40 ವರ್ಷ ಸೇವೆ ಸಲ್ಲಿಸಿದ ಶಿಕ್ಷಕಿಯನ್ನು ವಿಭಿನ್ನ ರೀತಿಯಲ್ಲಿ ಬೀಳ್ಕೊಟ್ಟ ಗ್ರಾಮಸ್ಥರು…


Team Udayavani, Jun 30, 2023, 6:18 PM IST

ಭರಮಸಾಗರ: 40ವರ್ಷ ಸೇವೆ ಸಲ್ಲಿಸಿದ ಜನ ಮೆಚ್ಚಿದ ಶಿಕ್ಷಕಿಗೆ ವಿಭಿನ್ನ ರೀತಿಯಲ್ಲಿ ಬೀಳ್ಕೊಡುಗೆ

ಭರಮಸಾಗರ: (ಚಿತ್ರದುರ್ಗ) ಶಿಕ್ಷಕರು ನಿವೃತ್ತಿ ಆದರೆ ಅವರಿಗೆ ಒಂದು ಬೀಳ್ಕೊಡುಗೆ ಸಮಾರಂಭ ಮಾಡಿ ಉಡುಗೊರೆ ನೀಡಿ ಗೌರವಿಸುವದು ಸಾಮಾನ್ಯ.

ಆದರೆ ಚಿತ್ರದುರ್ಗ ತಾಲೂಕಿನ ಕೋಗುಂಡೆ ಗ್ರಾಮದಲ್ಲಿ ಇಂದು ವಯೋನಿವೃತ್ತಿ ಹೊಂದಿದ ಕೆ.ಬಿ.ನಾಗರತ್ನಮ್ಮ ಅವರ ಬೀಳ್ಕೊಡಿಗೆ ಸಮಾರಂಭ ಮಾತ್ರ ಹಲವು ಅಚ್ಚರಿಗಳಿಗೆ ಇಂದು ಸಾಕ್ಷಿಯಾಯಿತು.

ಗ್ರಾಮದ ಪ್ರಮುಖ‌ ಬೀದಿಗಳಲ್ಲಿ‌ ಟ್ರಾಕ್ಟರ್ ನಲ್ಲಿ‌ ಶಿಕ್ಷಕಿಯನ್ನು ಕೂರಿಸಿ ಪೂರ್ಣಕುಂಭ ಸ್ವಾಗತದೊಂದಿಗೆ ಅದ್ದೂರಿಯಾಗಿ ಮೆರವಣಿಗೆ ನಡೆಸಲಾಯಿತು. ಪ್ರತಿ ಮನೆ ಮನೆಯ ಹೆಂಗಳೆಯರು ಶಿಕ್ಷಕಿ ಬಳಿಗೆ ಆಗಮಿಸಿ ಪ್ರೀತಿಯ ಹೂಹಾರ ಹಾಕಿ ನಮಸ್ಕರಿಸಿ ಆತ್ಮೀಯ ವಿದಾಯ ಹೇಳಿದರು.

ಪ್ರೀತಿಯ ಶಿಷ್ಯಂದಿರು ಮಾತ್ರ ತಮಟೆ ಸದ್ದಿಗೆ ಹೆಜ್ಜೆ ಹಾಕಿ ನೃತ್ಯ ಮಾಡುತ್ತಾ ನೆಚ್ಚಿನ ಶಿಕ್ಷಕಿ ಯ ಕೊನೆ ದಿನದ ಸೇವೆ ಯನ್ನು ಅವಿಸ್ಮರಣೀಯ ವಾಗಿಸಿದರು. ಹಳೆ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಶಾಲೆ ವತಿಯಿಂದ ಸಮಾರಂಭ ಏರ್ಪಡಿಸಿ ಶಿಕ್ಷಕಿಯ ಸೇವೆಯನ್ನು ಸ್ಮರಿಸಿದರು. ನೆರೆದ ಊರಿಗೆ , ಅತಿಥಿಗಳಿಗೆ ಊಟದ ವ್ಯವಸ್ಥೆ ಆಯೋಜಿಸಲಾಗಿತ್ತು.

