ಆಸ್ತಿ ವಿವರ ಸಲ್ಲಿಸದ ಜನಪ್ರತಿನಿಧಿಗಳಿಗೆ ಶಿಕ್ಷೆಯೂ ಇಲ್ಲ , ದಂಡವೂ ಇಲ್ಲ !

ಜನಪ್ರತಿನಿಧಿಗಳ ಆಸ್ತಿ ವಿವರ ಸಲ್ಲಿಕೆಗೆ ಜೂನ್‌ 30 ಕೊನೆಯ ದಿನ

Team Udayavani, Jun 28, 2023, 7:30 AM IST

politi

ಬೆಂಗಳೂರು: ಚುನಾಯಿತ ಜನಪ್ರತಿನಿಧಿ ಗಳು ಲೋಕಾಯುಕ್ತ ಸಂಸ್ಥೆಗೆ ಕಡ್ಡಾಯವಾಗಿ ಪ್ರತೀ ವರ್ಷ ಆಸ್ತಿ ವಿವರ ಸಲ್ಲಿಸಬೇಕೆಂಬ ನಿಯಮವಿದ್ದರೂ ಅದನ್ನು ಬಹುತೇಕರು ಪಾಲಿಸುತ್ತಿಲ್ಲ. ಇದಕ್ಕೆ ಕಾರಣ ಇದೆ: ಆಸ್ತಿ ವಿವರ ಸಲ್ಲಿಸದೆ ಇದ್ದರೆ ಶಿಕ್ಷೆಯೂ ಇಲ್ಲ, ದಂಡವೂ ಇಲ್ಲ. ಹೀಗಾಗಿ ಜನಪ್ರತಿನಿಧಿಗಳು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ.

ಈ ನಿಯಮ ಕೇವಲ ನಾಮ್‌ ಕೇ ವಾಸ್ತೆಗೆ ಜಾರಿಯಲ್ಲಿದ್ದು, ಸರಕಾರವು ಇದಕ್ಕೆ ತಿದ್ದುಪಡಿ ತರುವ ಅಗತ್ಯ ಇದೆ ಎಂಬುದು ಬಹುಜನರ ವಾದ.

ವಿವರ ಸಲ್ಲಿಸದಿದ್ದರೆ ಏನಾಗುತ್ತದೆ?
ಲೋಕಾಯುಕ್ತ ಸಂಸ್ಥೆಗೆ ಜನಪ್ರತಿನಿಧಿಗಳು ಆಸ್ತಿ ವಿವರ ಸಲ್ಲಿಸದಿದ್ದರೆ ಲೋಕಾಯುಕ್ತರು ಈ ವಿಚಾರವನ್ನು ಸರಕಾರದ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರುತ್ತಾರೆ. ಬಳಿಕ ನೋಟಿಸ್‌ ಜಾರಿಗೊಳಿಸಿ ಆಸ್ತಿ ವಿವರ ಸಲ್ಲಿಕೆಗೆ ಕಾಲಾವಕಾಶ ನೀಡಲಾಗುತ್ತದೆ. ನಿಗದಿತ ಕಾಲಾವಕಾಶದಲ್ಲಿ ವಿವರ ಸಲ್ಲಿಸದಿದ್ದರೆ ಲೋಕಾಯುಕ್ತ ಸಂಸ್ಥೆಯಿಂದ ಜನಪ್ರತಿನಿಧಿಗೆ ಹಲವು ಬಾರಿ ನೋಟಿಸ್‌ ಜಾರಿಗೊಳಿಸಲಾಗುತ್ತದೆ. ನೋಟಿಸ್‌ಗೂ ಪ್ರತಿಕ್ರಿಯೆ ನೀಡದಿದ್ದಲ್ಲಿ ಅಂತಹ ಜನಪ್ರತಿನಿಧಿಗಳ ಹೆಸರನ್ನು ರಾಜ್ಯ ಮಟ್ಟದ ಮೂರು ದಿನಪತ್ರಿಕೆಗಳಲ್ಲಿ ಪ್ರಕಟಿಸಲಾಗುತ್ತದೆ. ಇದಕ್ಕೂ ಬಗ್ಗದಿದ್ದರೆ ಇಂತಹ ಜನಪ್ರತಿನಿಧಿಗಳು ಆಸ್ತಿ ವಿವರ ಸಲ್ಲಿಸದಿರುವ ವಿಚಾರವನ್ನು ರಾಜ್ಯಪಾಲರ ಗಮನಕ್ಕೆ ತರುತ್ತಾರೆ. ರಾಜ್ಯಪಾಲರು ಸಂಬಂಧಿಸಿದ ಜನಪ್ರತಿನಿಧಿಗಳ ವಿವರಗಳನ್ನು ಸದನದ ಮುಂದೆ ತರುತ್ತಾರೆ. ಸದನದಲ್ಲಿ ಆಸ್ತಿ ವಿವರ ಸಲ್ಲಿಸುವಂತೆ ಸೂಚಿಸಲಾಗುತ್ತದೆ. ಇದನ್ನು ಹೊರತುಪಡಿಸಿದರೆ ಆಸ್ತಿ ವಿವರ ಸಲ್ಲಿಸದ ಜನಪ್ರತಿನಿಧಿಗಳಿಗೆ ಯಾವ ಶಿಕ್ಷೆಯೂ ಆಗುವುದಿಲ್ಲ.

