ಜು.20ರಿಂದ ಆ.11ರವರೆಗೆ ಸಂಸತ್ ಅಧಿವೇಶನ
Team Udayavani, Jul 2, 2023, 8:15 AM IST
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜು.20ರಿಂದ ಆ.11ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. ಎಲ್ಲ ಪಕ್ಷಗಳು ಒಂದಾಗಿ ಸಂಸತ್ ಅಧಿವೇಶನವನ್ನು ರಚನಾತ್ಮಕವಾಗಿ ನಡೆಸಲು ಸಹಕರಿಸಬೇಕು ಎಂದು ಕೇಳಿಕೊಂಡಿದ್ದಾರೆ.
ಈ ಅಧಿವೇಶನ ಹಲವು ಕಾರಣಗಳಿಂದ ಮಹತ್ವ ಪಡೆದಿದೆ. ಇತ್ತೀಚೆಗೆ ಪ್ರಧಾನಿ ಮೋದಿ ಏಕರೂಪ ನಾಗರಿಕ ಸಂಹಿತೆ ಅಗತ್ಯ ಎಂದು ಬಿಜೆಪಿ ಸಭೆಯೊಂದರಲ್ಲಿ ಹೇಳಿದ್ದಾರೆ. ಇದೇ ಅಧಿವೇಶನದಲ್ಲಿ ಈ ಕುರಿತ ಮಸೂದೆ ಮಂಡನೆಯಾದರೂ ಆಗಬಹುದು. ಈಗಾಗಲೇ 17 ಪ್ರತಿಪಕ್ಷಗಳು ಒಟ್ಟಾಗಿ ಬಿಜೆಪಿಯನ್ನು ಎಲ್ಲ ರೀತಿಯಿಂದ ಹಣಿಯಲು ಸಿದ್ಧತೆ ಮಾಡಿಕೊಂಡಿವೆ. ಹಾಗಾಗಿ ಸಮಾನ ನಾಗರಿಕ ಸಂಹಿತೆ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಬಹುದು. ಜತೆಗೆ, ಮಣಿಪುರ ಹಿಂಸಾಚಾರ, ದೆಹಲಿಯ ರಾಷ್ಟ್ರ ರಾಜಧಾನಿ ಪ್ರದೇಶ ಸರ್ಕಾರ(ತಿದ್ದುಪಡಿ) ಸುಗ್ರೀವಾಜ್ಞೆ ಕೂಡ ಭಾರೀ ಚರ್ಚೆಗೆ ಗ್ರಾಸವಾಗಬಹುದು.
ಇನ್ನೊಂದು ಮುಖ್ಯ ಸಂಗತಿಯೆಂದರೆ, ಸಂಸತ್ ಅಧಿವೇಶನ ಎಲ್ಲಿ ನಡೆಯುತ್ತದೆ ಎಂಬ ಪ್ರಶ್ನೆಗೆ ಈ ಬಾರಿ ಉತ್ತರ ಸಿಗುತ್ತದೆ. ಮೇ 28ರಂದು ಮೋದಿ ನೂತನ ಸಂಸತ್ ಭವನ ಉದ್ಘಾಟಿಸಿದ್ದಾರೆ. ಈಗಿನ ಅಂದಾಜಿನ ಪ್ರಕಾರ ಆರಂಭದಲ್ಲಿ ಅಧಿವೇಶನ ಹಳೆಯ ಭವನದಲ್ಲೇ ನಡೆಯಲಿದೆ. ನಂತರ ಹೊಸ ಭವನಕ್ಕೆ ಸ್ಥಳಾಂತರಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.