ದಶಕ ಕಳೆದರೂ ವಾಕಿಂಗ್‌ ಟ್ರ್ಯಾಕ್‌ ಅಪೂರ್ಣ 


Team Udayavani, Jun 28, 2023, 2:37 PM IST

ದಶಕ ಕಳೆದರೂ ವಾಕಿಂಗ್‌ ಟ್ರ್ಯಾಕ್‌ ಅಪೂರ್ಣ 

ಬಂಗಾರಪೇಟೆ: ಸಾರ್ವಜನಿಕರು ಬಹಳ ವರ್ಷ ಗಳಿಂದ ನಿರೀಕ್ಷಿಸುತ್ತಿರುವ ವಾಯುವಿಹಾರ ಪಥ ನಿರ್ಮಾಣ ಕಾಮಗಾರಿ ಹತ್ತು ವರ್ಷಗಳಿಂದ ತೆವಳುತ್ತಾ ಸಾಗುತ್ತಿದ್ದರೂ, ಪುರಸಭೆ ಕಣ್ಣಿದ್ದೂ ಕುರುಡಂತೆ ವರ್ತಿಸುತ್ತಿರುವುದರಿಂದ ಯೋಜನೆ ಹಳ್ಳ ಹಿಡಿದಿದೆ.

ಪಟ್ಟಣದ ಜನಸಂಖ್ಯೆ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಜನಸಂಖ್ಯೆಗೆ ಅಣುಗುಣವಾಗಿ ವಾಯುವಿಹಾರಕ್ಕೆ ಹೋಗಲು ಸ್ಥಳಾವಕಾಶ ಕೊರತೆಯಿಂದ ಜನರು ಪರದಾಡುವಂತಾಗಿದೆ. ಉದ್ಯಾನವನಗಳೂ ಸಹ ಇಲ್ಲದೆ ಸಂಜೆ ಮಕ್ಕಳನ್ನು ಆಟವಾಡಿಸಲು ಉದ್ಯಾನವನವಿಲ್ಲದೆ ಪರಿತಪಿಸು ತ್ತಿದ್ದಾರೆ‌. ಇದ್ದ ಏಕೈಕ ಪಟ್ಟಾಭಿಶೇಕೋದ್ಯನವನವನ್ನು ನವೀಕರಿಸಿ ಸಾರ್ವಜನಿಕರ ಉಪಯೋಗಕ್ಕೆ ಬಿಡಲಾಗಿದೆ. ಆದರೆ, ಅದು ತುಂಬಾ ಚಿಕ್ಕದಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಬಂದರೆ ಮತ್ತೆ ಪರದಾಟ ತಪ್ಪಿದ್ದಲ್ಲ.

ವಾಯು ವಿಹಾರಿಗಳಿಗಿಲ್ಲ ಸೂಕ್ತ ಸ್ಥಳ: ಪಟ್ಟಣದ ಹೊರವಲಯದ ರೈಲ್ವೆಗೇಟ್‌ ಬಳಿ ಇಂದಿರಾ ಟ್ರೀ ಪಾರ್ಕ್‌ ನಿರ್ಮಾಣವಾಗಿದೆ.ಅಲ್ಲಿ ಎಲ್ಲಾ ವ್ಯವಸ್ಥೆ ಇದ್ದರೂ 3ಕಿ.ಮೀ ಕ್ರಮಿಸಿ ಮಕ್ಕಳು ಆಟವಾಡಲು ಹೋಗಲು ತೊಂದರೆಯಾಗಿದೆ. ಮುಂಜಾನೆ ಮತ್ತು ಸಂಜೆ ವೇಳೆ ಜನರಿಗೆ ವಾಯುವಿಹಾರ ಮಾಡಲು ಸ್ಥಳವಿಲ್ಲದೆ ರಸ್ತೆಗಳಲ್ಲೆ ಇಲ್ಲ. ದೂರದ ಪ್ರದೇಶಕ್ಕೆ ಹೋಗಿ ಮಾಡುವಂತಾಗಿದೆ. ಇದನ್ನು ಗಮನಿಸಿದ ಪುರಸಭೆ ಪಟ್ಟಣದ ದೊಡ್ಡಕೆರೆ ಸುತ್ತಲೂ ಪೆನ್ಷಿಂಗ್‌ ಅಳವಡಿಸಿ ಅಲ್ಲಿ ವಾಕಿಂಗ್‌ ಟ್ರ್ಯಾಕ್‌ ನಿರ್ಮಾಣ ಮಾಡಲು ಯೋಜನೆ ರೂಪಿಸಿ 10ವರ್ಷಗಳೇ ಕಳೆದಿದೆ. ಆದರೆ ಯಾಕೋ ಏನೋ ಯೋಜನೆ ಪೂರ್ಣಗೊಂಡು ಜನರ ಬಳಕೆಗೆ ಮಾತ್ರ ಅವಕಾಶ ದೊರೆಯದೆ ಯೋಜನೆಗೆ ಗ್ರಹಣ ಹಿಡಿದಂತಾಗಿದೆ.

