Shikhar Dhawan: ಮತ್ತೆ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ ಶಿಖರ್ ಧವನ್? ಏನಿದು ವರದಿ
Team Udayavani, Jun 30, 2023, 11:25 AM IST
ಮುಂಬೈ: ಮೂರು ಮಾದರಿ ಕ್ರಿಕೆಟ್ ನಲ್ಲಿ ಆಯ್ಕೆಗಾರರಿಂದ ಕಡೆಗಣಿಸಲ್ಪಟ್ಟಿರುವ ಎಡಗೈ ಆಟಗಾರ ಶಿಖರ್ ಧವನ್ ಅವರು ಮತ್ತೆ ರಾಷ್ಟ್ರೀಯ ತಂಡದ ನಾಯಕನಾಗುವ ಸಾಧ್ಯತೆಯಿದೆ.
ಹೌದು, ಏಷ್ಯನ್ ಗೇಮ್ಸ್ ಗೆ ಭಾರತ ತಂಡವನ್ನು ಕಳುಹಿಸಲು ಬಿಸಿಸಿಐ ಒಪ್ಪಿದ್ದು, ಇದಕ್ಕೆ ಪ್ರಮುಖ ಆಟಗಾರರಿಲ್ಲದ ಎ ತಂಡವನ್ನು ಆಡಿಸುವ ಸಾಧ್ಯತೆಯಿದೆ. ಹೀಗಾಗಿ ಈ ತಂಡಕ್ಕೆ ರೋಹಿತ್ ಶರ್ಮಾ ಬದಲು ಶಿಖರ್ ಧವನ್ ನಾಯಕತ್ವ ವಹಿಸಬಹುದು ಎಂದು ವರದಿಯಾಗಿದೆ.
ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಶುಭ್ಮನ್ ಗಿಲ್ ಅವರು ರೋಹಿತ್ ಜೊತೆಗೆ ಆರಂಭಿಕ ಸ್ಥಾನದಲ್ಲಿ ತಳವೂರಿದ್ದಾರೆ. ಹೀಗಾಗಿ ಶಿಖರ್ ಧವನ್ ಗೆ ತಂಡದಲ್ಲಿ ಜಾಗ ಇಲ್ಲದಾಗಿದೆ. ವೆಸ್ಟ್ ಇಂಡೀಸ್ ಸರಣಿಗೆ ಈಗಾಗಲೇ ಏಕದಿನ ತಂಡವನ್ನು ಪ್ರಕಟ ಮಾಡಿದ್ದು, ಇದರಲ್ಲಿ ಧವನ್ ಗೆ ಜಾಗ ಸಿಕ್ಕಿಲ್ಲ. ಅಲ್ಲದೆ ವಿಂಡೀಸ್ ಟಿ20 ಸರಣಿಗೂ ಧವನ್ ಆಯ್ಕೆಯಾಗುವುದು ಕಷ್ಟ ಎನ್ನಲಾಗಿದೆ.
ಈ ಬಾರಿಯ ಏಷ್ಯನ್ ಗೇಮ್ಸ್ ಕೂಟವು ಸಪ್ಟೆಂಬರ್ 23ರಿಂದ ಅಕ್ಟೋಬರ್ 8ರವರೆಗೆ ಚೀನಾದ ಹ್ಯಾಂಗ್ ಚೌ ನಗರದಲ್ಲಿ ನಡೆಯಲಿದೆ. ಅಕ್ಟೋಬರ್ 5ರಿಂದ ಭಾರತದಲ್ಲೇ ಏಕದಿನ ವಿಶ್ವಕಪ್ ಕೂಟ ನಡೆಯುವ ಕಾರಣ ಪ್ರಮುಖ ತಂಡವನ್ನು ಕಳುಹಿಸುವ ಸಾಧ್ಯತೆ ಇಲ್ಲವೇ ಇಲ್ಲ ಎನ್ನಬಹುದು.
ಇದನ್ನೂ ಓದಿ:Viral: 500 ರೂ. ನೋಟುಗಳ ರಾಶಿ, ರಾಶಿ ಹಣದ ಜತೆ ಪೊಲೀಸ್ ಅಧಿಕಾರಿಯ ಹೆಂಡತಿ, ಮಕ್ಕಳ ಸೆಲ್ಫಿ!
ಜುಲೈ 7 ರಂದು ನಡೆಯುವ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಬಿಸಿಸಿಐ ಏಷ್ಯನ್ ಗೇಮ್ಸ್ ತಂಡದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ. ಅದೇ ಸಭೆಯಲ್ಲಿ, ಮಂಡಳಿಯು ವಿಶ್ವಕಪ್ಗಾಗಿ ಕ್ರೀಡಾಂಗಣಗಳನ್ನು ಅಭಿವೃದ್ಧಿಪಡಿಸುವ ಮಾರ್ಗಸೂಚಿಯನ್ನು ಸಹ ಮಾಡಲಿದೆ. ಪಂದ್ಯಾವಳಿಯನ್ನು ಆಯೋಜಿಸಲು ಬಿಸಿಸಿಐ ಮತ್ತು ಐಸಿಸಿ ಹತ್ತು ಸ್ಥಳಗಳನ್ನು ಅಂತಿಮಗೊಳಿಸಿದೆ ಮತ್ತು ಅವುಗಳಲ್ಲಿ ಹೆಚ್ಚಿನವುಗಳಿಗೆ ದೊಡ್ಡ ಕೂಟಕ್ಕೆ ಮುಂಚಿತವಾಗಿ ಅಭಿವೃದ್ಧಿ ಕಾರ್ಯಗಳ ಅಗತ್ಯವಿದೆ.
ಏಷ್ಯನ್ ಗೇಮ್ಸ್ ನಲ್ಲಿ 9 ವರ್ಷಗಳ ಬಳಿಕ ಮತ್ತೆ ಕ್ರಿಕೆಟ್ ಗೆ ಅವಕಾಶ ನೀಡಲಾಗಿದೆ. ಕೂಟಕ್ಕೆ ತಂಡವನ್ನು ಕಳುಹಿಸಲು ಬಿಸಿಸಿಐ ಆಸಕ್ತಿ ತೋರಿಸಿರಲಿಲ್ಲ. ಆದರೆ ಇದಕ್ಕೆ ಈಗ ತಂಡ ಕಳುಹಿಸಲು ನಿರ್ಧರಿಸಿದ್ದು, ಮಹಿಳಾ ಮತ್ತು ಪುರುಷರ ತಂಡವನ್ನು ಕಳುಹಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.