![iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ](https://www.udayavani.com/wp-content/uploads/2024/07/iphone-415x279.jpg)
ವರ್ಸೋವಾ-ಬಾಂದ್ರಾ ಸೀ ಲಿಂಕ್ ಇನ್ನು ವೀರ್ ಸಾವರ್ಕರ್ ಸೇತು: ಮರುನಾಮಕರಣ ಮಾಡಿದ ಶಿಂಧೆ ಸರ್ಕಾರ
Team Udayavani, Jun 28, 2023, 3:24 PM IST
![Versova-Bandra Sea Link is now Veer Savarkar Setu](https://www.udayavani.com/wp-content/uploads/2023/06/bandra-620x342.jpg)
ಮುಂಬೈ: ವರ್ಸೋವಾ-ಬಾಂದ್ರಾ ಸೀ ಲಿಂಕ್ ಅನ್ನು ವೀರ್ ಸಾವರ್ಕರ್ ಸೇತು ಎಂದು ಮರುನಾಮಕರಣ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಅನ್ನು ಅಟಲ್ ಬಿಹಾರಿ ವಾಜಪೇಯಿ ಸ್ಮೃತಿ ನ್ಹವಾ ಶೇವಾ ಅಟಲ್ ಸೇತು ಎಂದು ಮರುನಾಮಕರಣ ಮಾಡಲು ನಿರ್ಧರಿಸಿದೆ.
ಹಿಂದೂ ರಾಷ್ಟ್ರೀಯವಾದಿ ನಾಯಕ ವೀರ್ ಸಾವರ್ಕರ್ (ವಿನಾಯಕ ದಾಮೋದರ್ ಸಾವರ್ಕರ್) ಅವರ ಹೆಸರನ್ನು ವರ್ಸೋವಾ-ಬಾಂದ್ರಾ ಸೀ ಲಿಂಕ್ ಗೆ ಇಡಲು ಶಿಂಧೆ ಸರ್ಕಾರ ನಿರ್ಧರಿಸಿದೆ.
ಕಳೆದ ತಿಂಗಳು, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಾವರ್ಕರ್ 140 ನೇ ಜನ್ಮ ವಾರ್ಷಿಕೋತ್ಸವದಂದು ವರ್ಸೋವಾ-ಬಾಂದ್ರಾ ಸೀ ಲಿಂಕ್ ಗೆ ಸಾವರ್ಕರ್ ಹೆಸರನ್ನು ಇಡುವುದಾಗಿ ಘೋಷಿಸಿದ್ದರು.
ಇದನ್ನೂ ಓದಿ:Anna Bhagya ; ಅಕ್ಕಿ ಸಂಗ್ರಹವಾಗುವವರೆಗೆ ಹಣ ನೀಡಲು ತೀರ್ಮಾನಿಸಿದ ಸರಕಾರ
ಮುಂಬರುವ ವರ್ಸೋವಾ-ಬಾಂದ್ರಾ ಸೀ ಲಿಂಕ್ ಕರಾವಳಿ ರಸ್ತೆ ಯೋಜನೆಯ ಭಾಗವಾಗಿ ಅಂಧೇರಿಯನ್ನು ಬಾಂದ್ರಾ-ವರ್ಲಿ ಸೀ ಲಿಂಕ್ ಸಂಪರ್ಕಿಸುತ್ತದೆ. ಭಾರತದ ಅತಿ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (MTHL) 12 ರಿಂದ 15 ನಿಮಿಷಗಳ ಪ್ರಯಾಣದ ಸಮಯದೊಂದಿಗೆ ಮುಂಬೈಯನ್ನು ಮುಖ್ಯ ಭಾಗಕ್ಕೆ ಸಂಪರ್ಕಿಸುತ್ತದೆ.
ಈ ನಿರ್ಧಾರವನ್ನು ಪ್ರಕಟಿಸಿದ ಬಿಜೆಪಿಯ ಹಿರಿಯ ನಾಯಕ ಮತ್ತು ಸಚಿವ ಸುಧೀರ್ ಮುಂಗಂತಿವಾರ್ ಅವರು, ಸೇತುವೆಗಳಿಗೆ ರಾಷ್ಟ್ರದ ಇಬ್ಬರು ಮಹಾನ್ ವ್ಯಕ್ತಿಗಳ ಹೆಸರನ್ನು ಮರುನಾಮಕರಣ ಮಾಡಿರುವುದರಿಂದ ಯಾವುದೇ ವಿವಾದ ಬೇಡ ಎಂದು ಹೇಳಿದರು.
ಟಾಪ್ ನ್ಯೂಸ್
![iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ](https://www.udayavani.com/wp-content/uploads/2024/07/iphone-415x279.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![suicide](https://www.udayavani.com/wp-content/uploads/2024/07/suicide-1-150x84.jpg)
Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು
![Sudhamurthy](https://www.udayavani.com/wp-content/uploads/2024/07/Sudhamurthy-1-150x90.jpg)
Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?
![ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/07/lalu-150x83.jpg)
RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್
![1-aaaa](https://www.udayavani.com/wp-content/uploads/2024/07/1-aaaa-150x84.jpg)
Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ
![pune](https://www.udayavani.com/wp-content/uploads/2024/07/pune-150x83.jpg)
Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.