ಮಾಜಿ ಶಾಸಕರ ಮೇಲೆ ಎಫ್‌ಐಆರ್ ಹಾಕಲು ಈಗ ಅಡೆತಡೆ ಇಲ್ಲ; ಬೇಳೂರು ವ್ಯಂಗ್ಯ

ಬಿಜೆಪಿ ಪಕ್ಷದವರಿಂದ ಕಾಂಗ್ರೆಸ್ ಶಾಸಕ ಬೇಳೂರು ಸನ್ಮಾನ!

Team Udayavani, Jul 1, 2023, 4:24 PM IST

ಮಾಜಿ ಶಾಸಕರ ಮೇಲೆ ಎಫ್‌ಐಆರ್ ಹಾಕಲು ಈಗ ಅಡೆತಡೆ ಇಲ್ಲ; ಬೇಳೂರು ವ್ಯಂಗ್ಯ

ಸಾಗರ: ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವಸದಸ್ಯರ ಸಭೆಯಲ್ಲಿ ಮಾಡಿಸಿದ ಹಲ್ಲೆ ಪ್ರಕರಣದ ಸಂಬಂಧ ಹಿಂದೆ ಹಾಲಪ್ಪ ಶಾಸಕರಾಗಿದ್ದರಿಂದ ಪ್ರಕರಣ ದಾಖಲು ಮಾಡಲು ಆಗಿರಲಿಲ್ಲ. ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸಲು ಅಂದು ಸ್ಪೀಕರ್ ಅನುಮತಿ ಸಹ ಬೇಕು ಎಂದು ಹೇಳಲಾಗುತಿತ್ತು. ಈಗ ಮಾಜಿ ಶಾಸಕರ ಮೇಲೆ ಎಫ್‌ಐಆರ್ ಹಾಕಲು ಯಾವುದೇ ಅಡೆತಡೆ ಇಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ನೇರ ದಾಳಿ ನಡೆಸಿದರು.

ತಾಲೂಕಿನ ವರದಾಮೂಲದಲ್ಲಿ ಶನಿವಾರ ಪ್ರಾಂತೀಯ ಬ್ರಾಹ್ಮಣ ವೀರಶೈವ ಒಕ್ಕೂಟ ಹಾಗೂ ವರದಾಂಬಾ ಸೇವಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಅವತ್ತು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದ ಶ್ರೀಪಾದ ಹೆಗಡೆ ನಿಸ್ರಾಣಿ, ಜಗದೀಶ್ ಗೌಡ ಅವರ ಮೇಲೆ ೩೦ಕ್ಕೂ ಹೆಚ್ಚು ರೌಡಿಗಳ ಮೂಲಕ ಹಲ್ಲೆ ಮಾಡಿಸಿರುವ ಹಾಲಪ್ಪ ಅವರಿಗೆ ಜನರು ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ. ಹಲ್ಲೆ ನಡೆಸಿದವರ ಮೇಲೆ ಪ್ರಕರಣ ದಾಖಲು ಮಾಡದೆ ಹಲ್ಲೆ ಮಾಡಿಸಿಕೊಂಡವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಾನು ಶಾಸಕನಾಗಿ ಬಂದ ತಕ್ಷಣ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ತರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದೇನೆ. ಸಾಗರ ಕ್ಷೇತ್ರದಲ್ಲಿ ನನಗೆ ಹಾಲಪ್ಪ ಮಾತ್ರ ವಿರೋಧಿ, ಇನ್ಯಾರೂ ವಿರೋಧಿಗಳಲ್ಲ ಎಂದು ಪ್ರತಿಪಾದಿಸಿದರು.

ಎಂಡಿಎಫ್‌ನಲ್ಲಿ ಗಲಾಟೆ ಮಾಡಿಸಿ ಅಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸುವ ಹುನ್ನಾರ ಹರತಾಳು ಹಾಲಪ್ಪ ಮಾಡಿದ್ದರು. ಎಲ್ಲ ಜಾತಿಜನಾಂಗಗಳ ಸಹಕಾರದಿಂದ ನಾನು ಗೆದ್ದಿದ್ದೇನೆ. ಶಾಂತಿ ಸೌಹಾರ್ದತೆ ಕಾಪಾಡುವ ಜೊತೆಗೆ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಬೇಳೂರು ಭರವಸೆ ನೀಡಿದರು.

