ಅಕ್ಕಿ ಬದಲು ಹಣ ಕೊಟ್ಟರೂ 20 ಸಾವಿರ ಮೆಟ್ರಿಕ್ ಟನ್‌ ಖರೀದಿ ಅನಿವಾರ್ಯ

ಕೇಂದ್ರದಿಂದ ರಾಜ್ಯಕ್ಕೆ ಮಂಜೂರಾಗಿರುವುದು 2,17,400 ಮೆಟ್ರಿಕ್‌ ಟನ್‌, ಅಗತ್ಯವಿರುವುದು 2.36 ಲಕ್ಷ ಮೆಟ್ರಿಕ್‌ ಟನ್‌ ಅಕ್ಕಿ

Team Udayavani, Jun 30, 2023, 7:36 AM IST

PADDY

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ ನೀಡಲು ಉದ್ದೇಶಿಸಿದ್ದ 5 ಕೆಜಿ ಅಕ್ಕಿ ಬದಲಿಗೆ ಫ‌ಲಾನುಭವಿಗಳಿಗೆ ಹಣ ನೀಡಲು ನಿರ್ಧರಿಸಿದ್ದರೂ ಸರಕಾರ ಅಂದಾಜು 20 ಸಾವಿರ ಮೆಟ್ರಿಕ್‌ ಟನ್‌ಗೆ ಪರ್ಯಾಯ ವ್ಯವಸ್ಥೆ ಮಾಡಲೇಬೇಕಾಗಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿ ಕೇಂದ್ರದಿಂದ ರಾಜ್ಯಕ್ಕೆ ಮಂಜೂರಾದ ಅಕ್ಕಿ ಮಾಸಿಕ 2,17,400 ಮೆಟ್ರಿಕ್‌ ಟನ್‌. ಆದರೆ ರಾಜ್ಯದಲ್ಲಿರುವ ಅಂತ್ಯೋದಯ ಮತ್ತು ಬಿಪಿಎಲ್‌ ಕಾರ್ಡ್‌ ಹೊಂದಿದ ಕುಟುಂಬಗಳ ಅಂಕಿ-ಅಂಶಗಳ ಪ್ರಕಾರ ಮಾಸಿಕ 2.36 ಲಕ್ಷ ಮೆಟ್ರಿಕ್‌ ಟನ್‌ ಅಕ್ಕಿ ಅಗತ್ಯವಿದೆ. ನೂರಕ್ಕೆ ನೂರರಷ್ಟು ಪಡಿತರ ವಿತರಣೆಯಾದಲ್ಲಿ ಸುಮಾರು 20 ಸಾವಿರ ಮೆಟ್ರಿಕ್‌ ಟನ್‌ ಅಕ್ಕಿ ಕೊರತೆ ಆಗಲಿದೆ. ಇದನ್ನು ಹೊಂದಿಸಬೇಕಾದ ಹೊಣೆ ಈಗ ರಾಜ್ಯ ಸರಕಾರದ ಮೇಲಿದೆ.

ಕೊರತೆ ಆಗಲಿರುವ ಈ ಅಕ್ಕಿ ಬದಲಿಗೆ ಹಣ ನೀಡಲು ಸಾಧ್ಯವಿಲ್ಲ. ಯಾಕೆಂದರೆ ಈ ಫ‌ಲಾನುಭವಿಗಳು ಈಗಾಗಲೇ ನೀಡುತ್ತಿರುವ 5 ಕೆಜಿ ಅಕ್ಕಿ ಪಡೆಯುವ ವರ್ಗವೇ ಆಗಿದೆ. ಈ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಅಧಿಕಾರಿಗಳು ಕಡಿಮೆ ಆಗಬಹುದಾದ ಅಕ್ಕಿ ಹೊಂದಿಸುವ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.

ಈ ಹಿಂದಿನ ಹೊಂದಾಣಿಕೆ ಹೊರೆಗೆ ಹೋಲಿಸಿದರೆ, ಈ ಕೊರತೆ ಏನೂ ಅಲ್ಲ. ಹಾಗಂತ ಉದಾಸೀನ ಮಾಡುವಂತೆಯೂ ಇಲ್ಲ. ಈ ನಿಟ್ಟಿನಲ್ಲಿ ಹಲವು ಆಯ್ಕೆಗಳು ಸರಕಾರದ ಮುಂದಿವೆ. ಕೊರತೆಯಾಗುವ ಅಕ್ಕಿಯನ್ನು ಗಿರಣಿ ಮಾಲಕರಿಂದ ನೇರವಾಗಿ ಖರೀದಿಸಬಹುದು. ಈಗಾಗಲೇ ಛತ್ತೀಸ್‌ಗಢ 1.50 ಲಕ್ಷ ಮೆಟ್ರಿಕ್‌ ಟನ್‌ ನೀಡಲು ಮುಂದೆ ಬಂದಿದೆ ಎಂದು ಸ್ವತಃ ಸರಕಾರ ಹೇಳಿತ್ತು. ಅಲ್ಲಿಂದಲೂ ಪೂರೈಕೆ ಮಾಡಿಕೊಳ್ಳಬಹುದು. ಅಕ್ಕಿ ಬದಲಿಗೆ ಗ್ರಾಹಕರಿಗೆ ಜೋಳ, ರಾಗಿ ನೀಡಬಹುದು ಅಥವಾ ಭಾರತೀಯ ಆಹಾರ ನಿಗಮ (ಎಫ್ಸಿಐ)ದಿಂದ ತನ್ನ ಹಂಚಿಕೆಯಲ್ಲಿ ಕೊರತೆಯಾಗುವ ಅಕ್ಕಿಯನ್ನು ಮುಂಚಿತವಾಗಿ ಪಡೆಯಬಹುದು.

