ಟೊಮೆಟೋಗೆ ಬಂಪರ್‌ ಬೆಲೆ: ಗ್ರಾಹಕ ಕಂಗಾಲು


Team Udayavani, Jul 1, 2023, 2:37 PM IST

ಟೊಮೆಟೋಗೆ ಬಂಪರ್‌ ಬೆಲೆ: ಗ್ರಾಹಕ ಕಂಗಾಲು

ದೇವನಹಳ್ಳಿ: ಮುಂಗಾರು ಮಳೆ ವಿಳಂಬ ಹಾಗೂ ಬೆಳೆ ನಷ್ಟದಿಂದ ಇಳುವರಿ ಕುಂಠಿತವಾಗಿ ಏಕಾಏಕಿ ಟೊಮೆಟೋ ಬೆಲೆ 70 ರಿಂದ 80 ರೂ. ಗಡಿ ದಾಟಿದೆ.

ವಿದ್ಯುತ್‌ ದರ ಹೆಚ್ಚಳದಿಂದ ಜನರು ಕಂಗಾಲಾಗಿದ್ದು ಅಗತ್ಯವಸ್ತುಗಳ ಬೆಲೆ ಒಂದೊಂದಾಗಿ ಏರುತ್ತಲೇ ಇದೆ. ಕಳೆದ ಹಲವು ದಿನಗಳಿಂದ ತರಕಾರಿಗಳನ್ನು ತಿನ್ನದಂತಾಗಿದೆ. ಅಷ್ಟರ ಮಟ್ಟಿಗೆ ಹೆಚ್ಚಳವಾಗಿದೆ. ಇದರಿಂದ ಜನಸಾಮಾನ್ಯರ ಜೀವನ ಬಲು ದುಬಾರಿಯಾಗಿದೆ. ಆಷಾಢದಲ್ಲಿ ಯಾವುದೇ ಶುಭ-ಸಮಾರಂಭಗಳು ನಡೆಯುವುದಿಲ್ಲ. ಬೆಲೆ ಇಳಿಕೆಯಾಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ಕಡಿಮೆಯಾಗ ಲಿರುವುದು ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಸಾಮಾನ್ಯವಾಗಿ ಟೊಮೆಟೋ ಇಲ್ಲದೆ ಯಾವುದೇ ತಿಂಡಿ ಸಾಂಬಾರು ಹಾಗೂ ಚಾಟ್ಸ್‌ ಮಾಡಲು ಸಾಧ್ಯವಿಲ್ಲ. ಆದರೆ ಈಗ ಅದರ ಬೆಲೆ ಕೇಳಿದರೆ ಹುಬ್ಬೇರಿಸುವಂತಾಗಿದೆ.

ರೈತರಿಗೆ ಸಂತಸ: ಮಾರುಕಟ್ಟೆಗೆ ಬರುತ್ತಿರುವ ಅವಕದ ಪ್ರಮಾಣದ ಕುಸಿತ, ಮಳೆ, ರೋಗಬಾಧೆಯಿಂದ ತೋಟಗಳು ನಾಶವಾಗಿದೆ. ಕಳೆದ ವಾರ ಕೆ.ಜಿ.ಗೆ 30 ರಿಂದ 40ರೂ.ಗೆ ಮಾರಾಟವಾಗುತ್ತಿದ್ದ ಟೊಮೆಟೋ ಇದೀಗ 70ರಿಂದ 80ರೂಗೆ ಏಕಾಏಕಿ ಏರಿಕೆಯಾಗಿರುವುದು ಬೆಳೆಗಾರರಿಗೆ ಸಂತಸ ತಂದಿದೆ. ಬೆಲೆ ಏರಿಕೆಯಿಂದಾಗಿ ಟೊಮೆಟೋ ಈಗ ಕೆಂಪು ಚಿನ್ನವಾಗಿದ್ದು ಬಡ, ಮದ್ಯಮ ವರ್ಗದವರಿಗೆ ಅಡಿಗೆಗೆ ಬಳಸಲು ಹುಣಸೇಹಣ್ಣಿನ ಮೊರೆ ಹೋಗಿದ್ದಾರೆ. ಟೊಮೆಟೋ ಬೆಲೆ ಏರಿಕೆಯಿಂದ ರೈತರಿಗೆ ಸಂತಸವಾಗಿದ್ದರೂ ಗ್ರಾಹಕ ಮಾತ್ರ ಕಂಗಾಲಾಗಿದ್ದಾನೆ.