ಶೇ. 70ರಷ್ಟು ಮಂದಿ ವಿವರ ಸಲ್ಲಿಸುವುದಿಲ್ಲ
ಇದುವರೆಗೆ ಕೇವಲ ನಾಲ್ವರು ಚುನಾಯಿತ ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸಿದ್ದಾರೆ. ಜೂ. 30 ಕೊನೆಯ ದಿನವಾದರೂ ಪ್ರತೀ ವರ್ಷ ಶೇ. 70ರಷ್ಟು ಶಾಸಕರು, ಎಂಎಲ್‌ಸಿಗಳು ಆಸ್ತಿ ವಿವರ ಸಲ್ಲಿಸಲು ಹಿಂದೇಟು ಹಾಕುತ್ತಾರೆ. ಆದರೆ ಈ ಬಾರಿ ಲೋಕಾಯುಕ್ತ ಬಿ.ಎಸ್‌. ಪಾಟೀಲ್‌ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಕಳೆದ ವರ್ಷ 60 ಶಾಸಕರು ಆಸ್ತಿ ವಿವರ ಸಲ್ಲಿಸಿಲ್ಲ
ಕಳೆದ ವರ್ಷ 60 ಶಾಸಕರು ಹಾಗೂ 36 ವಿಧಾನ ಪರಿಷತ್‌ ಸದಸ್ಯರು ತಮ್ಮ ಆಸ್ತಿ ವಿವರ ಸಲ್ಲಿಸಿರಲಿಲ್ಲ. ಈ ಪೈಕಿ ಈಗ ಕೆಲವರು ಸಚಿವರಾಗಿದ್ದರೆ, ಇನ್ನು ಕೆಲವರು ಪ್ರಭಾವಿ ರಾಜಕಾರಣಿಗಳು ಎಂದು ತಿಳಿದು ಬಂದಿದೆ.

ಕಾಯ್ದೆಯಲ್ಲಿ ಯಾವುದೇ ವ್ಯಕ್ತಿ ನಿರ್ದಿಷ್ಟ ಮಾಹಿತಿ ಕೊಡಬೇಕು ಎಂಬ ಆದೇಶವಿದ್ದರೆ ಅದನ್ನು ಆತ ನೀಡಬೇಕಾಗುತ್ತದೆ. ಕಾನೂನಿನ ನಿಯಮದ ಪ್ರಕಾರ ಆಸ್ತಿ ವಿವರ ಸಲ್ಲಿಸದಿದ್ದರೆ ಅಂತಹ ಜನಪ್ರತಿನಿಧಿಗಳಿಗೆ ಶಿಕ್ಷೆ ಆಗಬೇಕು ಎಂಬುದು ನನ್ನ ಅಭಿಪ್ರಾಯ.
– ನ್ಯಾ| ಸಂತೋಷ್‌ ಹೆಗ್ಡೆ (ನಿವೃತ್ತ ), ಮಾಜಿ ಲೋಕಾಯುಕ್ತ

ರಾಜ್ಯದ ಎಲ್ಲ ಶಾಸಕರೂ ಜೂ. 30ರೊಳಗೆ ಆಸ್ತಿ ವಿವರ ಸಲ್ಲಿಸಬೇಕು. ಸಲ್ಲಿಸದಿದ್ದರೆ ಅಂತಹ ಶಾಸಕರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಕಾನೂನಿನ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು.
-ಬಿ.ಎಸ್‌. ಪಾಟೀಲ್‌, ಲೋಕಾಯುಕ್ತ

~ ಅವಿನಾಶ ಮೂಡಂಬಿಕಾನ

ಟಾಪ್ ನ್ಯೂಸ್

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

mbಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

5

Shambhavi ಹೊಳೆಗೆ ಬಿದ್ದು ಬಾಲಕ ಸಾವು-ನಾಲ್ಕು ಮಂದಿ ಮಕ್ಕಳು ತೆರಳಿದ್ದ ವೇಳೆ ಘಟನೆ

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.