ಶಿವಮೊಗ್ಗ ನಿವಾಸಿ ಉಜಿರೆ ಲಾಡ್ಜ್ನಲ್ಲಿ ಆತ್ಮಹತ್ಯೆ
Team Udayavani, Jul 1, 2023, 5:56 AM IST
ಬೆಳ್ತಂಗಡಿ: ಶಿವನೊಗ್ಗದ ಕೋಟೆ ರೋಡ್ನ ಯುವಕ ಬೆಳ್ತಂಗಡಿ ತಾಲೂಕಿನ ಉಜಿರೆಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೂ. 29ರಂದು ಬೆಳಕಿಗೆ ಬಂದಿದೆ.
ಶಿವಮೊಗ್ಗ ಜಿಲ್ಲೆ ಕೋಟೆ ರೋಡ್ ಅಪ್ಪಾಜಿರಾವ್ ಕಾಂಪೌಂಡ್ ನಿವಾಸಿ ಕಾರ್ತಿಕ್ (29) ಅವರು ಜೂ. 26ರಂದು ಉಜಿರೆಯ ಮಾವಂತೂರು ಲಾಡ್ಜ್ನಲ್ಲಿ ರೂಂ ಪಡೆದುಕೊಂಡು ಉಳಿದುಕೊಂಡಿದ್ದರು. ಜೂ. 29ರಂದು ರೂಂ ಒಳಗೆ ಹಗ್ಗವನ್ನು ಫ್ಯಾನ್ಗೆ ಹಾಕಿ ಪ್ಲಾಸ್ಟಿಕ್ ಕುರ್ಚಿಯಲ್ಲಿ ನಿಂತು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಕಾರ್ತಿಕ್ ರೂಮ್ ಪಡೆಯುವಾಗ ಇಬ್ಬರು ಇರುವುದಾಗಿ ಹೇಳಿ ರೂಮ್ ಪಡೆದಿದ್ದರು. ಬಳಿಕ ರೂಮ್ನವರು ಕಾರ್ತಿಕ್ ಬಳಿ ಮರುದಿನ ಮತ್ತೂಬ್ಬರು ಬರುವಿಕೆ ಬಗ್ಗೆ ಪ್ರಶ್ನಿಸಿದ್ದರು. ಆತ ಬರುವುದಿಲ್ಲ ಎಂದು ಹೇಳಿ ಬಾಗಿಲು ಹಾಕಿದವರು ಬಾಗಿಲು ತೆರೆದಿರಲಿಲ್ಲ. ಜೂ. 29ರಂದು ಸಿಬಂದಿ ಬಾಗಿಲು ಬಡಿದರೂ, ಕಾರ್ತಿಕ್ ಕೊಠಡಿಯಿಂದ ಹೊರಬಾರದೆ ಇದ್ದಾಗ ಅನುಮಾನದಿಂದ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನ ಸ್ಥಳ್ಕಕೆ ಆಗಮಿಸಿದ ಬೆಳ್ತಂಗಡಿ ಸಬ್ಇನ್ಸ್ಪೆಕ್ಟರ್ ಆನಂದ್ ಮತ್ತು ತಂಡ ರೂಮಿನ ಬಾಗಿಲು ಮುರಿದು ಒಳಹೋದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಪೊಲೀಸ್ ಪರಿಶೀಲನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಕಾರ್ತಿಕ್ ಮನೆಯ ವಿಳಾಸ ಪತ್ತೆಯಾಗಿದ್ದು, ಮನೆಯವರನ್ನು ಸಂಪರ್ಕಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.