ಅಭಿವೃದ್ಧಿಗೆ ಮುಂದಿನ 15 ದಿನಗಳೊಳಗೆ ಅನುದಾನ


Team Udayavani, Jun 27, 2023, 1:13 PM IST

tdy-12

ಕೆ.ಆರ್‌.ನಗರ: ಪಟ್ಟಣದ ಅಭಿವೃದ್ಧಿಗೆ ಪುರಸಭೆಗೆ ವಿಶೇಷ ಅನುದಾನ ನೀಡುವಂತೆ ಪೌರಾಡಳಿತ ಸಚಿವ ರಹೀಂಖಾನ್‌ರವರಿಗೆ ಮನವಿ ಸಲ್ಲಿಸಲಾಗಿದ್ದು, ಮುಂದಿನ 15 ದಿನಗಳೊಳಗೆ ಅನುದಾನ ಮಂಜೂರಾಗಲಿದೆ. ಆ ನಂತರ ಅಗತ್ಯ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತದೆ ಎಂದು ಶಾಸಕ ಡಿ.ರವಿಶಂಕರ್‌ ಹೇಳಿದರು.

ನಗರದ 17ನೇ ವಾರ್ಡಿನ ವರಸಿದ್ಧಿ ವಿನಾಯಕ ಸೇವಾ ಸಮಿತಿಯಿಂದ ನಡೆದ 20ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಪೌರಾಡಳಿತ ಇಲಾಖೆಯಿಂದ ಬರುವ ಅನುದಾನದಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾದ ಮತ್ತು ಹೊಸ ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಆದ್ಯತೆ ನೀಡುವಂತೆ ಪುರಸಭೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಹೈಮಾಸ್ಕ್ ದೀಪ ಅಳವಡಿಸಲು ಅನುದಾನ: ಈ ದೇವಾಲಯದ ಸುತ್ತ ತಡೆಗೋಡೆ ನಿರ್ಮಾಣ ಮಾಡಿ ಮತ್ತು ಹೈಮಾಸ್ಕ್ ದೀಪ ಅಳವಡಿಸಲು ಅನುದಾನ ನೀಡಲಾಗುತ್ತದೆ ಎಂದು ಭರವಸೆ ನೀಡಿದ ಶಾಸಕರು, ಕನಕನಗರ, ಟೆಲಿಕಾಂ ಬಡಾವಣೆ, ಸಕ್ಕರೆ ನಗರದ ಜನತೆಗೆ ಎಲ್ಲಾ ರೀತಿಯ ಮೂಲಸೌಕರ್ಯಗಳನ್ನು ಒದಗಿಸಲು ಬದ್ಧನಾಗಿದ್ದು, ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಮತ್ತೆ ಅನುದಾನ ಬಿಡುಗಡೆ: ಹೊಸ ಬಡಾವಣೆ ಯಾಗಿರುವ 17ನೇ ವಾರ್ಡಿನ ಅಭಿವೃದ್ಧಿಗೆ ಒಂದು ಕೋಟಿ ರೂಗಳನ್ನು ಬಿಜೆಪಿ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದ ಎಂಟಿಬಿ ನಾಗರಾಜ್‌ ರವರು ಮಂಜೂರು ಮಾಡಿಸಿದ್ದರು. ಸ್ಥಳೀಯ ಶಾಸಕರಾಗಿದ್ದವರು ಕಾರಣಕ್ಕಾಗಿ ಅನುದಾನ ತಡೆ ಹಿಡಿಸಿದ್ದರು. ಈ ಅನುದಾನವನ್ನು ಮತ್ತೆ ಬಿಡುಗಡೆ ಮಾಡಿಸಲಾಗಿದ್ದು, ಇದರಿಂದ ಬಡಾವಣೆ ಸಮಗ್ರ ವಾಗಿ ಅಭಿವೃದ್ಧಿ ಕಾಣಲಿದೆ ಎಂದು ತಿಳಿಸಿದರು.

ಎಲ್ಲಾ ವಾರ್ಡುಗಳಲ್ಲೂ ಒಳಚರಂಡಿ ವ್ಯವಸ್ಥೆ: ಹೊಸ ಬಡಾವಣೆಗಳು ಸೇರಿದಂತೆ ಪುರಸಭೆಯ ಎಲ್ಲಾ ವಾರ್ಡುಗಳಲ್ಲೂ ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಅನುವು ಮಾಡಿಕೊಡಲಾಗುತ್ತದೆ. ನಮ್ಮ ಸರ್ಕಾರವೇ ರಾಜ್ಯದಲ್ಲಿ ಅಧಿಕಾರದಲ್ಲಿದ್ದು, ನಗರದ ಜನತೆಗೆ ಮತ್ತಷ್ಟು ಸೌಲಭ್ಯಗಳನ್ನು ಕಲ್ಪಿಸಲು ಪುರಸಭೆಯನ್ನು ನಗರ ಸಭೆಯನ್ನಾಗಿ ಮೇಲ್ದರ್ಜೆ ಗೇರಿಸಲಾಗುತ್ತದೆ ಎಂದು ಪ್ರಕಟಿಸಿದರು.

