![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jun 27, 2023, 6:03 PM IST
ಲಖನೌ: ಅಲಹಾಬಾದ್ ಹೈಕೋರ್ಟ್ ಇಂದು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಆರೋಪ ಹೊತ್ತಿರುವ ‘ಆದಿಪುರುಷ್’ ಚಿತ್ರದ ಡೈಲಾಗ್ ಗಳ ಬಗ್ಗೆ ನಿರ್ಮಾಪಕರನ್ನು ತರಾಟೆಗೆ ತೆಗೆದುಕೊಂಡಿತು.
ಈ ಪ್ರಕರಣದಲ್ಲಿ ಸಹ ಬರಹಗಾರ ಮನೋಜ್ ಮುಂತಶಿರ್ ಶುಕ್ಲಾ ಅವರನ್ನು ಕಕ್ಷಿದಾರರನ್ನಾಗಿ ಮಾಡುವಂತೆ ನ್ಯಾಯಾಲಯ ಸೂಚಿಸಿದ್ದು, ಒಂದು ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ.
ಹಿಂದೂ ಮಹಾಕಾವ್ಯ ರಾಮಾಯಣವನ್ನು ಆಧರಿಸಿದ ಪೌರಾಣಿಕ ಸಾಹಸಮಯ ಚಿತ್ರ ಎಂದು ಹೇಳಿಕೊಳ್ಳುವ ‘ಆದಿಪುರುಷ್’ ಸಿನಿಮಾವನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.
ಚಿತ್ರದಲ್ಲಿ ಸಂಭಾಷಣೆಗಳ ಸ್ವರೂಪ ದೊಡ್ಡ ಸಮಸ್ಯೆಯಾಗಿದೆ. ರಾಮಾಯಣ ನಮಗೆ ಒಂದು ಮಾದರಿ. ಜನರು ಮನೆಯಿಂದ ಹೊರಡುವ ಮೊದಲು ರಾಮಚರಿತಮಾನಸವನ್ನು ಓದುತ್ತಾರೆ. ಸಿನಿಮಾಗಳು ಕೆಲವು ವಿಚಾರಗಳನ್ನು ಮುಟ್ಟಬಾರದು ಎಂದು ಕೋರ್ಟ್ ಹೇಳಿದೆ.
ಚಲನಚಿತ್ರ ಪ್ರಮಾಣೀಕರಣ ಪ್ರಾಧಿಕಾರವು (ಸೆನ್ಸಾರ್ ಮಂಡಳಿ) ತನ್ನ ಜವಾಬ್ದಾರಿಯನ್ನು ಪೂರೈಸಿದೆಯೇ ಎಂದು ಅಲಹಾಬಾದ್ ಹೈಕೋರ್ಟ್ ಪ್ರಶ್ನಿಸಿದೆ.
ಇದನ್ನೂ ಓದಿ:Airport: ಕಸ್ಟಮ್ಸ್ ಅಧಿಕಾರಿಗಳೆಂದು ನಂಬಿಸಿ ವ್ಯಕ್ತಿಗೆ ಲಕ್ಷಾಂತರ ರೂ. ಪಂಗನಾಮ !
“ಸಿನಿಮಾ ನೋಡಿದ ಜನರು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದಿರುವುದು ಒಳ್ಳೆಯದು. ಹನುಮಂತ ಮತ್ತು ಸೀತೆಯನ್ನು ಏನೂ ಇಲ್ಲದಂತೆ ತೋರಿಸಲಾಗಿದೆ. ಈ ವಿಷಯಗಳನ್ನು ಮೊದಲಿನಿಂದಲೂ ತೆಗೆದು ಹಾಕಬೇಕಾಗಿತ್ತು. ಕೆಲವು ದೃಶ್ಯಗಳು “ಎ ವರ್ಗ” (ವಯಸ್ಕ) ಎಂದು ತೋರಿಸಲಾಗಿದೆ. ಅಂತಹ ಚಲನಚಿತ್ರಗಳನ್ನು ವೀಕ್ಷಿಸುವುದು ತುಂಬಾ ಕಷ್ಟ” ಎಂದು ನ್ಯಾಯಾಲಯವು ಗಮನಿಸಿತು.
ಚಿತ್ರದಿಂದ ಆಕ್ಷೇಪಾರ್ಹ ಸಂಭಾಷಣೆಗಳನ್ನು ತೆಗೆದುಹಾಕಲಾಗಿದೆ ಎಂದು ಡೆಪ್ಯುಟಿ ಸಾಲಿಸಿಟರ್ ಜನರಲ್ ನ್ಯಾಯಾಲಯಕ್ಕೆ ತಿಳಿಸಿದ್ದು, ಇದಕ್ಕೆ ಸೆನ್ಸಾರ್ ಮಂಡಳಿಯು ಏನು ಮಾಡುತ್ತಿದೆ ಎಂದು ಪೀಠ ಕೇಳಿತು.
“ಅದು ಮಾತ್ರ ಕೆಲಸ ಮಾಡುವುದಿಲ್ಲ, ನೀವು ದೃಶ್ಯಗಳನ್ನು ಏನು ಮಾಡುತ್ತೀರಿ? ನಾವು ಏನು ಮಾಡಬೇಕೆಂದು ಬಯಸುತ್ತೇವೆಯೋ ಅದನ್ನು ನಾವು ಖಂಡಿತವಾಗಿ ಮಾಡುತ್ತೇವೆ. ಒಂದು ವೇಳೆ ಚಿತ್ರದ ಪ್ರದರ್ಶನವನ್ನು ನಿಲ್ಲಿಸಿದರೆ, ಆಗ ಯಾರ ಭಾವನೆಗಳಿಗೆ ನೋವಾಗಿದೆಯೋ ಅವರಿಗೆ ಪರಿಹಾರ ಸಿಗುತ್ತದೆ’’ ಎಂದು ನ್ಯಾಯಾಲಯ ಹೇಳಿದೆ.
ಚಿತ್ರದಲ್ಲಿ ಸೂಚನೆ (disclaimer) ಸೇರಿಸಲಾಗಿದೆ ಎಂಬ ಪ್ರತಿವಾದಿಗಳ ವಾದಕ್ಕೆ ಸಂಬಂಧಿಸಿದಂತೆ ಪೀಠವು, “ನೀವು ಚಿತ್ರದಲ್ಲಿ ಭಗವಾನ್ ರಾಮ, ಲಕ್ಷ್ಮಣ, ರಾವಣ, ಲಂಕಾ ಮತ್ತು ಹನುಮಂತ ದೇವರನ್ನು ತೋರಿಸುತ್ತೀರಿ. ನಂತರ ಅದು ರಾಮಾಯಣವಲ್ಲ ಎಂದು ಹೇಳುತ್ತಿದ್ದೀರಿ? ಸೂಚನೆ ಹಾಕುವ ಮೂಲಕ ಜನರು, ದೇಶವಾಸಿಗಳು ಮತ್ತು ಯುವಕರನ್ನು ಬುದ್ಧಿಹೀನರು ಎಂದು ಪರಿಗಣಿಸುತ್ತಿದ್ದೀರಾ?” ಎಂದು ಕೋರ್ಟ್ ಖಾರವಾಗಿ ಪ್ರಶ್ನಿಸಿದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.