President of India Murmu ಭೇಟಿ: ಸ್ಕಂದಗಿರಿ, ನಂದಿಗಿರಿ ಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ
ವಾರಾಂತ್ಯದ ವೇಳೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ
Team Udayavani, Jun 30, 2023, 7:37 PM IST
ಚಿಕ್ಕಬಳ್ಳಾಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು ರವರು ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಸಮೀಪ ಇರುವ ಸತ್ಯಸಾಯಿ ಗ್ರಾಮಕ್ಕೆ ಜುಲೈ 3 ರಂದು ಸೋಮವಾರ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಜುಲೈ 2 ಮತ್ತು 3 ರಂದು ನಂದಿಗಿರಿಧಾಮ ಹಾಗೂ ಸ್ಕಂದಗಿರಿಗೆ ಆಗಮಿಸುವ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಜಿಲ್ಲೆಗೆ ರಾಷ್ಟ್ರಪತಿಗಳು ಆಗಮನದ ಹಿನ್ನಲೆಯಲ್ಲಿ ಅತಿ ಗಣ್ಯರ ಭದ್ರತೆ ದೃಷ್ಠಿಯಿಂದ ಜುಲೈ 2 ರ ಭಾನುವಾರ ಬೆಳಗ್ಗೆ 6 ರಿಂದ ಜುಲೈ 3 ಸೋಮವಾರ ಸಂಜೆ 6 ಗಂಟೆವರಗೂ ಪ್ರವಾಸಿಗರಿಗೆ ನಂದಿಬೆಟ್ಟ ಹಾಗೂ ಚಾರಣಕ್ಕೆ ಹೆಸರುವಾಸಿಯಾದ ಸ್ಕಂದಗಿರಿಬೆಟ್ಟದ ಪ್ರವೇಶ ಸಿಗುವುದಿಲ್ಲ.ಭಾರತೀಯ ದಂಡ ಸಂಹಿತೆ 1973 ಸೆಕ್ಷನ್ 144 (3) ರಡಿ ಜಿಲ್ಲಾಧಿಕಾರಿಗಳಿಗೆ ಇರುವ ಅಧಿಕಾರವನ್ನು ಚಲಾಯಿಸಿ ಜಿಲ್ಲೆಯ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಈ ಆದೇಶವನ್ನು ಹೊರಡಿಸಿದ್ದಾರೆ.
ವಿಶ್ವ ವಿಖ್ಯಾತ ನಂದಿಗಿರಿಧಾಮಕ್ಕೆ ವಾರಾಂತ್ಯದ ವೇಳೆ ಜಿಲ್ಲೆಯ ವಿವಿಧಡೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.
ಜುಲೈ 3 ರಂದು ಸೋಮವಾರ ಸಂಜೆ 4:15ಕ್ಕೆ ದೆಹಲಿಯಿಂದ ನೇರವಾಗಿ ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮಕ್ಕೆ ರಾಷ್ಟ್ರಪತಿಗಳಾದ ದ್ರೌಪದಿ ಮರ್ಮು ಆಗಮಿಸಿ ಶ್ರೀ ಸತ್ಯಸಾಯಿ ಮಾನವ ಅಭುದ್ಯಯ ವಿಶ್ವ ವಿದ್ಯಾಲಯದ 2ನೇ ವರ್ಷದ ಘಟಿಕೋತ್ಸವದಲ್ಲಿ ಪಾಲ್ಗೊಂಡು 6 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್ ಹಾಗೂ ವಿವಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.