ಕೊರತೆ ಇದೆ; ಖರೀದಿಸುತ್ತೇವೆ
ಕೇಂದ್ರದ ಹಂಚಿಕೆ ಮತ್ತು ಅಗತ್ಯವಿರುವ ಅಕ್ಕಿಯ ಪ್ರಮಾಣದಲ್ಲಿ ಸುಮಾರು 19-20 ಸಾವಿರ ಮೆಟ್ರಿಕ್‌ ಟನ್‌ ಅಂತರ ಇರುವುದು ನಿಜ. ಆದರೆ ಅದನ್ನು ಕೇಂದ್ರೀಯ ಭಂಡಾರ, ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ (ಎನ್‌ಎಎಫ್ಇಡಿ), ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (ಎನ್‌ಸಿಸಿಎಫ್)ಗಳ ಮೂಲಕ ಖರೀದಿಸಬೇಕಿದೆ. ಈ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆಯುಕ್ತೆ ಎಂ. ಕನಕವಲ್ಲಿ “ಉದಯವಾಣಿ’ಗೆ ತಿಳಿಸಿದರು.

ಲೆಕ್ಕಾಚಾರ ಹೀಗಿದೆ
ಅಂತ್ಯೋದಯ ಕಾರ್ಡ್‌ ಹೊಂದಿದ 10,89,990 ಕುಟುಂಬಗಳಿದ್ದು, ಇವುಗಳಲ್ಲಿ 44,77,119 ಸದಸ್ಯರಿದ್ದಾರೆ. ಅದೇ ರೀತಿ ಆದ್ಯತಾ ಕುಟುಂಬ (ಬಿಪಿಎಲ್‌)ಗಳಲ್ಲಿ 3,97,00,791 ಸದಸ್ಯರಿದ್ದಾರೆ. ಒಟ್ಟಾರೆ ಫ‌ಲಾನುಭವಿಗಳ ಸಂಖ್ಯೆ 4,41,77,910. ಪ್ರಸ್ತುತ ತಲಾ ಅಂತ್ಯೋದಯ ಕುಟುಂಬಕ್ಕೆ 35 ಕೆಜಿ ಹಾಗೂ ಬಿಪಿಎಲ್‌ ಹೊಂದಿದ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 5 ಕೆಜಿ ಅಕ್ಕಿ ನೀಡಲಾಗುತ್ತಿದೆ. ಅದರಂತೆ 2,36,653 ಮೆಟ್ರಿಕ್‌ ಟನ್‌ ಅಕ್ಕಿ ಬೇಕಾಗುತ್ತದೆ. ಕೇಂದ್ರದ ಹಂಚಿಕೆ 2,17,400 ಮೆಟ್ರಿಕ್‌ ಟನ್‌ ಆಗಿದೆ. ಆದರೆ ಪ್ರತಿ ತಿಂಗಳು ಪ್ರತಿಶತ ನೂರರಷ್ಟು ಪಡಿತರ ವಿತರಣೆ ಆಗುವುದಿಲ್ಲ. ಶೇ. 90ರಿಂದ 95ರಷ್ಟು ಮಾತ್ರ ಆಗುತ್ತದೆ. ಉಳಿದ ಶೇ. 5ರಷ್ಟು ಬಾಕಿ ಉಳಿಯುವುದರಿಂದ ಅಲ್ಲಿ ತುಸು ಪಡಿತರ ಉಳಿತಾಯ ಆಗುತ್ತದೆ. ಈ ಮೂಲಕವೂ ಸ್ವಲ್ಪ ಹೊಂದಾಣಿಕೆ ಆಗುತ್ತದೆ ಎನ್ನಲಾಗಿದೆ.

ವಿಜಯ ಕುಮಾರ್‌ ಚಂದರಗಿ

ಟಾಪ್ ನ್ಯೂಸ್

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

mbಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.