ಆಂಧ್ರಪ್ರದೇಶದಿಂದ ರೈಲಿನಲ್ಲಿ ಗಾಂಜಾ ತರುತ್ತಿದ್ದ ಪೆಡ್ಲರ್ ಸೆರೆ
Team Udayavani, Jul 1, 2023, 9:30 PM IST
ಬೆಂಗಳೂರು: ಆಂಧ್ರಪ್ರದೇಶದಿಂದ ನಗರಕ್ಕೆ ರೈಲಿನಲ್ಲಿ ಗಾಂಜಾ ಪೂರೈಸುತ್ತಿದ್ದ ಅಂತಾರಾಜ್ಯ ಡ್ರಗ್ಸ್ ಪೆಡ್ಲರ್ ಕಾಟನ್ಪೇಟೆ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದು, 10 ಲಕ್ಷ ರೂ. ಮೌಲ್ಯದ 20 ಕೆ.ಜಿ. ಗಾಂಜಾ ಜಪ್ತಿ ಮಾಡಲಾಗಿದೆ.
ಆಂಧ್ರಪ್ರದೇಶದ ವಿಶಾಖಪಟ್ಟಣಂನ ಅರಕು ವ್ಯಾಲಿ ಮೂಲದ ವೆಂಕಟಾಲ ಸೀತಾರಾಮ (55) ಬಂಧಿತ.
ಗಾಂಜಾ ಸೇವನೆ ಹಾಗೂ ಮಾರಾಟ ಮಾಡಿ ಇತ್ತೀಚೆಗೆ ಸಿಕ್ಕಿ ಬಿದ್ದಿದ್ದ ಆರೋಪಿಯೊಬ್ಬ ವೆಂಕಟಾಲ ಸೀತಾರಾಮನಿಂದ ಗಾಂಜ ಖರೀದಿಸುತ್ತಿದ್ದ ಸಂಗತಿಯನ್ನು ವಿಚಾರಣೆ ವೇಳೆ ತಿಳಿಸಿದ್ದ. ಆರೋಪಿ ವೆಂಕಟಾಲ ಸೀತಾರಾಮ ಆಂಧ್ರ ಪ್ರದೇಶದಿಂದ ರೈಲಿನಲ್ಲಿ ಬೆಂಗಳೂರಿಗೆ ಯಾವ ದಿನದಲ್ಲಿ ಗಾಂಜಾ ತರುತ್ತಾನೆ ಎಂಬುದರ ಬಗ್ಗೆ ಆರೋಪಿ ಮಾಹಿತಿ ಕೊಟ್ಟಿದ್ದ. ಆ ಸಂದರ್ಭದಲ್ಲಿ ಪೊಲೀಸರು ರೈಲ್ವೆ ನಿಲ್ದಾಣದಲ್ಲಿ ನಿಗಾ ವಹಿಸಿ ಕಾರ್ಯಾಚರಣೆ ನಡೆಸಿದ್ದರು. ಆ ವೇಳೆ ಆಂಧ್ರದಿಂದ ಬೆಂಗಳೂರಿಗೆ ಬಂದಿದ್ದ ರೈಲಿನಿಂದ ವೆಂಕಟಾಲ ಸೀತಾರಾಮ ಗಾಂಜಾವಿದ್ದ ಚೀಲದೊಂದಿಗೆ ಇಳಿಯುವುದನ್ನು ಪೊಲೀಸರು ಗಮನಿಸಿದ್ದರು.
ಕೂಡಲೇ ಆತನನ್ನು ಸುತ್ತುವರೆದು ವಶಕ್ಕೆ ಪಡೆದು ಠಾಣೆಗೆ ತಂದು ವಿಚಾರಣೆ ನಡೆಸಿದಾಗ ವೆಂಕಟಾಲ ಸೀತಾರಾಮ ಬೆಂಗಳೂರಿಗೆ ಗಾಂಜಾ ಪೂರೈಸುತ್ತಿದ್ದ ವಿಚಾರ ಗೊತ್ತಾಗಿದೆ. 10 ಲಕ್ಷ ರೂ. ಮೌಲ್ಯದ 20 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.