![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 29, 2023, 1:52 PM IST
ನವದೆಹಲಿ: ಎಥೆನಾಲ್ನಲ್ಲಿ ಶೇ. 100 ರಷ್ಟು ಚಲಿಸುವ ಹೊಸ ವಾಹನಗಳನ್ನು ಆಗಸ್ಟ್ನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.
ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು ಆಗಸ್ಟ್ ತಿಂಗಳಲ್ಲಿ ಸಂಪೂರ್ಣವಾಗಿ ಎಥೆನಾಲ್ನಿಂದ ಚಲಿಸುವ ವಾಹನಗಳನ್ನು ಬಿಡುಗಡೆ ಮಾಡಲಾಗುವುದು. ಬಜಾಜ್, ಟಿವಿಎಸ್ ಮತ್ತು ಹೀರೋ ಕಂಪನಿಯ ಬೈಕ್ ಮತ್ತು ಸ್ಕೂಟರ್ಗಳನ್ನು ಬಿಡುಗಡೆ ಮಾಡಲಾಗುವುದು ಇವು ಶೇ. 100ರಷ್ಟು ಎಥೆನಾಲ್ನಲ್ಲೇ ಚಲಿಸುತ್ತವೆ ಎಂದರು.
ಟೊಯೊಟಾ ಕಂಪನಿಯ ಕ್ಯಾಮ್ರಿ ಕಾರಿನಂತೆ ಶೇ.60ರಷ್ಟು ಪೆಟ್ರೋಲ್ ಹಾಗೂ ಶೇ.40ರಷ್ಟು ವಿದ್ಯುತ್ ನಿಂದ ಚಲಿಸುತ್ತದೆ. ಟೊಯೊಟೊ ಕಂಪನಿಯು ಶೇ 60ರಷ್ಟು ಎಥೆನಾಲ್ ಹಾಗೂ ಶೇ 40ರಷ್ಟು ಎಲೆಕ್ಟ್ರಿಕ್ನೊಂದಿಗೆ ಚಲಿಸುವ ವಾಹನವನ್ನು ಬಿಡುಗಡೆ ಮಾಡಲಿದೆ. ಈ ಉಪಕ್ರಮವು ದೇಶದಲ್ಲಿ ಕ್ರಾಂತಿಯಾಗಲಿದೆ ಎಂದು ಹೇಳಿದರು.
ದೇಶದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಿದ ಅವರು, ನಾನು ಯಾವಾಗಲೂ ರಾಜಕೀಯವನ್ನು ಮೀರಿ ಕೆಲಸ ಮಾಡಿದ್ದೇನೆ ಮತ್ತು ಎಲ್ಲರಿಗೂ ನ್ಯಾಯವನ್ನು ಮಾಡುವುದನ್ನು ಬಿಜೆಪಿ ಕಲಿಸಿದೆ ಎಂದು ಪ್ರತಿಪಾದಿಸಿದರು.
ನಾನು ಬಿಜೆಪಿಯ ಕಾರ್ಯಕರ್ತ, ಆದರೆ ಸರ್ಕಾರ ದೇಶದ ಜನತೆಗೆ ಸೇರಿದ್ದು, ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ಸಬ್ಕಾ ಸಾಥ್ ಸಬ್ಕಾ ವಿಶ್ವಾಸ್ ಸಬ್ಕಾ ಪ್ರಾಯಸ್ ಎಂದು ಹೇಳಿದ್ದಾರೆ.
“ನನ್ನ 9 ವರ್ಷಗಳ ಅಧಿಕಾರದಲ್ಲಿ ನಾನು ರಾಜಕೀಯ ಚಿಂತನೆಗಳನ್ನು ಆಡಳಿತದೊಂದಿಗೆ ಬೆರೆಸಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ, ನಮ್ಮ ದೇಶದ ರಸ್ತೆಗಳು ನಮ್ಮ ಆಸ್ತಿ ಮತ್ತು ಈ ರಸ್ತೆಗಳಲ್ಲಿ ಸಂಚರಿಸುವ ಜನರು ನಮ್ಮ ಕುಟುಂಬ ಎಂದು ಅವರು ಹೇಳಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.