ಹೈವೇ ಅವ್ಯವಸೆಗೆ ಪರಿಹಾರ ಹುಡುಕಲು ಮುಂದಾದ ಸರ್ಕಾರ
Team Udayavani, Jun 27, 2023, 1:06 PM IST
ರಾಮನಗರ: ರಾಷ್ಟ್ರೀಯ ಹೆದ್ದಾರಿ 275ರ ಬೆಂಗಳೂರು ಮತ್ತು ಮೈಸೂರು ನಡುವಿನ ದಶಪಥ ರಸ್ತೆ ಅವ್ಯವಸ್ಥೆಯತ್ತ ಕೊನೆಗೂ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಡೆತ್ವೇ ಎನಿಸಿರುವ ಈ ರಸ್ತೆಯಲ್ಲಿ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಲು ಅಧಿಕಾರಿಗಳು ಮುಂದಾಗಿದ್ದಾರೆ.
ಈಗಾಗಲೇ ಎಕ್ಸ್ಪ್ರೆಸ್ ಹೈವೇಯಲ್ಲಿನ ಅವ್ಯವಸ್ಥೆಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಇಲಾಖೆ ವರದಿ ನೀಡಿ, 54 ಅಂಶಗಳನ್ನು ಸರಿಪಡಿಸುವಂತೆ ಸೂಚನೆ ನೀಡಿತ್ತು. ಪಿಡಬ್ಲೂಡಿ ಸಚಿವ ಸತೀಶ್ ಜಾರಕೀಹೋಳಿ ಸಹ ಸೇಫ್ಟಿ ಆಡೀಟ್ ನಡೆಸುವುದಾಗಿ ತಿಳಿಸಿದ್ದರು. ಇನ್ನು ಹೈವೇಯಲ್ಲಿ ಎದುರಾಗಿರುವ ಸಣ್ಣಪುಟ್ಟ ಲೋಪದೋಷಗಳನ್ನು ಸರಿಪಡಿಸುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.
ತಂತಿಬೇಲಿಗಳ ದುರಸ್ತಿ: ಬೆಂ-ಮೈ ಹೈವೇಯ ಎಕ್ಸ್ ಪ್ರಸ್ ವೇಗೆ ಸರ್ವೀಸ್ ರಸ್ತೆಯಿಂದ ಯಾರೂ ಪ್ರವೇಶ ಪಡೆಯದಂತೆ ತಂತಿಬೇಲಿಯನ್ನು ಅಳವಡಿ ಸಲಾಗಿತ್ತು. ಸ್ಥಳೀಯರು ಕೆಲವೆಡೆ ಬೇಲಿಗೆ ಅಳವಡಿ ಸಿದ್ದ ತಂತಿಯನ್ನು ತುಂಡರಿಸಿ ಹೆದ್ದಾರಿ ದಾಟುತ್ತಿದ್ದರೆ ಮತ್ತೆ ಕೆಲವೆಡೆ ತಂತಿ ಬೇಲಿ ಕಿತ್ತು ಬಂದಿತ್ತು. ಇದೀಗ ಹಾಳಾಗಿರುವ ತಂತಿ ಬೇಲಿ ದುರಸ್ತಿಕಾರ್ಯವನ್ನು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪೊಲೀಸರ ಜೊತೆಗೂಡಿ ಕೈಗೊಂಡಿದ್ದಾರೆ.
ಎಡಿಜಿಪಿ ಭೇಟಿ: ಬೆಂ-ಮೈ ಹೆದ್ದಾರಿಯಲ್ಲಿ ಅಪಘಾತದಿಂದ 155ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿರುವ ಹಿನ್ನೆಲೆಯಲ್ಲಿ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಜೂ.27ರ ಮಂಗಳವಾರ ಹೆದ್ದಾರಿ ಪರಿಶೀಲನೆ ಮಾಡಲಿದ್ದಾರೆ. ಬೆಂಗಳೂರಿನಿಂದ ಮೈಸೂರು ವರೆಗೆ ಹೆದ್ದಾರಿ ಕಾಮಗಾರಿಯನ್ನು ಪರಿಶೀಲನೆ ನಡೆಸಿ ಅಪಘಾತಕ್ಕೆ ಕಾರಣವಾದ ಸ್ಥಳಗಳ ಬಗ್ಗೆ ಮಾಹಿತಿ ಸಂಗ್ರಹಿಸಲಿದ್ದಾರೆ.