ಶಿಮುಲ್ ಅಧ್ಯಕ್ಷ, ಬಿಜೆಪಿ ಪ್ರಮುಖ ಶ್ರೀಪಾದ ಹೆಗಡೆ ನಿಸ್ರಾಣಿ ಮಾತನಾಡಿ, ತಮಗೆ ಸಂಬಂಧವೇ ಇಲ್ಲದ ಎಂಡಿಎಫ್ ಸರ್ವಸದಸ್ಯರ ಸಭೆಗೆ ಬಂದು ನನ್ನ ಮತ್ತು ನನ್ನ ಕುಟುಂಬದ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆಗೊಳಗಾದ ಜಗದೀಶ್ ಗೌಡ ಇವತ್ತೂ ಸರಿಯಾಗಿ ನಡೆಯಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ. ತಮ್ಮ ದುರಹಂಕಾರದ ವರ್ತನೆಯಿಂದ ಎಲ್ಲರನ್ನೂ ಹೆದರಿಸುವ ಕೆಲಸ ಹಿಂದಿನ ಶಾಸಕರು ಮಾಡಿದ್ದಾರೆ. ನಾನು ಸಾಗರಕ್ಕೆ ಬಂದರೆ ಶಾಂತಿ ಕದಡುತ್ತೇನೆ ಎಂದು ಪೊಲೀಸರ ಮೂಲಕ 107 ಕೇಸ್ ಸಹ ಹಾಕಿಸಿದ್ದರು. ಜನರು ದುರಹಂಕಾರ ಸಹಿಸದೆ ತಕ್ಕಪಾಠ ಕಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಶಾಸಕ ಬೇಳೂರು ಎಲ್ಲ ಜಾತಿಜನಾಂಗವನ್ನು ಒಟ್ಟಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ನಡೆಸುವ ಎಲ್ಲ ಕೆಲಸಕ್ಕೆ ಒಕ್ಕೂಟ ಬೆಂಬಲವಾಗಿ ನಿಲ್ಲುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕರಾಟೆ ತರಬೇತುದಾರ ಸನ್‌ಸೈ ಪಂಚಪ್ಪ, ಗೋರಕ್ಷಕ ಪುರುಷೋತ್ತಮ್, ಶಿಕ್ಷಕ ಗುರುರಾಜ ಎಂ.ಬಿ. ಅವರನ್ನು ಅಭಿನಂದಿಸಲಾಯಿತು. ಒಕ್ಕೂಟದ ಅಧ್ಯಕ್ಷ ಕೆ.ಎನ್.ಶ್ರೀಧರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯ ಅಪೆಕ್ಸ್ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಡಾ. ಆರ್.ಎಂ.ಮಂಜುನಾಥ ಗೌಡ, ಪ್ರಮುಖರಾದ ಶೇಷಗಿರಿಭಟ್ ಸಿಗಂದೂರು, ಯು.ಎಚ್.ರಾಮಪ್ಪ, ಬಿ.ಎ.ಇಂದೂಧರ ಗೌಡ, ಜಗದೀಶ್ ಗೌಡ, ರವೀಶ್ ಕುಮಾರ್, ಶೇಖರಪ್ಪ ಗೌಡ ಬೇಸೂರು, ಶ್ರೀಧರ ಭಟ್ ಕಲಸೆ, ಈಳಿ ಶ್ರೀಧರ್, ರಜನೀಶ್ ಹಕ್ರೆ, ಮಧುಮಾಲತಿ, ಅನಿಲ್ ಗೌಡ, ಮಂಜುನಾಥ ಶೆಟ್ಟಿ, ಕೆ.ಜಿ.ಜಗದೀಶ್ ಗೌಡ, ರಮೇಶ್ ಎಂ.ಬಿ. ಉಪಸ್ಥಿತರಿದ್ದರು. ಭಾರತಿ ರಾಮಚಂದ್ರಭಟ್ ಪ್ರಾರ್ಥಿಸಿದರು. ಗಣಪತಿ ಸ್ವಾಗತಿಸಿದರು. ಮಲ್ಲಿಕಾರ್ಜುನ ಹಕ್ರೆ ಪ್ರಾಸ್ತಾವಿಕ ಮಾತನಾಡಿದರು. ಚಂದ್ರಶೇಖರ್ ಎನ್.ಎಚ್. ನಿರೂಪಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.