ಆನೆಗುಂದಿ:ಜಯತೀರ್ಥ,ರಘುವರ್ಯ ತೀರ್ಥರ ಮಹಿಮೋತ್ಸವಕ್ಕೆ ನಿರಾಕರಣೆ
ಶಾಂತಿ ಸೌಹಾರ್ದತೆ ಕಾಪಾಡುವ ಉದ್ದೇಶ...
Team Udayavani, Jun 28, 2023, 9:01 PM IST
ಗಂಗಾವತಿ:ತಾಲೂಕಿನ ಆನೆಗೊಂದಿ ಇತಿಹಾಸ ಪ್ರಸಿದ್ಧ ನವವೃಂದಾವನಗಡ್ಡಿಯಲ್ಲಿ ಜು.06-08 ವರೆಗೆ ಮೂರು ದಿನಗಳ ಕಾಲ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದ ವತಿಯಿಂದ ಜಯತೀರ್ಥರ ಆರಾಧನೆ ಮತ್ತು ಅದೇ ದಿವಸಗಳಂದು ಉತ್ತರಾಧಿಮಠದವರು ರಘುವರ್ಯ ತೀರ್ಥರ ಮಹಿಮೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆಯ ಪರವಾನಿಗೆ ಮತ್ತು ಭದ್ರತೆ ನೀಡುವಂತೆ ಕೋರಲಾಗಿದ್ದು ನವವೃಂದಾವನಗಡ್ಡಿಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವರದಿ ಹಿನ್ನೆಲೆಯಲ್ಲಿ ಆರಾಧನೆ ಮತ್ತು ಮಹಿಮೋತ್ಸವ ಮಾಡಲು ಪರವಾನಿಗೆಯನ್ನು ನಿರಾಕರಿಸಲಾಗಿದೆ ಎಂದು ತಹಶೀಲ್ದಾರ್ ಮಂಜುನಾಥ ಸ್ವಾಮಿ ತಿಳಿಸಿದ್ದಾರೆ.
ಮಂತ್ರಾಲಯ ಮಠ ಹಾಗೂ ಉತ್ತರಾಧಿಮಠದವರು ಒಂದೇ ದಿನದಂದು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಯಾವುದೇ ರೀತಿಯ ಅವಗಡ ಜರುಗದಂತೆ ನಿಯಮಾನುಸಾರ ಕ್ರಮವಹಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಎರಡು ಮಠದವರನ್ನು ಕರೆದು ಸಭೆ ನಡೆಸಿದ ಸಂದರ್ಭದಲ್ಲಿ ಉಭಯ ಮಠದವರು ಒಂದೇ ದಿನದಂದು ಇಬ್ಬರೂ ಸೇರಿ ಪರಸ್ಪರ ಒಪ್ಪಿಕೊಂಡು ಸಮನ್ವಯ ಸಾಧಿಸಿ ಸದ್ರಿ ಕಾರ್ಯಕ್ರಮಗಳನ್ನು ಆಚರಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ವರದಿಯಲ್ಲಿ ಎರಡೂ ಮಠದವರಿಗೆ ಒಂದೇ ದಿನದಂದು ಅವಕಾಶ ನೀಡಿದಲ್ಲಿ ಉಭಯ ಮಠದವರು ಒಬ್ಬರಿಗೊಬ್ಬರು ಜಗಳ ಮಾಡಿಕೊಂಡು ಕಾನೂನು ಮತ್ತು ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ಸಾಧ್ಯತೆಗಳು ಇರುವುದರಿಂದ ಎರಡೂ ಮಠದವರಿಗೆ ಒಂದೇ ದಿನಾಂಕಗಳಂದು ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲು ಅವಕಾಶ ನೀಡದಂತೆ ವರದಿ ನೀಡಿರುವುದರಿಂದ ಸ್ಥಳದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಜು.06-08 ವರೆಗೆ ನವವೃಂದಾವನಗಡ್ಡಿಯಲ್ಲಿ ರಘುವರ್ಯ ತೀರ್ಥರ ಮಹಿಮೋತ್ಸವ ಕಾರ್ಯಕ್ರಮ ಹಾಗೂ ಶ್ರೀ ಜಯತೀರ್ಥರ ಆರಾಧನೆಯನ್ನು ಆಚರಿಸುವ ಕುರಿತು ಎರಡು ಮಠದವರು ಸಲ್ಲಿಸಿರುವ ಎರಡೂ ಮಠದ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ತಹಶೀಲ್ದಾರ್ ಮಂಜುನಾಥ ಸ್ವಾಮಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.