ಬೆಳೆಗಳಿಗೆ ಬಿಳಿ ಕೀಟಬಾಧೆ: ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಟೊಮೆಟೋ ಬೆಳೆಯನ್ನು ಸಾಕಷ್ಟು ಬೆಳೆಯುತ್ತಾರೆ. ಬೆಳೆಗಳಿಗೆ ಬಿಳಿ ಕೀಟಬಾಧೆ ಕಾಡುತ್ತಿದ್ದು, ಇಳುವರಿ ಕುಂಠಿತವಾಗಿದೆ. ಆಷಾಢಮಾಸದಲ್ಲಿ ಸಾಮಾನ್ಯವಾಗಿ ತರಕಾರಿ ಬೆಲೆ ಹೆಚ್ಚಾಗಿರುವುದರಲ್ಲಿ ಸಾಲ ಹೊಲ ಮಾಡಿ ಬೆಳೆ ಬೆಳೆದು ಬೆಲೆ ಸಿಗದೆ ಕೈಸುಟ್ಟು ಕೊಳ್ಳುವುದು ಬೇಡ ಎಂದು ಕೆಲ ರೈತರು ಬೆಳೆ ಬೆಳೆಯಲು ಹಿಂದೇಟು ಹಾಕಿದ್ದು ಉತ್ಪಾದನೆ ಕಡಿಮೆಯಾದ ಹಿನ್ನೆಲೆಯಲ್ಲಿ ಬೆಲೆ ಹೆಚ್ಚಳವಾಗಿದೆ ಎಂದು ರೈತರು ಹೇಳುತ್ತಾರೆ.

ವಸ್ತುಗಳು ಬೆಲೆ ಏರಿಕೆ ಬಿಸಿ:ಬಯಲುಸೀಮೆಯ ಪ್ರದೇಶವಾದರೂ ಸಹ ಇರುವ ಅಲ್ಪಸ್ವಲ್ಪದ ಜಮೀನಿನಲ್ಲಿ ಹಾಗೂ ಇರುವ ಕೊಳವೆಬಾವಿಗಳಲ್ಲಿ ಇರುವ ನೀರಿನಲ್ಲಿಯೇ ರೈತರು ಟೊಮೆಟೋ ಮತ್ತು ಇತರೆ ತರಕಾರಿಗಳನ್ನು ಬೆಳೆದು ಜೀವನ ಸಾಗಿಸುತ್ತಿದ್ದಾರೆ. ಈ ಬಾರಿ ಟೊಮೆಟೋ ಹೆಚ್ಚಾಗಿರುವುದರಿಂದ ರೈತರ ಕೈಹಿಡಿಯುವಂತಾಗಿದೆ. ಮಳೆ ಬಾರದೆ ರೈತ ಒಂದು ಕಡೆ ಕಂಗಾಲಾಗಿದ್ದಾನೆ. ಒಂದೊಂದು ಬೆಲೆಯೂ ಏರಿಕೆಯಾಗಿರು ತ್ತಿರುವುದರಿಂದ ಗ್ರಾಹಕರಿಗೆ ಹೊರೆಯಾಗುತ್ತಿದೆ. ಬೇಳೆಕಾಳುಗಳು ಸಹ ಏರಿಕೆಯಾಗಿರುವುದರಿಂದ ಗ್ರಾಹಕರಿಗೆ ನುಂಗಲಾರದ ತುತ್ತಾಗಿದೆ. ಟೊಮೆಟೋ ಗಗನಕ್ಕೇರಿರುವುದರಿಂದ ಗ್ರಾಹಕರಿಗೆ ಪ್ರತಿ ನಿತ್ಯದ ವಸ್ತುಗಳು ಬೆಲೆ ಏರಿಕೆ ಬಿಸಿ ತಟ್ಟುತ್ತಿದೆ.

