ನನಗೆ ಮಾತ್ರ ನೋಟಿಸ್ ಯಾಕೆ: ರೇಣುಕಾಚಾರ್ಯ ಪ್ರಶ್ನೆ
-ಬಿಜೆಪಿಯಲ್ಲಿ ಶಿಸ್ತು ಸಮಿತಿ ಇದೆ ಎಂಬುದು ಗೊತ್ತಾಗಿದ್ದೇ ನೋಟಿಸ್ ಬಂದ ಮೇಲೆ
Team Udayavani, Jul 2, 2023, 7:30 AM IST
ಬೆಂಗಳೂರು: ನನಗೆ ಮಾತ್ರ ನೋಟಿಸ್ ಕೊಟ್ಟು ಉಳಿದವರಿಗೆ ಯಾಕೆ ಕೊಟ್ಟಿಲ್ಲ? ಬಿಜೆಪಿಯಲ್ಲಿ ಶಿಸ್ತು ಸಮಿತಿ ಇದೆ ಎಂಬುದು ನನಗೆ ಗೊತ್ತಾಗಿದ್ದೇ ನೋಟಿಸ್ ಬಂದ ಮೇಲೆ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ರಾಜ್ಯ ನಾಯಕರ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ನೋಟಿಸ್ಗೆ ಹೆದರಿ ಬಾಯಿ ಮುಚ್ಚಿಕೊಂಡು ಸುಮ್ಮನಿರುತ್ತೇನೆ ಎಂದುಕೊಂಡರೆ ಅದು ಅವರ ಭ್ರಮೆ ಎಂದು ತಿರುಗೇಟು ನೀಡಿದರು.
ನಾನು ಯಾರಿಗೂ ಹೆದರುವವನಲ್ಲ. ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಪಕ್ಷದಲ್ಲಿ ನಡೆದಿರುವ ಬೆಳವಣಿಗೆಗಳ ಕುರಿತು ಮಾಧ್ಯಮದ ಮುಂದೆ ಹೇಳಿದ್ದೇನೆ. ನನಗೆ ಮಾತ್ರ ನೋಟಿಸ್ ಕೊಟ್ಟಿರುವ ಉದ್ದೇಶವಾದರೂ ಏನು? ಉಳಿದವರಿಗೆ ಯಾಕೆ ನೋಟಿಸ್ ಕೊಟ್ಟಿಲ್ಲ? ಯಡಿಯೂರಪ್ಪನವರ ಪರವಾಗಿ ಮಾತನಾಡಿದ್ದಕ್ಕೆ ನನ್ನನ್ನು ಗುರಿಯಾಗಿಟ್ಟುಕೊಂಡು ನೋಟಿಸ್ ಕೊಟ್ಟಿದ್ದಾರೆ. ರಾಜ್ಯಾಧ್ಯಕ್ಷರು 11 ಮಂದಿಗೆ ನೋಟಿಸ್ ನೀಡಿದ್ದೇವೆಂದ ಬಳಿಕ ರವಿಕುಮಾರ್ ನನ್ನೊಬ್ಬನಿಗೆ ನೋಟಿಸ್ ಕೊಟ್ಟಿದ್ದೇವೆಂದು ಹೇಳುವುದರ ಮರ್ಮವೇನೆಂದು ಪ್ರಶ್ನಿಸಿದರು.
ಕರ್ನಾಟಕದಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಸಂಘಟಿಸಿದ್ದು ಯಡಿಯೂರಪ್ಪ. ಅವರೊಬ್ಬ ಅಗ್ರಮಾನ್ಯ ನಾಯಕ. ಸೈಕಲ್ ಹೊಡೆದು ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದಾರೆ. ಅಂಥವರನ್ನು ಷಡ್ಯಂತ್ರ ಮಾಡಿ ಅವಮಾನಿಸಿ ಅಗೌರವವಾಗಿ ನಡೆಸಿಕೊಂಡು ಅಧಿಕಾರದಿಂದ ಕೆಳಗಿಳಿಸಿದರು. ಯಡಿಯೂರಪ್ಪ ನಮ್ಮ ನಾಯಕರು. ನನ್ನ ಮೂಲಕ ಹೇಳಿಕೆ ಕೊಟ್ಟಿದ್ದಾರೆಂದು ಕೆಲವರು ಮಾತನಾಡುತ್ತಾರೆ. ಅಂತಹ ಕೀಳುಮಟ್ಟದ ರಾಜಕಾರಣ ಅವರೆಂದೂ ಮಾಡಿಲ್ಲ. ಅವಮಾನ ಮಾಡಿದರೂ ಗೌರವದಿಂದ ರಾಜೀನಾಮೆ ಕೊಟ್ಟರು ಎಂದು ಹೇಳಿದರು.
ಹೊಂದಾಣಿಕೆ ರಾಜಕಾರಣದ ಬಗ್ಗೆ ಸಂಸದರು ಮರು ಮಾತನಾಡಿದ್ದಾರೆ. ಮೈಸೂರಿನಲ್ಲಿ ಇದೇ ಸಂಸದರು ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಂಡಿರುವುದು ಗೊತ್ತಿಲ್ಲವೇ ಎಂದು ಸಂಸದ ಪ್ರತಾಪಸಿಂಹ ವಿರುದ್ಧವೂ ವಾಗ್ಧಾಳಿ ನಡೆಸಿದರು.
ನಾನು ಶೀಘ್ರದಲ್ಲೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಇಲ್ಲಿನ ವಸ್ತುಸ್ಥಿತಿ ಬಗ್ಗೆ ವಿವರಣೆ ನೀಡುತ್ತೇನೆ. ಯಾರಿಗೂ ಹೆದರಿ ಸುಮ್ಮನೆ ಕುಳಿತುಕೊಳ್ಳುವುದಿಲ್ಲ . ಇನ್ನುಮುಂದೆ ಮಾಧ್ಯಮಗಳ ಮುಂದೆ ಬಹಿರಂಗ ಹೇಳಿಕೆಗಳನ್ನು ಕೊಡಬಾರದು ಎಂದು ನಮ್ಮ ನಾಯಕರಾದ ಯಡಿಯೂರಪ್ಪನವರು ಹೇಳಿದ್ದಾರೆ. ಅವರ ಮಾತಿಗೆ ಬೆಲೆ ಕೊಡುತ್ತೇನೆಂದು ಹೇಳಿದರು.
ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ನನಗೆ ಮೋದಿ ಮತ್ತು ಯಡಿಯೂರಪ್ಪ ಹಾಗೂ ಕ್ಷೇತ್ರದ ಜನತೆಯ ಆಶೀರ್ವಾದವಿದೆ. ನನ್ನನ್ನು ಬಲಿಪಶು ಮಾಡುವುದು ಇಲ್ಲವೇ ಗುರಿ ಮಾಡುವುದು ಕನಸಿನ ಮಾತು. ಪಕ್ಷಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್ಗೆ ಜಿಪಿಎಸ್ ಕಣ್ಗಾವಲು!
Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ
PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ
Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ
TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!
Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು
Udupi: ಚೆಕ್ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ
Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ
Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್ಗೆ ಜಿಪಿಎಸ್ ಕಣ್ಗಾವಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.