ಯೋಜನೆಯಿಂದ ಒತ್ತುವರಿ ತಡೆ: 15ವರ್ಷಗಳ ಹಿಂದೆಯೇ ದೊಡ್ಡಕೆರೆ ಸುತ್ತಲೂ ವಾಕಿಂಗ್‌ ಟ್ರ್ಯಾಕ್‌ ನಿರ್ಮಾಣಕ್ಕೆ ಜೀವ ಬಂದಿತ್ತು. ಆದರೆ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಯೋಜನೆ ಹಳ್ಳ ಹಿಡಿದಿತ್ತು. ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಬಂದ ನಂತರ ಯೋಜನೆಗೆ ಮರುಜೀವ ನೀಡಿದರು. 3 ಕೋಟಿ ವೆಚ್ಚದಲ್ಲಿ ಕೆರೆ ಸುತ್ತಲೂ ವಾಕಿಂಗ್‌ ಟ್ರ್ಯಾಕ್‌ ನಿರ್ಮಾಣಕ್ಕೆ ಚಾಲನೆ ನೀಡಿದರು. ಅರ್ಧದಷ್ಟು ಕಾಮಗಾರಿ ಪೂರ್ಣಗೊಂಡಿದೆ. ದೊಡ್ಡಕೆರೆ ಸುತ್ತಲೂ 3ಕಿ.ಮೀ ಉದ್ದದ ಟ್ರ್ಯಾಕ್‌ ತಲೆಎತ್ತಿದೆ. ಈ ಯೋಜನೆಯಿಂದ ಕೆರೆಯ ಒತ್ತುವರಿಯನ್ನು ತಡೆದಂತಾಗಿದೆ. ಕೆರೆಗೆ ಹೊಸ ಕಳೆ ಸಹ ಬಂದಂತಾಗಿದೆ.

ಯೋಜನೆ ಪೂರ್ಣಕ್ಕೆ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆ: ಟ್ರ್ಯಾಕ್‌ ಸುತ್ತಲೂ ಕಣ್ಣಿಗೆ ಮುದ ನೀಡುವ ವಿವಿಧ ಬಣ್ಣಗಳ ಅಲಂಕೃತ ಹೂ ಗಿಡಗಳನ್ನು ಹಾಗೂ ವಿಶ್ರಾಂತಿ ಪಡೆಯಲು ಕುರ್ಚಿ ಅಳವಡಿಸಿದರೆ ಯೋಜನೆ ಪೂರ್ಣವಾಗುತ್ತದೆ. ಆದರೆ, ಪುರಸಭೆ ಯೋಜನೆಯನ್ನು ಪೂರ್ಣಗೊಳಿಸಲು ಆಸಕ್ತಿ ತೋರುತ್ತಿಲ್ಲ. ಇದರಿಂದ ಈಗಾಗಲೇ ವೆಚ್ಚ ಮಾಡಿರುವ ಹಣ ಕೆರೆಯಲ್ಲಿ ಹೋಮ ಮಾಡಿದಂತಾಗಿದೆ. ಇದಲ್ಲದೆ ಕೆಸಿ ವ್ಯಾಲಿ ನೀರನು °ಕೆರೆಗೆ ತುಂಬಿಸಿ ದೋಣಿ ವಿಹಾರ ವ್ಯವಸ್ಥೆ ಸಹ ಕಲ್ಪಿಸಿ ಮಕ್ಕಳನ್ನು ಆಕರ್ಷಿಸಲು ಯೋಜನೆ ರೂಪಿಸಲಾಗಿತ್ತು. ಅಂದುಕೊಂಡಂತೆ ಯಾವುದೂ ನಡೆದಿಲ್ಲ, ಕೆರೆ ಸುತ್ತಲೂ ಅಳವಡಿಸಿರುವ ಪೆನ್ಷಿಂಗ್‌ ಸಹ ನಿರ್ವಹಣೆ ಇಲ್ಲದೆ ಅವ್ಯವಸ್ಥೆಯಲ್ಲಿದೆ. ಶಾಸಕ ಎಸ್‌.ಎನ್‌ .ನಾರಾಯಣಸ್ವಾಮಿ ಆಸಕ್ತಿವಹಿಸಿ ನನೆಗುದಿಗೆ ಬಿದ್ದಿರುವ ವಾಕಿಂಗ್‌ ಟ್ರ್ಯಾಕ್‌ ಗೆ ಮರುಜೀವ ನೀಡುವರೆ ಎಂದು ಸಾರ್ವಜನಿಕರು ಕಾಯುವಂತಾಗಿದೆ.

ಪಟ್ಟಣದ ಪುರಸಭೆ ವ್ಯಾಪ್ತಿಗೆ ಬರುವ ದೊಡ್ಡಕೆರೆ ವಾಕಿಂಗ್‌ ಟ್ರ್ಯಾಕ್‌ನಲ್ಲಿ ಸ್ವಚ್ಛತೆ ಇಲ್ಲದೇ ಇರುವುದರಿಂದ ಜನರು ಓಡಾಡಲು ಸಾಧ್ಯವಾಗುತ್ತಿಲ್ಲ. ಈ ಕುರಿತು ಕ್ರಮಕೈಗೊಳ್ಳಲಾಗುವುದು. ಪುರಸಭೆಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರ ಸ್ಥಾನಗಳು ಖಾಲಿ ಇರುವುದರಿಂದ ಸರ್ಕಾರವು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ನಿಗದಿಗೊಳಿಸಿ ಚುನಾವಣೆ ನಡೆದ ನಂತರ ಶಾಸಕರ, ನೂತನ ಅಧ್ಯಕ್ಷರ ಗಮನಕ್ಕೆ ತಂದು ಯೋಜನೆ ಪೂರ್ಣಕ್ಕೆ ಕ್ರಮಕೈಗೊಳ್ಳತ್ತೇವೆ. -ಜಿ.ಎನ್‌.ಚಲಪತಿ, ಮುಖ್ಯಾಧಿಕಾರಿ,ಪುರಸಭೆ.

-ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.