ಯುವಕರ ಮೇಲೆ ಹಲ್ಲೆ: ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಠಾಣೆ ಎದುರು ಪ್ರತಿಭಟನೆ


Team Udayavani, Jul 1, 2023, 7:57 PM IST

ಯುವಕರ ಮೇಲೆ ಹಲ್ಲೆ: ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಠಾಣೆ ಎದುರು ಪ್ರತಿಭಟನೆ

ಭಟ್ಕಳ: ಕಳೆದ ಮೂರು ದಿನಗಳ ಹಿಂದೆ ಗೋಕಳ್ಳರನ್ನು ಹಿಂಬಾಲಿಸಿಕೊಂಡು ಹೋದ ತಾಲೂಕಿನ ಮೂವರು ಯುವಕರ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು ದೂರು ದಾಖಲಿಸಲಾಗಿದ್ದರೂ ಸಹ ಬಂಧನ ಮಾಡುವಲ್ಲಿ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಡಿ.ವೈ.ಎಸ್.ಪಿ. ಅವರನ್ನು ಭೇಟಿಯಾಗಿ ಆರೋಪಿತರನ್ನು ಬಂಧಿಸುವಂತೆ ನಗರ ಠಾಣೆಯ ಎದುರು ಪ್ರತಿಭಟನೆ ನಡೆಸಿದರು.

ಬಿ.ಜೆ.ಪಿ. ಮುಖಂಡ ಗೋವಿಂದ ನಾಯ್ಕ ಮಾತನಾಡಿ ಗುರುವಾರ ರಾತ್ರಿ ಗೋ ಸಾಗಾಟ ಮಾಡುತ್ತಿರುವ ಪಿಕ್‌ಅಪ್ ವಾಹನ ಬೆನ್ನಟ್ಟಿ ಹೋದ ಯುವಕರಿಗೆ 50-60 ಜನರು ಹಲ್ಲೆ ನಡೆಸಿದ ಬಗ್ಗೆ ದೂರು ದಾಖಲಾಗಿದ್ದರೂ ಕೂಡಾ ಇನ್ನೂ ತನಕ ಆರೋಪಿಗಳನ್ನು ಬಂದಿಸುವಲ್ಲಿ ಇಲಾಖೆ ಮನಸ್ಸು ಮಾಡಿಲ್ಲ. ತಕ್ಷಣ ಅವರನ್ನು ಬಂಧುಸುವದಕ್ಕೆ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಹಲ್ಲೆಗೊಳಗಾದ ಪ್ರವೀಣ ಶೆಟ್ಟಿ ಮಾತನಾಡಿ ಗುರುವಾರ ತಡರಾತ್ರಿ ನಾವು ಕಾರಿನಲ್ಲಿ ಹೋಗುತ್ತಿರುವಾಗ ಮಹೇಂದ್ರ ಪಿಕ್‌ಅಪ್ ವಾಹನದಲ್ಲಿ ಗೋವುಗಳನ್ನು ಸಾಗಾಟ ಮಾಡುತ್ತಿರುವುದನ್ನು ಖಚಿತಪಡಿಸಿಕೊಂಡು ವಾಹನವನ್ನು ಹಿಂಬಾಲಿಸಿಕೊಂಡು ಹೋಗಿದ್ದೆವು.

ಕುಂಟವಾಣಿ ಚೆಕ್ ಪೋಸ್ಟ್ ಬಳಿಯಲ್ಲಿ ಪೊಲಿಸರಿಗೆ ವಿಷಯ ತಿಳಿಸಿದ್ದು, ನಂತರ ನಗರದಲ್ಲಿ ಪುರಸಭೆಯ ಹತ್ತಿರ ಇರುವ ಗಸ್ತು ಪೊಲೀಸರಿಗೂ ಕೂಡಾ ವಿಷಯ ತಿಳಿಸಿದ್ದೆವು. ಆದರೆ ವಾಹನವನ್ನು ಬೆನ್ನಟ್ಟಿ ಹೋದ ನಮಗೆ ಮಾರುಕಟ್ಟೆಯ ಒಳಗೆ ಹೋಗುತ್ತಿದ್ದಂತೆಯೇ 50-60 ಜನರ ಗುಂಪು ಕೈಯಿಂದ, ದೊಣ್ಣೆಯಿಂದ ಹಲ್ಲೆ ನಡೆಸಿತು ಎಂದು ಹೇಳಿದರು.

ಹಿಂದೂ ಸಂಘಟನೆ ಕಾರ್ಯಕರ್ತ ವಿಶ್ವನಾಥ ಮಾತನಾಡಿ ಮೂವರ ಮೇಲೆ ನಡೆದ ಹಲ್ಲೆಯಿಂದ ಗಾಯಗೊಂಡ ಅವರನ್ನು ಪೊಲೀಸರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ಮಾಡಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದರೂ ಆರೋಪಿಗಳ ಬಂಧನಕ್ಕೆ ವಿಳಂಬ ಮಾಡುತ್ತಿದ್ದಾರೆ ಎಂದು ದೂರಿದರು.

ಹಿಂದೂ ಸಂಘಟನೆ ಕಾರ್ಯಕರ್ತ ಶ್ರೀನಿವಾಸ ನಾಯ್ಕ ಮಾತನಾಡಿ ಗೋಸಾಗಾಟ ಮಾಡುತ್ತಿರುವ ಪಿಕ್‌ಅಪ್ ವಾಹನವನ್ನು ಹಿಂಬಾಲಿಸಿಕೊಂಡು ಬಂದು ನಗರದ ಖಲೀಫಾ ಸ್ಟ್ರೀಟ್ ಗೆ ಹೋದಾಗ ಗುಂಪು ಹಲ್ಲೆ ನಡೆಸಿದೆ. ಹಲ್ಲೆ ನಡೆಸಿದವರು ಯಾರು ಎಂದು ತಿಳಿದೂ ಅವರ ಬಂಧನ ಮಾಡುತ್ತಿಲ್ಲ. ಶೀಘ್ರ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಇನ್ಸಪೆಕ್ಟರ್ ಗೋಪಿಕೃಷ್ಣ, ಡಿ.ವೈ.ಎಸ್.ಪಿ. ಶ್ರೀಕಾಂತ ನಾಯ್ಕ ಅವರು ತಮ್ಮನ್ನು ಭೇಟಿಯಾದ ತಂಡಕ್ಕೆ ಆರೋಪಿತರನ್ನು ಬಂಧಿಸುವ ಬರವಸೆ ನೀಡಿದ ನಂತರ ಪ್ರತಿಭಟನಾಕಾರರು ವಾಪಾಸಾಗಿದ್ದು ಮೂರು ದಿನಗಳ ಒಳಗಾಗಿ ಆರೋಪಿಗಳ ಬಂಧನವಾಗದೇ ಇದ್ದಲ್ಲಿ ಮತ್ತೆ ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: World Cup Qualifiers: ವೆಸ್ಟ್ ಇಂಡೀಸ್ ಗೆ ಸೋಲಿನ ಬರೆ ಹಾಕಿದ ಸ್ಕಾಟ್ಲೆಂಡ್

ಟಾಪ್ ನ್ಯೂಸ್

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.