ಹಾವೇರಿ: ಸಾಧನೆಗೆ ಸಾಧಕರ ಯಶೋಗಾಥೆ ಅನುಸರಿಸಿ-ಅರುಣಾರಾಜೇ

ಬಸವಣ್ಣನವರ ಕಾಯಕವೇ ಕೈಲಾಸ ವೆಂಬುದು ಕೆಲಸದ ಮಹತ್ವ ಸಾರುತ್ತದೆ.

Team Udayavani, Jul 1, 2023, 6:12 PM IST

ಹಾವೇರಿ: ಸಾಧನೆಗೆ ಸಾಧಕರ ಯಶೋಗಾಥೆ ಅನುಸರಿಸಿ-ಅರುಣಾರಾಜೇ

ಹಾವೇರಿ: ಪ್ರತಿಯೊಬ್ಬರಿಗೂ ಜೀವನದಲ್ಲಿ ಯಶಸ್ಸು ಗಳಿಸಬೇಕೆಂಬ ಆಸೆ ಇದ್ದೇ ಇರುತ್ತದೆ. ಯಶಸ್ಸು ಗಳಿಸಲು ಒಳ ಮಾರ್ಗಗಳಿವೆ. ಕಠಿಣ ದುಡಿಮೆ, ನಿರಂತರ ಸಾಧನೆ, ಸಮಾಜದಲ್ಲಿ ಗುರುತಿಸಿಕೊಳ್ಳಬೇಕೆಂಬ ಹಂಬಲ, ತುಡಿತ ಇವು ಯಶಸ್ಸಿನ ಮೆಟ್ಟಿಲುಗಳು. ಸಾಧನೆಯ ಉತ್ತುಂಗಕ್ಕೇರಿದವರ, ಮಹಾನ್‌ ಸಾಧಕರ ಜೀವನ ಕ್ರಮ, ಅವರ ಯಶೋಗಾಥೆಯನ್ನು ಅವಲೋಕಿಸಿದರೆ ಯಶಸ್ಸಿನ ಗುಟ್ಟು ನಮಗೆ ಅರಿವಾಗುತ್ತದೆ ಎಂದು ಭಾರತೀಯ ಚಿತ್ರರಂಗದ ನಿರ್ದೇಶಕಿ, ಚಿಂತಕಿ ಅರುಣಾರಾಜೇ ಪಾಟೀಲ ಹೇಳಿದರು.

ನಗರದ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಐಕ್ಯೂಎಸಿ ಘಟಕ ಆಯೋಜಿಸಿದ್ದ ಕೌಶಲ್ಯಾತ್ಮಕ ಸ್ವರಮೇಳ-ಮೃದು ಕೌಶಲ್ಯಗಳೊಟ್ಟಿಗೆ ಯಶಸ್ಸಿನ ಗುಟ್ಟು ವಿಷಯದ ಕಾರ್ಯಾಗಾರದಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಅವರು
ಮಾತನಾಡಿದರು.

ಬಹುತೇಕ ವಿದ್ಯಾರ್ಥಿಗಳು ಸಾಧನೆಯ ಕನಸು ಕಾಣುತ್ತಾರೆ. ಸಿದ್ಧತೆ ಇಲ್ಲದೇ ಮುನ್ನುಗ್ಗಲು ಯತ್ನಿಸುತ್ತಾರೆ. ನಿರೀಕ್ಷಿತ ಫಲಿತಾಂಶ ಸಿಗದೇ ಸೋಲಿನ ಕಡೆಗೆ ಸಾಗುತ್ತಾರೆ. ತಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಛಲದಿಂದ ಮುನ್ನಡೆಯುವತ್ತ ಚಿತ್ತ ಹರಿಸಬೇಕಾದದ್ದು ಅವಶ್ಯಕ. ತಮ್ಮ ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಾನ್‌ ಸಾಧಕರು ಹಲವಾರು ಜನರು ಇದ್ದಾರೆ. ಇಂತಹ ಸಾಧಕರ, ಸಾಧನೆಯ ಹಿಂದಿನ ಪ್ರೇರಕಶಕ್ತಿಯನ್ನು ವಿಶ್ಲೇಷಿಸಿ ಪ್ರೇರಣಾತ್ಮಕವಾಗಿ ಮುನ್ನಡೆಯುವ ಅಗತ್ಯತೆ ಇದೆ ಎಂದರು.