ಸರ್ವೀಸ್ ರಸ್ತೆಗಳಲ್ಲೂ ಸುಧಾರಣೆಗೆ ಆದ್ಯತೆ: ಬೆಂ-ಮೈ ನಡುವಿನ ಎಕ್ಸ್ಪ್ರೆಸ್ ಹೈವೇ ಅವ್ಯವಸ್ಥೆಯ ಜೊತೆಗೆ ಸರ್ವೀಸ್ರಸ್ತೆಯಲ್ಲಿನ ಸಮಸ್ಯೆಗಳನ್ನು ಸರಿಪಡಿಸಲು ಆದ್ಯತೆ ನೀಡಲಾಗಿದೆ. ಕೆಲವೆಡೆ ಹಂಪ್ಗ್ಳನ್ನು ಅಳವಡಿಸುವುದು, ಬಿಳಿಪಟ್ಟೆಗಳನ್ನು ಬಳೆಯುವುದು ಸೇರಿ ದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರಯಾ ಣಿಕರ ಸುಕ್ಷತೆಗೆ ಸ್ಥಳೀಯವಾಗಿ ತೆಗೆದುಕೊಳ್ಳ ಬಹು ದಾದ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳುತ್ತಿದ್ದಾರೆ.
ಪ್ರಯಾಣಿಕರಲ್ಲಿ ಜಾಗೃತಿ: ಹೆದ್ದಾರಿಯಲ್ಲಿ ಸಂಭವಿಸು ತ್ತಿರುವ ಅಪಘಾತಗಳ ನಿಯಂತ್ರಣದ ಹಿನ್ನೆಲೆಯಲ್ಲಿ ಚಾಲಕರಿಗೆ ಟೋಲ್ಪ್ಲಾಜಾ ಬಳಿಯೇ ಅರಿವು ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕಣ್ಕಿಣಕಿ ಬಳಿ ಇರುವ ಟೋಲ್ಪ್ಲಾಜಾ ಬಳಿ ನಿಯೋಜಿಸಿ ಚಾಲಕರಿಗೆ ಕರಪತ್ರ ಹಂಚುವ ಮೂಲಕ ಹಾಗೂ ಸುರಕ್ಷತೆಯ ಬಗ್ಗೆ ತಿಳಿಹೇಳುವ ಮೂಲಕ ಅರಿವು ಮೂಡಿಸಲಾಗುತ್ತಿದೆ. ಬೆಂ-ಮೈ ದಶಪಥ ರಸ್ತೆ ಅವ್ಯವಸ್ಥೆಗೆ ಸಂಬಂಧಿ ಸಿದಂತೆ ಉದಯವಾಣಿ ಸರಣಿ ಲೇಖನ ಪ್ರಕಟಿಸುವ ಮೂಲಕ ಸಂಬಂಧಿಸಿದವರನ್ನು ಎಚ್ಚರಿಸುವ ಕೆಲಸ ಮಾಡಿತ್ತು. ವರದಿ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಹೆದ್ದಾರಿ ಸಮಸ್ಯೆಯ ಬಗ್ಗೆ ಗಂಭೀರವಾಗಿ ಚಿಂತಿಸಿ ಪರಿಹಾರ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಹೆದ್ದಾರಿ ಅಧಿಕಾರಿಗಳ ಪ್ರತ್ಯೇಕ ಸಭೆ ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳಿಗೆ ಸಂಬಂಧಿಸಿದಂತೆ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ(ಆರ್ಒ) ಯೋಜನಾ ನಿರ್ದೇಶಕರು ಸೇರಿದಂತೆ ವಿವಿಧ ಅಧಿಕಾರಿಗಳ ಸಭೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮುಂದಿನ ಒಂದು ವಾರದಲ್ಲಿ ಕರೆದಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಈ ಸಭೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳು, ಹೆದ್ದಾರಿ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಸೇರಿದಂತೆ ಪ್ರಮುಖ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಎಕ್ಸ್ಪ್ರೆಸ್ ಹೈವೇಯಲ್ಲಿ ಕಾಮಗಾರಿ ವೈಫಲ್ಯದ ಬಗ್ಗೆ ಚರ್ಚಿಸಿ ಸೂಕ್ತ ಕ್ರಮಕ್ಕೆ ನಿರ್ಧಾರ ತೆಗೆದುಕೊಳ್ಳಲಿರುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Ibbani Tabbida Ileyali 50 ಸ್ಕ್ರೀನ್ನಿಂದ 200 ಸ್ಕ್ರೀನ್ವರೆಗೆ…
Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?
Hangyo Ice Cream: ಬಿಗ್ಬಾಸ್ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್ಕ್ರೀಂ!
Mangaluru: ಸೆನ್ ಪೊಲೀಸ್ ಠಾಣೆಗಳು ಮೇಲ್ದರ್ಜೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.