ಶಿಕ್ಷಕಿಗೆ ಮನೆ ಮನೆಗಳಿಂದ ಸೀರೆ, ಇತರೆ ಉಡುಗೊರೆ ನೀಡಿ ತವರು ಮನೆಯ ಮಗಳಂತೆ ಹಾರೈಸಿ ಕಣ್ತುಂಬಿಕೊಳ್ಳುತ್ತಿದ್ದ ದೃಶ್ಯ ಕಂಡುಬಂತು.

ದೂರದ ಊರುಗಳಿಂದ ನೆಚ್ಚಿನ ಶಿಷ್ಯರು ಸಾಲು ಸಾಲಾಗಿ ಬಂದು ಆಗಮಿಸಿ ಶಿಕ್ಷಕಿಗೆ ಸನ್ಮಾನಿಸಿ ಕೃತಜ್ಞತೆ ಅರ್ಪಿಸಿದರು. ಶಾಲಾ ಆವರಣದಲ್ಲಿ ಶಿಕ್ಷಕಿಯವರಿಂದ ಅರಳಿ ಗಿಡ ನೆಡಿಸಲಾಯಿತು.

ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಡಿ.ವಿ.ಶರಣಪ್ಪ, ಇಪ್ಕೋ ನಿರ್ದೇಶಕ ಎಚ್.ಎಂ.ಮಂಜುನಾಥ್, ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಕೃಷ್ಣಮೂರ್ತಿ ಸೇರಿದಂತೆ ಹಲವು ಗಣ್ಯರು ಮೆರವಣಿಗೆ ಸ್ಥಳಕ್ಕೆ ಆಗಮಿಸಿ ನಿವೃತ್ತ ಶಿಕ್ಷಕಿ ಗೆ ಸನ್ಮಾನಿಸಿ ಶುಭ ಹಾರೈಸಿದರು. ಹಾಲಿ ಶಾಲೆಯ ಮುಖ್ಯ ಶಿಕ್ಷಕಿ ಕೂಡ ನಾಗರತ್ನಮ್ಮ ಅವರ ಶಿಷ್ಯೆ ಆಗಿದ್ದು . ಇವರ ಬಳಿ ಕಲಿತವರು ಹಲವು ಉನ್ನತ ಹುದ್ದೆಗಳಲ್ಲಿ , ಇತರೆ ಸ್ವ ಉದ್ಯೋಗಗಳಲ್ಲಿ ಹೆಸರು ಮಾಡಿದ್ದಾರೆ.

ಜನ ಮೆಚ್ಚಿದ ಶಿಕ್ಷಕಿ, ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ನಾಗರತ್ನಮ್ಮ ರವರು ಇದೇ ಶಾಲೆಯಲ್ಲಿ ಉದ್ಯೋಗ ಆರಂಭಿಸಿ ಬರೋಬ್ಬರಿ 40 ವರ್ಷ 9 ತಿಂಗಳು ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಮನೆ ಮಾತಾಗಿದ್ದ ಶಿಕ್ಷಕಿಯನ್ನು ಇಂದು ಇಡೀ ಕೋಗುಂಡೆ ಗ್ರಾಮ ಹಬ್ಬದಂತೆ ಸಂಭ್ರಮದಿಂದ ಶಿಕ್ಷಕಿಯನ್ನು ಬೀಳ್ಕೊಟ್ಟಿದ್ದು ವಿಶೇಷವಾಗಿತ್ತು.

ಇದನ್ನೂ ಓದಿ: Gujarat: ಮಳೆಗೆ 9 ಮಂದಿ ಮೃತ್ಯು… ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಟಾಪ್ ನ್ಯೂಸ್

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

suicide

Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

1-qewewq

Yakshagana ರಂಗದಿಂದ ಮರೆಯಾದ ಮೃದು ಮಧುರ ಮಾತುಗಳ ಕುಂಬಳೆ ಶ್ರೀಧರ್ ರಾವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.