Karnataka: ಉದ್ಯಮಿಗಳಿಗೆ ಮತ್ತೆ ವಿದ್ಯುದಾಘಾತ!
- ಮುಕ್ತ ಮಾರುಕಟ್ಟೆಯಲ್ಲಿ ಖರೀದಿಸುವವರಿಗೆ ವಿದ್ಯುತ್ ಸಾಗಣೆ ವೆಚ್ಚ ಅನ್ವಯ
Team Udayavani, Jul 3, 2023, 7:45 AM IST
ಬೆಂಗಳೂರು: “ದುಬಾರಿ ಬಿಲ್” ಹೊರೆ ತಗ್ಗಿಸಿಕೊಳ್ಳಲು ಇನ್ನಿಲ್ಲದ ಸರ್ಕಸ್ ನಡೆಸುತ್ತಿರುವ ಉದ್ಯಮಿಗಳಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ) ಪರೋಕ್ಷವಾಗಿ ಮತ್ತೂಂದು “ಶಾಕ್” ನೀಡಿದೆ!
ಮುಕ್ತ ಮಾರುಕಟ್ಟೆಯಲ್ಲಿ ವಿದ್ಯುತ್ ಖರೀದಿಸುವವರಿಗೆ ಆ ವಿದ್ಯುತ್ ಸಾಗಾಣಿಕೆ ವೆಚ್ಚ (ವೀಲಿಂಗ್ ಚಾರ್ಜ್)ಕ್ಕೆ ಪ್ರತೀ ಯೂನಿಟ್ಗೆ 35 ಪೈಸೆ ಹೆಚ್ಚುವರಿ “ತೆರಿಗೆ ಭಾರ’ (ಹೆಚ್ಚುವರಿ ಸರ್ಚಾರ್ಜ್) ವಿಧಿಸಿ ಜೂನ್ನಿಂದ ಪೂರ್ವಾನ್ವಯ ಆಗುವಂತೆ ಆದೇಶ ಹೊರಡಿಸಿದೆ. ಪರಿಣಾಮವಾಗಿ ತಮ್ಮದೇ ಆದ ವಿದ್ಯುತ್ ಉತ್ಪಾದನ ಘಟಕಗಳನ್ನು ಹೊರತುಪಡಿಸಿ, ಮುಕ್ತ ಮಾರುಕಟ್ಟೆಯಲ್ಲಿ ವಿದ್ಯುತ್ ಖರೀದಿಸುವ ಉದ್ಯಮಿಗಳಿಗೆ ಇದರ ಹೊರೆ ಬೀಳಲಿದೆ.
ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ಕಳೆದ ಮೇ 12ರಂದು ಹೊರಡಿಸಿದ್ದ ಆದೇಶದಲ್ಲಿ ಈ ವರ್ಗಕ್ಕೆ ಪ್ರತೀ ಯೂನಿಟ್ಗೆ 1.48 ರೂ. ಹೆಚ್ಚುವರಿ ಸರ್ಚಾರ್ಜ್ ವಿಧಿಸಿ ಆದೇಶ ಹೊರಡಿಸಿತ್ತು. ಅನಂತರ ಕೆಇಆರ್ಸಿಯ ಈ ಆದೇಶವನ್ನು ಪ್ರಶ್ನಿಸಿ ಸೋಹನ್ ರಿನ್ಯೂವೇಬಲ್ ಎನರ್ಜಿ ಇಂಡಿಯಾ ಪ್ರೈ.ಲಿ. ಹಾಗೂ ಉಮಿಯಾ ಹೋಲ್ಡಿಂಗ್ ಪ್ರೈ.ಲಿ. ಹೈಕೋರ್ಟ್ನಲ್ಲಿ ಈಚೆಗೆ ಮೇಲ್ಮನವಿ ಸಲ್ಲಿಸಿದ್ದವು. ಬೆಸ್ಕಾಂ ಹಾಗೂ ಪಿಸಿಕೆಎಲ್ಗಳನ್ನು ಕೂಡ ಇದರಲ್ಲಿ ಭಾಗೀದಾರರನ್ನಾಗಿ ಮಾಡಲಾಗಿತ್ತು.
ವಿಚಾರಣೆ ನಡೆಸಿದ ಹೈಕೋರ್ಟ್ ಪ್ರತೀ ಯೂನಿಟ್ಗೆ 35 ಪೈಸೆ ಹೆಚ್ಚುವರಿ ಸರ್ಚಾರ್ಜ್ ವಿಧಿಸಲು ಅವಕಾಶ ನೀಡಿ ಆದೇಶ ಹೊರಡಿಸಿತ್ತು. ಇದನ್ನು ಜೂನ್ ಬಿಲ್ನಿಂದ ಸಂಗ್ರಹಿಸಲು ಬೆಸ್ಕಾಂ ಸೂಚನೆ ನೀಡಿದೆ. ವಿದ್ಯುತ್ ಸರಬರಾಜು ಕಂಪೆನಿಗಳಿಂದ ಖರೀದಿಸುವ ವಿದ್ಯುತ್ ದುಬಾರಿಯಾಗಿ ಪರಿಣಮಿಸಿದ ಹಿನ್ನೆಲೆಯಲ್ಲಿ ಉದ್ಯಮಿಗಳು ಈಚೆಗೆ ಮುಕ್ತ ಮಾರುಕಟ್ಟೆ ಮೊರೆ ಹೋಗಿದ್ದಾರೆ. ಇದರಿಂದ ಹೊರೆ ತುಸು ಕಡಿಮೆಯೂ ಆಗುತ್ತಿದೆ. ಈ ಮಧ್ಯೆಯೇ ಹೆಚ್ಚುವರಿ ತೆರಿಗೆ ಭಾರ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkur University ಕುಲಸಚಿವ, ಇನ್ಸ್ಪೆಕ್ಟರ್ ವಜಾ ಮಾಡಿ: ಅಶ್ವತ್ಥನಾರಾಯಣ್ ಒತ್ತಾಯ
Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್ಗೆ ಜಿಪಿಎಸ್ ಕಣ್ಗಾವಲು!
Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ
PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ
Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Tumkur University ಕುಲಸಚಿವ, ಇನ್ಸ್ಪೆಕ್ಟರ್ ವಜಾ ಮಾಡಿ: ಅಶ್ವತ್ಥನಾರಾಯಣ್ ಒತ್ತಾಯ
Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!
Shambhavi ಹೊಳೆಗೆ ಬಿದ್ದು ಬಾಲಕ ಸಾವು-ನಾಲ್ಕು ಮಂದಿ ಮಕ್ಕಳು ತೆರಳಿದ್ದ ವೇಳೆ ಘಟನೆ
Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು
Udupi: ಚೆಕ್ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.