ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಆದ್ಯತೆ: ನಂಜೇಗೌಡ


Team Udayavani, Jul 2, 2023, 3:50 PM IST

ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಆದ್ಯತೆ: ನಂಜೇಗೌಡ

ಮಾಸ್ತಿ: ಬಡವರು ಮತ್ತು ಸಾಮಾನ್ಯ ವರ್ಗದವರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು, ತಾಲೂಕಿನ ಅಭಿವೃದ್ಧಿಗಾಗಿ ಅಧಿಕಾರಿ ವರ್ಗಗಳ ಬದಲಾವಣೆ ಮಾಡಲಾಗುತ್ತಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.

ಮಾಸ್ತಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ಮಾಸ್ತಿ, ತುರುಣಿಸಿ ಹಾಗೂ ಹಸಾಂಡಹಳ್ಳಿ ಗ್ರಾಮ ಪಂಚಾಯಿತಿ ಮಟ್ಟದ ಮುಖಂಡರ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುವ ಸಮಯದಲ್ಲಿ ಬಡವರು ಸಾಮಾನ್ಯ ವರ್ಗದವರಿಗೆ ಸರ್ಕಾರಿ ಕಚೇರಿಗಳಲ್ಲಿ ಯಾವುದೇ ಕೆಲಸ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿರಲಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಕೇವಲ ದಲ್ಲಾಳಿಗಳ ದರ್ಬಾರ ಆಗಿತ್ತು. ಈಗ ರಾಜ್ಯದಲ್ಲಿ ಮತ್ತು ತಾಲೂಕಿನಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತ ನಡೆಸುತ್ತಿದ್ದು, ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗಾಗಿ ಸಹಕಾರ ನೀಡಿದಂತಹ ಅಧಿಕಾರಿಗಳನ್ನು ಬೇರೆ ಕಡೆ ಕಳುಹಿಸಲಾಗುತ್ತಿದೆ ಎಂದು ತಿಳಿಸಿದರು.

ಹಂತ, ಹಂತವಾಗಿ ಗ್ಯಾರಂಟಿ ಜಾರಿಗೆ: ಕಾಂಗ್ರೆಸ್‌ ಪಕ್ಷವು ಸಾಮಾಜಿಕ ನ್ಯಾಯದಡಿಯಲ್ಲಿ ಎಲ್ಲಾ ಜಾತಿ ಧರ್ಮಗಳವರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಆಡಳಿತ ಅವಧಿಯಲ್ಲಿ ಹಗರಣಗಳನ್ನು ಮಾಡಿದ್ದರಿಂದ ವಿಧಾನಸಭಾ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಿದ್ದಾರೆ. ಕಾಂಗ್ರೆಸ್‌ ಪಕ್ಷವು ಕೊಟ್ಟ ಮಾತಿನಂತೆ ನಡೆಯುತ್ತದೆ. ನುಡಿದಂತೆ ನಡೆಯುವ ಏಕೈಕ ಪಕ್ಷವೆಂದರೆ ಕಾಂಗ್ರೆಸ್‌ ಪಕ್ಷವಾಗಿದ್ದು, ಕೊಟ್ಟಂತ 5 ಗ್ಯಾರಂಟಿಗಳಲ್ಲಿ ಹಂತ ಹಂತವಾಗಿ ಎಲ್ಲಾ ಗ್ಯಾರಂಟಿಗಳನ್ನು ತಲುಪಿಸುವ ಕೆಲಸ ಮಾಡಲಾಗುತ್ತಿದೆ. ತಾಲೂಕಿನಲ್ಲೂ ಸಹ ಅಭಿವೃದ್ಧಿ ಮಾಡಬೇಕೆನ್ನುವ ನಿಟ್ಟಿನಲ್ಲಿ ಅಧಿಕಾರಿ ವರ್ಗಗಳ ಬದಲಾವಣೆ ಮಾಡಲಾಗುತ್ತಿದೆ. ತಾಲೂಕಿನ 28 ಗ್ರಾಮ ಪಂಚಾಯಿತಿ ಎಲ್ಲಾ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಯಾಗ ಬೇಕಾಗಿರುವುದರಿಂದ ತಾಲೂಕಿಗೆ ರಾಜ್ಯದಿಂದ ವಿಶೇಷ ಅನುದಾನಗಳನ್ನು ತಂದು ಅಭಿವೃದ್ಧಿ ಮಾಡಲಾಗುವುದು. ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಮೂಲಭೂತ ಸೌಕರ್ಯಗಳಾದ ರಸ್ತೆ ಚರಂಡಿ ವಿದ್ಯುತ್‌ ದೀಪ, ಕುಡಿಯುವ ನೀರು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಂತೆ ನೋಡಿ ಕೊಳ್ಳಬೇಕು ಎಂದು ಎಂದು ತಿಳಿಸಿದರು.

