![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 30, 2023, 8:17 PM IST
ಹುಣಸೂರು: ನಾಗರಹೊಳೆ ಹುಲಿ ಸುರಕ್ಷಿತ ಪ್ರದೇಶದ ನಾಗರಹೊಳೆ ವಲಯದಲ್ಲಿ ಹುಲಿ-ಚಿರತೆ ನಡುವಿನ ಕಾದಾಟದಲ್ಲಿ ೮8 ರಿಂದ 9 ವರ್ಷದ ಒಂದು ಹೆಣ್ಣು ಚಿರತೆ ಸಾವನ್ನಪ್ಪಿದೆ.
ನಾಗರಹೊಳೆ ಉದ್ಯಾನದ ನಾಗರಹೊಳೆ ಶಾಖೆಯ ದೊಡ್ಡಹಳ್ಳಿ ಗಸ್ಸಿನ ದೊಡ್ಡಹಳ್ಳಿ ರಸ್ತೆ ಬಳಿ 8 ರಿಂದ 9 ವರ್ಷ ಪ್ರಾಯದ ಹೆಣ್ಣು ಚಿರತೆಯು ಹುಲಿ ದಾಳಿಯಿಂದ ಮೃತಪಟ್ಟಿರುವ ಕಳೆಬರಹ ಗಸ್ತಿನಲ್ಲಿದ್ದ ಸಿಬ್ಬಂದಿಗಳಿಗೆ ಗೋಚರಿಸಿದ್ದು, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದ, ಎ.ಸಿ.ಎಫ್. ಕೆ.ಪಿ.ಗೋಪಾಲ್, ಆರ್.ಎಫ್.ಓ.ಮಹಮ್ಮದ್ ಜೀಷಾನ್ ಭೇಟಿ ಇತ್ತು ಪರಿಶೀಲಿಸಿದರು.
ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರಾಧಿಕಾರ ನಾಮನಿರ್ದೇಶಿತರಾದ ಕೆ.ಎನ್.ಮಾದಪ್ಪ, ನಾಮನಿರ್ದೇಶಿತ ಮುಖ್ಯ ವನ್ಯಜೀವಿ ಪರಿಪಾಲಕರ ಡಾ.ಸಿ.ಕೆ.ತಮ್ಮಯ್ಯ, ಸಮ್ಮುಖದಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ನಿಗಧಿಪಡಿಸಿರುವ ಎಸ್.ಓ.ಪಿ.ನಿಯಮದಂತೆ ನಾಗರಹೊಳೆ ಪಶು ವೈದ್ಯಾಧಿಕಾರಿಯಾದ ಆನೆ ಪ್ರಭಾರಕ ಡಾ.ಎಚ್.ರಮೇಶ್, ಕೊಡಗಿನ ಕಾನೂರು ಪಶುಆಸ್ಪತ್ರೆ ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಚಿರತೆಯ ಅಂತ್ಯಕ್ರಿಯೆ ನಡೆಸಲಾಯಿತೆಂದು ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ ಉದಯವಾಣಿಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಸೊಲ್ಲಾಪುರದ ಅಕ್ಕಲಕೋಟೆ ಬಳಿ ಭೀಕರ ರಸ್ತೆ ಅಪಘಾತ: ಆಳಂದದ ಮಹಿಳೆ, ಮಗು ಸೇರಿ 6 ಮಂದಿ ಮೃತ್ಯು
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.