ಕೆಲಸ ಯಾವುದೇ ಇರಲಿ ಅದನ್ನು ಶಿಸ್ತುಬದ್ಧವಾಗಿ, ಸಮಯದ ಮಿತಿಯೊಳಗೆ ಜರುಗಬೇಕು. ಯಾವುದೇ ಕಾರ್ಯವನ್ನು ಅತ್ಯುತ್ತಮವಾಗಿ ಮಾಡಬೇಕೆಂಬ ತುಡಿತ-ಆಸೆ, ಸಾಧನೆ-ಯಶಸ್ಸಿನ ಮೊದಲ ಮೆಟ್ಟಿಲು. ಹೀಗಾಗಿ, ಉತ್ಕೃಷ್ಟತೆಯನ್ನು ತಲುಪಬೇಕೆಂಬ ಹಂಬಲ ಇರಬೇಕು. ನಿನಗೊಂದು ಕೊಠಡಿಯನ್ನು ಶುಚಿಗೊಳಿಸುವ ಕೆಲಸವನ್ನೇ ನೀಡಲಿ. ಆ ಕೆಲಸವನ್ನು ಪ್ರಾಮಾಣಿಕತೆ, ಶ್ರದ್ಧೆಯಿಂದ, ಆತ್ಮಸಾಕ್ಷಿ ಮೆಚ್ಚುವಂತೆ ಸಮಯದ ಮಿತಿಯೊಳಗೆ ಮಾಡಿ ಮುಗಿಸುವುದೇ ನಿನ್ನ ಗುರಿಯಾಗಿರಲಿ ಎಂದು ಮಹಾತ್ಮ ಗಾಂಧಿ  ಹೇಳಿದ್ದಾರೆ. ಬಸವಣ್ಣನವರ ಕಾಯಕವೇ ಕೈಲಾಸ ವೆಂಬುದು ಕೆಲಸದ ಮಹತ್ವ ಸಾರುತ್ತದೆ.

ಹಿರಿಯರ ಮಾರ್ಗದರ್ಶನದಲ್ಲಿ ಇಂದಿನವರು ಮುನ್ನಡೆದರೆ ಜೀವನದಲ್ಲಿ ಶ್ರೇಯಸ್ಸು ಹೊಂದಲು ಸಾಧ್ಯವಾದೀತು. ಅಲ್ಪ ಅವ ಧಿಯಲ್ಲಿ ಏನು ಸಾಧನೆ ಮಾಡಲು ಸಾಧ್ಯವಿದೆಯೋ ಸಾಧಿಸಿ-ಶೋಧಿಸಿ ಕೀರ್ತಿಶಾಲಿಗಳಾಗಬೇಕೆಂದು ವಿದ್ಯಾರ್ಥಿಗಳೊಟ್ಟಿಗೆ ಸಂವಹನ ನಡೆಸುತ್ತಲೇ ಕಿವಿಮಾತು ಹೇಳಿದರು. ಕೆಎಲ್‌ಇ ಸಂಸ್ಥೆ ಆಡಳಿತ ಮಂಡಳಿ ಸದಸ್ಯ ಎಂ.ಸಿ.ಕೊಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯೆ ಡಾ|ಸಂಧ್ಯಾ ಆರ್‌. ಕುಲಕರ್ಣಿ ಸ್ವಾಗತಿಸಿದರು. ಪ್ರೊ|ರೂಪಾ ಕೋರೆ ಪರಿಚಯಿಸಿದರು.

ಐಕ್ಯೂಎಸಿ ಸಂಯೋಜಕ ಪ್ರೊ|ಟಿ.ವಿ. ಚವ್ಹಾಣ ವಂದಿಸಿದರು. ಕಾರ್ಯಾಗಾರದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಸಮಯದ ಸದ್ಬಳಕೆ ಸಾಧನೆಗೆ ಸಹಕರಿಸುತ್ತದೆ. ಗೆಲುವು ಸಾಧಿಸಿದಾಗ ಹಿಗ್ಗದೇ, ಸೋಲನುಭವಿಸಿದಾಗ ಕುಗ್ಗದೇ ಜೀವನ ಸಾರ್ಥಕಗೊಳಿಸಬೇಕು. ಕಠಿಣ ಪರಿಶ್ರಮ, ನಿರಂತರ ಅಧ್ಯಯನ,ಸಂವಹನ ಕೌಶಲ್ಯ ಹಾಗೂ ಆತ್ಮವಿಶ್ವಾಸ ಹೊಂದಿದವರಾಗಿ ಯಶಸ್ಸಿನತ್ತ ಮುಖ ಮಾಡಬೇಕು.
ಅರುಣಾರಾಜೇ ಪಾಟೀಲ,
ಭಾರತೀಯ ಚಿತ್ರರಂಗದ ನಿರ್ದೇಶಕಿ

ಟಾಪ್ ನ್ಯೂಸ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

Havery ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Haveri: ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

4

Savanur: ಮನೆಯವರು ಟ್ರಿಪ್‌ ಹೋದ ಸಂದರ್ಭದಲ್ಲಿ ಮನೆಯಿಂದ ಕಳ್ಳತನ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

11

Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.