Linganamakki Reservoir; ವಿದ್ಯುತ್ ಉತ್ಪಾದನೆಗೆ ಸಂಕಷ್ಟ
Team Udayavani, Jul 2, 2023, 8:44 AM IST
ಸಾಗರ: ನಾಡಿಗೆ ಅತ್ಯಂತ ಕಡಿಮೆ ದರದಲ್ಲಿ ವಿದ್ಯುತ್ ಒದಗಿಸುತ್ತಿರುವ ಲಿಂಗನಮಕ್ಕಿ ಜಲಾಶಯದಲ್ಲಿ ಮಳೆಯ ಕೊರತೆಯ ಹಿನ್ನೆಲೆಯಲ್ಲಿ ನೀರಿನ ಸಂಗ್ರಹ ತೀವ್ರ ಪ್ರಮಾಣ ಇಳಿಕೆಯಾಗಿದೆ. ಈಗಿರುವ ನೀರಿನ ಪ್ರಮಾಣದಲ್ಲಿ ಮುಂದಿನ 20 ದಿನಗಳ ಕಾಲ ಮಾತ್ರ ವಿದ್ಯುತ್ ಉತ್ಪಾದನೆ ಸಾಧ್ಯ ಎಂದು ಕೆಪಿಸಿ ಮೂಲಗಳು ತಿಳಿಸಿವೆ.
ಈ ಕುರಿತು ಮಾಹಿತಿ ನೀಡಿರುವ ಕೆಪಿಸಿ ವಿದ್ಯುತ್ ವಿಭಾಗದ ಮುಖ್ಯ ಎಂಜಿನಿಯರ್ ನಾರಾಯಣ ಗಜಕೋಶ್, ಸಮುದ್ರ ಮಟ್ಟದಿಂದ 1819 ಅಡಿ ಗರಿಷ್ಠ ಮಟ್ಟದವರೆಗೆ ನೀರಿನ ಸಂಗ್ರಹ ಸಾಮರ್ಥ್ಯವಿರುವ ಲಿಂಗನಮಕ್ಕಿ ಜಲಾಶಯದಲ್ಲಿ ಪ್ರಸ್ತುತ 1740.35 ಅಡಿ ನೀರಿನ ಸಂಗ್ರಹವಿದೆ. ಗರಿಷ್ಠ ಮಟ್ಟವನ್ನು ತಲುಪಲು 79 ಅಡಿ ನೀರಿನ ಸಂಗ್ರಹದ ಅಗತ್ಯ ಇದೆ. ಕಳೆದ ಸಾಲಿನ ಇದೇ ದಿನದಂದು ಸರಿಸುಮಾರು 14 ಅಡಿ ನೀರು ಜಾಸ್ತಿಯಿತ್ತು. ಆಗ 1754.64 ಅಡಿ ನೀರಿನ ಸಂಗ್ರಹವಿತ್ತು. ಇವತ್ತಿನ ಪ್ರಮಾಣವನ್ನು ಪರಿಗಣನೆಗೆ ತೆಗೆದುಕೊಂಡರೆ 10 ವರ್ಷಗಳಲ್ಲಿ ಅತಿ ಕಡಿಮೆ ನೀರಿನ ಸಂಗ್ರಹ ಇದೆ ಎನ್ನಬಹುದು ಎಂದು ಅವರು ತಿಳಿಸಿದರು.
ಈಗ ಜಲಾಶಯದ ಸ್ಲ್ಯೂಸ್ ಗೇಟ್ ಮೂಲಕ 1,356 ಕ್ಯುಸೆಕ್ ನೀರು ಹೊರಹಾಯುತ್ತಿದ್ದು, ಈ ನೀರಿನಿಂದ ಶರಾವತಿ ಜಲವಿದ್ಯುದಾಗರದಲ್ಲಿ 4 ದಶಲಕ್ಷ ಯೂನಿಟ್, ಮಹಾತ್ಮ ಗಾಂಧಿ ಮತ್ತು ಗೇರುಸೊಪ್ಪ ಜಲವಿದ್ಯುದಾಗರದಲ್ಲಿ ತಲಾ 1 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆಯನ್ನು ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಶರಾವತಿ ಜಲಾನಯ ಪ್ರದೇಶವಾದ ಕಾರ್ಗಲ್ ಹಾಗೂ ಹೊಸನಗರ ಭಾಗಗಳಲ್ಲಿ ವ್ಯಾಪಕ ಮಳೆಯಾಗಿ ಜಲಾಶಯಕ್ಕೆ ನೀರಿನ ಹರಿವು ಜಾಸ್ತಿಯಾದರೆ ವಿದ್ಯುತ್ ಉತ್ಪಾದನೆ ಮುಂದುವರೆಯಲಿದೆ. ಒಂದೊಮ್ಮೆ ಮಲೆನಾಡಿನಲ್ಲಿ ಮಳೆ ಕೈಕೊಟ್ಟರೆ ಕೆಪಿಸಿ ಇತಿಹಾಸದಲ್ಲಿ ವಿದ್ಯುತ್ ಉತ್ಪಾದನೆಯೇ ನಿಂತ ಆತಂಕದ ಇತಿಹಾಸ ನಿರ್ಮಾಣವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ
Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mann Ki Baat; ಸಕಾರಾತ್ಮಕ, ಸ್ಫೂರ್ತಿದಾಯಕ ಕಥೆಗಳನ್ನು ಪರಿಚಯಿಸಿದೆ: ಮೋದಿ
BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ
Lokayukta ADGP ಚಂದ್ರಶೇಖರ್ ಬ್ಲಾಕ್ಮೇಲರ್, ಕ್ರಿಮಿನಲ್:ಎಚ್ಡಿಕೆ ಕೆಂಡಾಮಂಡಲ
Mangaluru: ಟ್ರಾಫಿಕ್ ಸಿಗ್ನಲ್ ಕಾರ್ಯಾಚರಣೆ ಯಾವಾಗ?; ಇಲಾಖೆಗೆ ಸಿಕ್ಕಿಲ್ಲ ಕಂಟ್ರೋಲ್
BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.