ಇತ್ತೀಚಿನ ದಿನಗಳಲ್ಲಿ ಬೆಲೆ ಏರಿಕೆಯಿಂದಾಗಿ ವಿವಿಧ ಮಾರುಕಟ್ಟೆಗಳಿಂದ ಟೊಮೆಟೋ ಮತ್ತು ಇತರೆ ತರಕಾರಿಗಳನ್ನು ತಂದು ವ್ಯಾಪಾರ ಮಾಡಲಾಗುತ್ತಿದೆ. ಸಾಗಾಣಿಕಾ ವೆಚ್ಚ ದುಬಾರಿಯಾಗಿದ್ದರೂ ಸಹ ಹೆಚ್ಚು ಬೆಲೆ ಕೊಟ್ಟು ತರಕಾರಿಗಳನ್ನು ಖರೀದಿಸಿಕೊಂಡು ವ್ಯಾಪಾರ ಮಾಡುತ್ತಿದ್ದೇವೆ. ಟೊಮೆಟೋ ಹೆಚ್ಚು ಬೆಲೆಯಾಗಿದೆ. ● ಆನಂದ್‌, ತರಕಾರಿ ವ್ಯಾಪಾರಿ.

ಎಷ್ಟೇ ಬೆಲೆಯಾದರೂ ಸಹ ಟೊಮೆಟೋ ಹಣ್ಣನ್ನು ಖರೀದಿಸಬೇಕು. ಯಾವುದೇ ಅಡುಗೆ ಮಾಡಬೇಕಾದರೆ ಟೊಮೆಟೋ ಇದ್ದರೆ ಮಾತ್ರ ರುಚಿ. ಯಾವುದೇ ಅಡುಗೆ ಮಾಡಲು ಆಗುವುದಿಲ್ಲ. ಎಷ್ಟೇ ಪ್ರಮಾಣದಲ್ಲಿ ಹುಣಸೇಹಣ್ಣನ್ನು ಹಾಕಿದರೂ ಸಹ ಟೊಮೆಟೋ ಹಣ್ಣಿನ ರುಚಿ ಸಿಗುವುದಿಲ್ಲ. ● ನಂದಿನಿ, ಗ್ರಾಹಕಿ.

ಬೆಲೆ ಏರಿಕೆ ದಿನದಿಂದ ದಿನಕ್ಕೆ ಏರುತ್ತಿರುವುದರಿಂದ ಸಾಲ ಮಾಡಿ ಟೊಮೆಟೋ ಮತ್ತು ಇತರೆ ಬೆಳೆಗಳನ್ನು ಬೆಳೆಯುತ್ತಿದ್ದೇವೆ. ಇರುವ ಬೋರ್‌ವೆಲ್‌ ಗಳಲ್ಲಿ ನೀರಿನಿಂದ ತರಕಾರಿ ಬೆಳೆಗಳನ್ನು ಬೆಳೆಯುತ್ತಿದ್ದೇವೆ. ಒಂದು ಬಾರಿ ಏರಿಕೆಯಾದರೆ, ಒಂದು ಬಾರಿ ಇಳಿಕೆಯಾಗುತ್ತದೆ. ಸರ್ಕಾರ ರೈತರಿಗೆ ಯಾವುದೇ ಬೆಳೆ ಬೆಳೆಯಲಿ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಇದರಿಂದ ರೈತರು ಆರ್ಥಿಕವಾಗಿ ಚೇತರಿಸಿಕೊಳ್ಳಲು ಅನುಕೂಲವಾಗುತ್ತದೆ. ● ರಮೇಶ್‌, ರೈತ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.