ನಾನು ಕುಸುಮ movie review; ಕುಸುಮ ಬಾಲೆಯ ಸ್ತ್ರೀ ಸಂವೇದನೆ


Team Udayavani, Jul 3, 2023, 12:00 PM IST

nanu kusuma movie review

ಹೆಣ್ಣೊಬ್ಬಳು ಸ್ವಾವಲಂಭಿಯಾಗಿ ಮತ್ತು ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬೇಕಾದರೆ, ಆಕೆ ಪ್ರತಿ ಹೆಜ್ಜೆಯಲ್ಲೂ ಹತ್ತಾರು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಅಂದುಕೊಂಡಿರುವುದನ್ನು ಸಾಧಿಸಲು ಹೊರಟಾಗ ಅನೇಕ ಬಾರಿ ಜೊತೆಗಿರುವ ವ್ಯಕ್ತಿ, ವಿಷಯಗಳೇ ಆಕೆಗೆ ಮಾರಕವಾಗುತ್ತಾರೆ. ಆಕೆಯ ಆತ್ಮವಿಶ್ವಾಸವನ್ನು ಕುಗ್ಗಿಸುವ, ತೇಜೋವಧೆ ಮಾಡುವ ಕೆಲಸದಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಜೊತೆಗಿರುವವರೂ ಭಾಗಿಯಾಗುತ್ತಾರೆ! ಇಂಥದ್ದೇ ಸ್ತ್ರೀ ಸಂವೇದನೆಯ ಸೂಕ್ಷ್ಮ ಅಂಶಗಳನ್ನು ಇಟ್ಟುಕೊಂಡು ತೆರೆಗೆ ಬಂದಿರುವ ಸಿನಿಮಾ “ನಾನು ಕುಸುಮ’

ಕನ್ನಡದ ಹಿರಿಯ ಲೇಖಕ ಬೆಸಗರಹಳ್ಳಿ ರಾಮಣ್ಣ ಅವರ “ಮಗಳು’ ಕಥೆಯನ್ನು ಅಧರಿಸಿ ತೆರೆಗೆ ಬಂದಿರುವ ಈ ಸಿನಿಮಾದಲ್ಲಿ, ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಲು ಪ್ರತಿಕ್ಷಣ ಹವಣಿಸು ಹೆಣ್ಣೊಬ್ಬಳ ಆಂತರ್ಯದ ಒತ್ತಾಸೆಯಿದೆ. ವ್ಯವಸ್ಥಿತವಾಗಿ ಆಕೆಯ ಆತ್ಮವಿಶ್ವಾಸವನ್ನು ಕುಸಿಯುವಂತೆ ಮಾಡುವ ಸಾಮಾಜಿಕ ಮನಸ್ಥಿತಿಯ ಚಿತ್ರಣವಿದೆ.

ತಂದೆಯನ್ನು ಕಳೆದುಕೊಂಡ ಕುಸುಮ ಎಂಬ ಅನಾಥ ಹೆಣ್ಣು ಮಗಳು ತನಗೆ ಸಿಕ್ಕ ನರ್ಸ್‌ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುವಾಗ ಏನೆಲ್ಲ ಸವಾಲು, ಸನ್ನಿವೇಶಗಳನ್ನು ಎದುರಿಸುತ್ತಾಳೆ ಎಂಬುದನ್ನು “ನಾನು ಕುಸುಮ’ ಸಿನಿಮಾದ ಮೂಲಕ ತೆರೆಮೇಲೆ ಮನಮುಟ್ಟುವಂತೆ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಕಂ ನಿರ್ಮಾಪಕ ಕೃಷ್ಣೇಗೌಡ.

ಇನ್ನು ಮೊದಲೇ ಹೇಳಿದಂತೆ, ಕಥಾ ವಸ್ತು ಮತ್ತು ನಿರೂಪಣೆ ಎರಡೂ ಅಷ್ಟೇ ಗಂಭೀರವಾಗಿ ರುವುದರಿಂದ, ಇಲ್ಲಿ ವಿಷಯಾಧರಿತ ಯೋಚನೆ ಗಷ್ಟೇ ಕೆಲಸ. ಹಾಗಾಗಿ ಮಾಮೂಲಿ ಕಮರ್ಷಿಯಲ್‌ ಸಿನಿಮಾಗಳಲ್ಲಿ ಇರಬಹುದಾದಂತಹ ಅಲ್ಲಲ್ಲಿ ಹಾಡು, ನೃತ್ಯ, ಕಾಮಿಡಿ, ಅತಿಯಾದ ಮಾತು, ಅಬ್ಬರದ ಹಿನ್ನೆಲೆ ಸಂಗೀತ ಯಾವುದಕ್ಕೂ “ನಾನು ಕುಸುಮ’ ಸಿನಿಮಾದಲ್ಲಿ ಅವಕಾಶವಿಲ್ಲ.

ಸಿನಿಮಾದಲ್ಲಿ ಬಳಸಿಕೊಳ್ಳಲಾಗಿರುವ ಸಿಂಕ್‌ ಸೌಂಡ್‌, ಲೊಕೇಶನ್ಸ್‌, ಕಲಾವಿದರ ಅಭಿನಯ ಹೀಗೆ ಯಾವುದರಲ್ಲೂ ವೈಭವೀಕರಣವಿಲ್ಲದಿರುವುದರಿಂದ, “ನಾನು ಕುಸುಮ’ ಸಹಜ ಸುಂದರ ಸಿನಿಮಾವಾಗಿ ಗಂಭೀರ ಚಿಂತನೆಯ ನೋಡುಗರಿಗೆ ಇಷ್ಟವಾಗುತ್ತದೆ.

ಜಿ.ಎಸ್. ಕಾರ್ತಿಕ ಸುಧನ್

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidlingu 2 Movie Review

Sidlingu 2 Review ಫ್ಯಾಮಿಲಿ ಡ್ರಾಮಾದಲ್ಲಿ ವಿಜಯ ಪ್ರಸಾದ

Raju James Bond Review

Raju James Bond Review: ಕಾಸಿಗಾಗಿ ಜೇಮ್ಸ್‌ ಜೂಟಾಟ

Bhuvanam Gaganam Review

Bhuvanam Gaganam Review: ಪ್ರೇಮದ ಹಾದಿಯಲ್ಲಿ ಸುಮ ಘಮ

Mr.Rani movie review: ನಾನು ಅವಳಲ್ಲ ಅವನು!

Mr.Rani movie review: ನಾನು ಅವಳಲ್ಲ ಅವನು!

Gajarama Movie Review

Gajarama Movie Review: ಪ್ರೀತಿ ಮಧುರ ತ್ಯಾಗ ಅಮರ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.