ಮಾಸ್ತಿ ಅಭಿವೃದ್ಧಿಗೆ ವಿಶೇಷ ಅನುದಾನ: ನನ್ನ ಗೆಲುವಿಗೆ ಲೀಡ್‌ ನೀಡಿ ಸಹಕಾರ ನೀಡಿದ ಮಾಸ್ತಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಕಳೆದ ಆಡಳಿತದಲ್ಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ್‌ ವಸತಿ ಶಾಲೆ ನಿರ್ಮಾಣಕ್ಕೆ 25 ಕೋಟಿ ರೂ. ಬಿಡುಗಡೆ, ಕೆಪಿಎಸ್‌ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ 5 ಕೋಟಿ ರೂ. ಬಿಡುಗಡೆ ಮಾಡಿಸಿರು ವುದು ಸೇರಿದಂತೆ ಹಲವಾರು ರೀತಿಯ ಅಭಿವೃದ್ಧಿ ಕೆಲಸಗಳನ್ನು ಮಾಡಿಸಿದ್ದೇನೆ. ಮುಂದಿನ ದಿನಗಳಲ್ಲೂ ಸಹ ಮಾಸ್ತಿಗೆ ವಿಶೇಷ ಅನುದಾನ ತಂದು ಮಾದರಿ ಯಾಗಿ ಅಭಿವೃದ್ಧಿಪಡಿಸುತ್ತೇನೆ ಎಂದು ಹೇಳಿದರು.

ಮಾಸ್ತಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಿಜಯ್‌ ನರಸಿಂಹ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಚನ್ನರಾಯಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಎಚ್‌.ಕೃಷ್ಣಕುಮಾರ್‌, ಮಾಜಿ ಸದಸ್ಯ ಸರಾªರ್‌ ಬೇಗ್‌, ತಾಪಂ ಮಾಜಿ ಅಧ್ಯಕ್ಷ ಶ್ರೀನಿವಾಸ್‌, ಗ್ರಾಪಂ ಅಧ್ಯಕ್ಷ ಶೇಖ್‌ ಇಮ್ರಾನ್‌, ಮಾಜಿ ಅಧ್ಯಕ್ಷರಾದ ಮೋಹನ್‌ ರಾವ್‌, ಜೆಸಿಬಿ ನಾಗರಾಜ್‌, ಶೌಕತ್‌, ಭಾಸ್ಕರ್‌ಗೌಡ, ಹಾಲು ಡೇರಿ ಅಧ್ಯಕ್ಷ ಶ್ರೀನಿವಾಸ್‌ ಮೂರ್ತಿ, ಸೇವಾ ಸಹಕಾರ ಸಂಘದ ಅಧ್ಯಕ್ಷ ಜಿ.ಸಿ.ನಾರಾಯಣಸ್ವಾಮಿ, ಕೆಪಿಎಸ್‌ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಕ್ರಂ ಪಾಷ, ಅಮರನಾರಾಯಣ, ಚೇತನ್‌ಕುಮಾರ್‌, ಕೆ.ಎನ್‌. ಮುನಿಯಪ್ಪ, ಮುನಿಸ್ವಾಮಿಗೌಡ, ರಾಜ್‌ಕುಮಾರ್‌ ಸೇರಿದಂತೆ ಮಾಸ್ತಿ, ತುರುಣಿಸಿ ಹಾಗೂ ಹಸಾಂಡಹಳ್ಳಿ ಗ್ರಾಪಂನ ಸದಸ್ಯರು, ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.