ವಿಧಾನ ಮಂಡಲ ಅಧಿವೇಶನ: ಕಲಾಪಗಳಲ್ಲಿ ಜನಹಿತಕ್ಕೆ ಆದ್ಯತೆ ಸಿಗಲಿ


Team Udayavani, Jul 3, 2023, 5:38 AM IST

vidhana soudha

ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯ ವಿಧಾನ ಮಂಡಲದ ಬಜೆಟ್‌ ಅಧಿವೇಶನ ಸೋಮವಾರ ಆರಂಭ­ಗೊಳ್ಳಲಿದೆ. ಈ ಅಧಿವೇಶನ ರಾಜ್ಯ ಸರಕಾರ ಮತ್ತು ವಿಪಕ್ಷಗಳ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ.

ಅಧಿವೇಶನದ ಮೊದಲ ದಿನ ರಾಜ್ಯಪಾಲರು ಜಂಟಿ ಸದನಗಳನ್ನು­ದ್ದೇಶಿಸಿ ಭಾಷಣ ಮಾಡಲಿದ್ದು ಹೊಸ ಸರಕಾರದ ಚಿಂತನೆಗಳು, ಭವಿಷ್ಯದ ಕಾರ್ಯಯೋಜನೆಗಳತ್ತ ಅವರು ತಮ್ಮ ಭಾಷಣದಲ್ಲಿ ಬೆಳಕು ಚೆಲ್ಲುವ ಸಾಧ್ಯತೆ ಇದೆ. ಜು.7ರಂದು ಸಿಎಂ ಸಿದ್ದರಾಮಯ್ಯ ಅವರು ಈ ಸರಕಾ ರದ ಮೊದಲ ಬಜೆಟ್‌ನ್ನು ಮಂಡಿಸಲಿದ್ದಾರೆ. ಕಾಂಗ್ರೆಸ್‌ ಚುನಾವಣೆಗೂ ಮುನ್ನ ನೀಡಿದ್ದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಜಾರಿಗೆ ಹಣ ಕ್ರೋಡೀಕರಣದ ಜತೆಯಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ಅಭಿವೃದ್ಧಿ ಯೋಜನೆಗಳು ಮತ್ತು ಹೊಸದಾಗಿ ಘೋಷಿಸಲಾಗುವ ಯೋಜನೆಗಳಿಗೆ ಹಣವನ್ನು ಹೇಗೆ ಹೊಂದಿಸಲಿ­ದ್ದಾರೆ ಎಂಬುದೇ ಸದ್ಯದ ಯಕ್ಷಪ್ರಶ್ನೆ.

ಈ ಅಧಿವೇಶನ ಆಡಳಿತ ಮತ್ತು ವಿಪಕ್ಷಗಳ ನಡುವೆ ಭಾರೀ ವಾಕ್ಸಮರಕ್ಕೆ ಸಾಕ್ಷಿಯಾಗಲಿರುವುದಂತೂ ನಿಶ್ಚಿತ. ಅಧಿಕಾರಕ್ಕೆ ಬಂದ ದಿನದಿಂದಲೇ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದ ಸರಕಾರ, ಅಧಿಕಾರಕ್ಕೆ ಬಂದ ಬಳಿಕ ಈ ಯೋಜನೆಗಳನ್ನು ಹಂತಹಂತವಾಗಿ ಮತ್ತು ಷರತ್ತುಗಳೊಂದಿಗೆ ಜಾರಿಗೆ ಮುಂದಾಗಿರುವುದು, ಇವುಗಳ ಅನುಷ್ಠಾನದಲ್ಲಿನ ಗೊಂದಲ, ಅಧಿಕಾರಿಗಳ ವರ್ಗಾವಣೆ, ಈ ಹಿಂದಿನ ಸರಕಾರ ಜಾರಿಗೊಳಿಸಿದ್ದ ಕೆಲವೊಂದು ಪ್ರಮುಖ ಕಾನೂನುಗಳ ರದ್ದು ಅಥವಾ ತಿದ್ದುಪಡಿ ತರುವ ನಿರ್ಧಾರವನ್ನು ಮುಂದಿಟ್ಟು ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ ಸಾಕಷ್ಟು ಪೂರ್ವ ತಯಾರಿ ನಡೆಸಿವೆ. ಆಡಳಿತಾರೂಢ ಕಾಂಗ್ರೆಸ್‌ ಕೂಡ ಈಗಾಗಲೇ ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ಹಗರಣಗಳು, ಅಕ್ರಮಗಳು, ಭ್ರಷ್ಟಾಚಾರ ಪ್ರಕರಣಗಳನ್ನು ತನಿಖೆ ನಡೆಸುವುದಾಗಿ ಹೇಳುವ ಮೂಲಕ ಪ್ರಮುಖ ವಿಪಕ್ಷವಾದ ಬಿಜೆಪಿಯನ್ನು ಹಣಿಯಲು ಕಾರ್ಯತಂತ್ರ ರೂಪಿಸಿದೆ.

ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ಇನ್ನೂ ನದಿಗಳಲ್ಲಿ ಪೂರ್ಣ ಪ್ರಮಾಣದ ಹರಿವು ಕಂಡು ಬಂದಿಲ್ಲವಾಗಿದ್ದು ಜಲಾಶ ಯಗಳಿಗೆ ತೀರಾ ಕನಿಷ್ಠ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲಂತೂ ಜಲಾಶಯಗಳು ಬರಿದಾಗಿಯೇ ಇವೆ. ಇದರಿಂದಾಗಿ ಕೃಷಿ ಚಟುವಟಿಕೆಗಳು ಇನ್ನೂ ಚಿಗಿತುಕೊಳ್ಳದೇ ಇರುವುದರಿಂದ ರೈತಾಪಿ ವರ್ಗ ಚಿಂತೆಗೀಡಾಗಿದೆ. ಇದೇ ವೇಳೆ ರಾಜ್ಯದೆಲ್ಲೆಡೆ ಅಗತ್ಯ ವಸ್ತುಗಳ ಬೆಲೆಯಲ್ಲಿ ಹೆಚ್ಚಳವಾಗಿದ್ದು ಜನಸಾ ಮಾನ್ಯರನ್ನು ಕಂಗಾಲಾಗಿಸಿದೆ. ಈ ಎಲ್ಲ ವಿಷಯಗಳ ಕುರಿತಂತೆ ಅಧಿವೇಶನದಲ್ಲಿ ಚರ್ಚೆಯಾಗಬೇಕಿದೆ.

ಹಾಲಿ ಅಧಿವೇಶನ ಮತ್ತು ಹೊಸ ಸರಕಾರದ ಮೊದಲ ಬಜೆಟ್‌ನ ಬಗೆಗೆ ರಾಜ್ಯದ ಜನರಲ್ಲಿರುವ ನಿರೀಕ್ಷೆ, ಆಶಾವಾದಗಳಿಗೆ ತಕ್ಕಂತೆ ಕಲಾಪ­ಗಳು ನಡೆಯಬೇಕು. ಸದನದ ಕಲಾಪಗಳಲ್ಲಿ ಜನಹಿತದ ವಿಷಯಗಳಿಗೆ ಸಂಬಂಧಿಸಿದಂತೆ ವಿಸ್ತೃತ ಚರ್ಚೆಯಾಗಬೇಕು. ಪರಸ್ಪರ ದೂಷಣೆ, ಆರೋಪ-ಪ್ರತ್ಯಾರೋಪಗಳ ಬದಲಾಗಿ ಜನತೆಯ ಬೇಡಿಕೆ, ಬವಣೆ­ಗಳನ್ನು ಸದನದಲ್ಲಿ ಪ್ರಸ್ತಾವಿಸುವ ಮೂಲಕ ಶಾಸಕರು, ಸರಕಾರದಿಂದ ಅವುಗಳಿಗೆ ಪರಿಹಾರ ದೊರಕಿಸಿಕೊಡಲು ಪ್ರಯತ್ನಿಸಬೇಕು.

ಟಾಪ್ ನ್ಯೂಸ್

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

mbಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.