ರಾಜ್ಯ ಸರ್ಕಾರ ಬಿಟ್ ಕಾಯಿನ್ ಹಗರಣವನ್ನು ಮರು ತನಿಖೆ ನಡೆಸಲಿ: ಆರಗ ಜ್ಞಾನೇಂದ್ರ


Team Udayavani, Jun 27, 2023, 8:06 PM IST

ರಾಜ್ಯ ಸರ್ಕಾರ ಬಿಟ್ ಕಾಯಿನ್ ಹಗರಣವನ್ನು ಮರು ತನಿಖೆ ನಡೆಸಲಿ: ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ರಾಜ್ಯ ಸರ್ಕಾರ ಬಿಟ್ ಕಾಯಿನ್ ಹಗರಣವನ್ನು ಮತ್ತೆ ಮರು ತನಿಖೆಗೆ ಮಾಡಲಿ. ಎಲ್ಲಾ ರೀತಿಯಲ್ಲೂ ತನಿಖೆ ಮಾಡಲಿ ಯಾರು ಅಪರಾಧಿಗಳಿದ್ದಾರೋ ಅವರಿಗೆ ಶಿಕ್ಷೆಯಾಗಲಿ. ಪಿಎಸ್ಐ ಪ್ರಕರಣದ ತನಿಖೆ ಈಗಾಗಲೇ ಮುಕ್ತಾಯವಾಗಿದೆ. ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಹ ಸಲ್ಲಿಕೆಯಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಏನಾಗುತ್ತದೆಯೋ ಗೊತ್ತಿಲ್ಲ. ಕೋರ್ಟ್ ನಲ್ಲಿ ಎಲ್ಲವೂ ನಿರ್ಧಾರವಾಗಲಿದೆ. ಈ ಪ್ರಕರಣಕ್ಕೆ‌ ಸಂಬಂಧಿಸಿದ ಆರೋಪಿಗಳೆಲ್ಲರೂ ಜೈಲಿನಲ್ಲಿದ್ದಾರೆ ಎಂದು ಮಾಜಿ ಗೃಹ ಸಚಿವ ಆರಗ  ಹೇಳಿದರು.

ಮಂಗಳವಾರ ಶಿಕ್ಷಣ ಸಚಿವರ ಪಿಎಲ್ ಡಿ ಸಭೆಗೂ ಮುನ್ನ ಮಾಧ್ಯಮದವರ ಜೊತೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಹಾಗೂ ನಮ್ಮ ಸರ್ಕಾರದ ಅವಧಿಯ ಎಲ್ಲ ಯೋಜನೆಗಳ ಬಗ್ಗೆ ತನಿಖೆ ನಡೆಸಲಿ. ಅದನ್ನು ಬಿಟ್ಟು ಏನೋ ಮಾಡುತ್ತೇವೆ ಎಂದು ಹೆದರಿಸುವುದನ್ನು ಬಿಟ್ಟು ಮೊದಲು ತನಿಖೆ ನಡೆಸಲಿ. ಹಳ್ಳಿಯಲ್ಲಿ ಒಂದು ಗಾದೆಯಿದೆ ತಟ್ಟಿಬಡಿದು ಇಲಿ ಹೆದರಿಸಿದರು ಎಂದು ಹಾಗಾಗುವುದು ಬೇಡ. ಒಟ್ಟಾರೆಯಾಗಿ ವ್ಯವಸ್ಥೆ ಚನ್ನಾಗಾಗಲಿ ಎಂಬುದು ನಮ್ಮ ಉದ್ದೇಶ ಎಂದರು.

ರಾಜ್ಯ ಸರ್ಕಾರದ ಗ್ಯಾರಂಟಿ ಕೂಡಲೇ ಜಾರಿಗೊಳಿಸಬೇಕು. ಕೇಂದ್ರ‌ ಸರ್ಕಾರದಿಂದ ನೀಡುವ ಐದು ಕೆಜಿ ಅಕ್ಕಿ ಈ ತಿಂಗಳ ಕೊನೆವರೆಗೂ ನೀಡಲಿದ್ದೇವೆ. ರಾಜ್ಯ ಸರ್ಕಾರ ತನ್ನ ಪಾಲಿನ ಅಕ್ಕಿಯನ್ನು ಕೂಡಲೇ ನೀಡಲಿ. ಇಲ್ಲದಿದ್ದಲ್ಲಿ ವಿಧಾನಸೌಧದ ಒಳಗೆ ಹೊರಗೆ ಹೋರಾಟ ನಡೆಸುತ್ತೇವೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಆರಗ ಜ್ಞಾನೇಂದ್ರ ಹೆಸರು ಪ್ರಸ್ತಾಪ ವಿಚಾರ ಮಾತನಾಡಿ ಇದನ್ನು ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಲಿದೆ.
ನಮ್ಮ ಪಕ್ಷದ ಹಿರಿಯರು ತುರ್ತು ಪರಿಸ್ಥಿತಿಯಲ್ಲಿ ತಮ್ಮ ಮನೆ ಹಾಳು ಮಾಡಿಕೊಂಡು ಪಕ್ಷ ಕಟ್ಟಿದ್ದಾರೆ. ನಾವು ಒಂದು ಸೋಲಿಗೆ ದೃತಿಗೆಟ್ಟಿ ಪರಸ್ಪರ ಕೆಸರೆರಚಾಡಿಕೊಳ್ಳುವುದು ಸರಿಯಲ್ಲ‌. ಬದಲಿಗೆ ಪಕ್ಷದ ವೇದಿಕೆಯಲ್ಲಿ ಇದನ್ನು ಪ್ರಸ್ತಾಪ ಮಾಡಬೇಕು‌. ಸೋಲನ್ನು ನಾವು ಸರಿಯಾದ ರೀತಿಯಲ್ಲಿ ಸ್ವೀಕರಿಸಬೇಕು. ಈ ಚುನಾವಣೆಯಲ್ಲಿನ ಸೋಲು ಕೆಲವರನ್ನು ಅಲ್ಲಾಡಿಸಿದೆ. ಆದರೆ ಬಿಜೆಪಿಯನ್ನು ಅಲ್ಲಾಡಿಸಿಲ್ಲ.

ಬಿಜೆಪಿಯವರಿಗೆ ಹಿಂದೆ ಸೋಲು ಸ್ವಾಭಾವಿಕ ಗೆಲುವು ಆಕಸ್ಮಿಕವಾಗಿತ್ತು. ಹೀಗಾಗಿ ನಾವು ಸೋತಾಗ ಯಾವಾಗಲೂ ದೃತಿಗೆಟ್ಟಿಲ್ಲ ಎಂದರು.

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.