಅಭಿನಂದನೀಯ. ಆನೆಗಳನ್ನು ಪಳಗಿಸಿ, ಆನೆ ಶಿಬಿರಕ್ಕೆ ಹೊಸ ಜೀವಕಳೆಯನ್ನು ತಂದುಕೊಟ್ಟಿರುವ ಅತ್ಯಂತ ಸಾಹಸಿಕ ಮತ್ತು ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿರುವ ಈ ಮಾವುತರುಗಳಿಗೆ ಇಲಾಖೆಯಡಿ ಖಾಯಂ ನೌಕರಿ ಕೊಡಿಸುವ ನಿಟ್ಟಿನಲ್ಲಿ ಶಾಸಕರು ಸೇರಿದಂತೆ ರಾಜ್ಯ ಸರಕಾರ ಅಗತ್ಯ ಕ್ರಮವನ್ನು ಕೈಗೊಂಡು, ಅವರನ್ನು ನಂಬಿರುವ ಅವರ ಕುಟುಂಬಸ್ಥರಿಗೆ ಆಸರೆಯನ್ನು ನೀಡಬೇಕಾಗಿದೆ.

-ಸಂದೇಶ್.ಎಸ್.ಜೈನ್

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqewq

Dandeli: ತಂಡದಿಂದ ಮನೆಗೆ ನುಗ್ಗಿ ಮೂವರ ಮೇಲೆ ಮರಣಾಂತಿಕ ಹಲ್ಲೆ

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.