ಕಾಂಗ್ರೆಸ್‌ ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಲಾದ ಐದು ಗ್ಯಾರಂಟಿಗಳನ್ನು ಈಡೇರಿಸಲು ಬದ್ಧವಾಗಿದ್ದು, ಈಗಾಗಲೇ ಗೃಹ ಜ್ಯೋತಿ ಮತ್ತು ಶಕ್ತಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಜನರ ಮೆಚ್ಚುಗೆ ಪಡೆಯುವಲ್ಲಿ ಸರ್ಕಾರ ಯಶಸ್ವಿಗೊಂಡಿದೆ. ಮೂರನೆಯ ಗ್ಯಾರಂಟಿ ಗೃಹ ಲಕ್ಷ್ಮಿಗೆ ಮಂಗಳವಾರ ದಿಂದ ಅರ್ಜಿ ಸಲ್ಲಿಸುವ ಮೂಲಕ ಮನೆಯೊಡತಿ ಇದರ ಲಾಭ ಪಡೆಯಬೇಕು ಎಂದು ಮನವಿ ಮಾಡಿದ ಶಾಸಕರು ಜುಲೈ ತಿಂಗಳಿನಿಂದ ಪಡಿತರದಾರರಿಗೆ ತಲಾ 10 ಕೆ.ಜಿ. ಅಕ್ಕಿ ವಿತರಿಸಲಾಗುತ್ತದೆ ಎಂದು ವಿವರಿದರು.

ಕೇಂದ್ರದ ಬಿಜೆಪಿ ಸರ್ಕಾರ ಅನಗತ್ಯ ತೊಂದರೆ ನೀಡಿದರೂ ಸಹ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸುವುದರ ಜತೆಗೆ ಉತ್ತಮ ಆಡಳಿತ ನೀಡಲಿದೆ. ಇದರಲ್ಲಿ ಜನತೆ ವಿಶ್ವಾಸ ಇಡಬೇಕು ಎಂದು ಕೋರಿದ ಶಾಸಕ ಡಿ.ರವಿಶಂಕರ್‌ ಸಾಲಿಗ್ರಾಮ ಮತ್ತು ಕೆ.ಆರ್‌.ನಗರ ತಾಲೂಕುಗಳ ಸಮಗ್ರವಾಗಿ ಅಭಿವೃದ್ಧಿಪಡಿಸಲು ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ಜಾತಿ ಕೇಳಿ ಕೆಲಸ ಮಾಡಬಾರದು: ವಿಧಾನ ಪರಿಷತ್‌ ಸದಸ್ಯ ಅಡಗೂರುಎಚ್‌.ವಿಶ್ವನಾಥ್‌ ಮಾತನಾಡಿ, ಐದು ವರ್ಷಗಳ ಕಾಲ ಶಾಸಕರಾಗಿ ದ್ದವರು ತಾರತಮ್ಯ ರಾಜಕಾರಣ ಮಾಡಿದ್ದಕ್ಕಾಗಿ 27,242 ಮತಗಳ ಅಂತರದಿಂದ ಸೋಲು ಕಾಣ ಬೇಕಾಯಿತು. ತಾವು ಈ ರೀತಿಯ ರಾಜಕಾರಣ ಮಾಡಬಾರದು ಎಂದು ಸಲಹೆ ನೀಡಿದರಲ್ಲದೆ ಸದಾ ಜನರೊಟ್ಟಿಗ್ಗಿದ್ದು ಎರಡೂ ತಾಲೂಕು ಗಳಲ್ಲಿರುವ ಜನತೆಯ ಸಮಸ್ಯೆಯನ್ನು ಆಲಿಸು ವಂತಾಗಬೇಕು. ಯಾವುದೇ ಕಾರಣಕ್ಕೂ ಜಾತಿ ಕೇಳಿ ಕೆಲಸ ಮಾಡಬಾರದು ಎಂದು ಹೇಳಿದರು.

ಜಿಪಂ ಮಾಜಿ ಸದಸ್ಯ ಜಿ.ಆರ್‌.ರಾಮೇಗೌಡ, ಹುಣಸೂರು ತಾಲೂಕು ಕುರುಬರ ಸಂಘದ ಅಧ್ಯಕ್ಷ ಕುನ್ನೇಗೌಡ, ದೇವಾಲಯ ಸೇವಾ ಸಮಿತಿ ಅಧ್ಯಕ್ಷ ಬಿ.ಎಂ.ನಾಗರಾಜು ಇತರರು ಇದ್ದರು.

ಟಾಪ್ ನ್ಯೂಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

janaka kannada movie

Sandalwood: ತಂದೆ-ಮಗನ ಕಥಾಹಂದರ ʼಜನಕʼ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

9

Chikodi: ಆರೋಗ್ಯ ವೃದ್ಧಿಗೆ ಪೌಷ್ಟಿಕ ಆಹಾರ ಅಗತ್ಯ; ಸಚಿವ ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.