![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 3, 2023, 1:08 PM IST
ಮುಂಬಯಿ: ಕಿರುತೆರೆ ಸ್ಟಾರ್ ನಿರ್ಮಾಪಕಿ ಏಕ್ತಾ ಕಪೂರ್ ಇದೇ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಸಿನಿಮಾವೊಂದನ್ನು ನಿರ್ಮಿಸಲು ರೆಡಿಯಾಗಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಅನೌನ್ಸ್ ಮಾಡಿದ್ದಾರೆ.
ಬಾಲಾಜಿ ಟೆಲಿಫಿಲ್ಮ್ಸ್ ಮೂಲಕ ಬಾಲಿವುಡ್ ನಲ್ಲಿ ಹಾಗೂ ಕಿರುತೆರೆಯಲ್ಲಿ ಅನೇಕ ಸಿನಿಮಾ/ ಧಾರಾವಾಹಿಗಳಿಗೆ ಬಂಡವಾಳವನ್ನು ಹಾಕಿರುವ ಏಕ್ತಾ ಕಪೂರ್ ಇದೇ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಸಿನಿಮಾಕ್ಕೆ ಬಂಡವಾಳವನ್ನು ಹಾಕಲಿದ್ದಾರೆ. ಈ ಸಿನಿಮಾದಲ್ಲಿ ಮಲಯಾಳಂ ಚಿತ್ರರಂಗದ ದಿಗ್ಗಜ ನಟ ಮೋಹನ್ ಲಾಲ್ ಅವರು ನಟಿಸಲಿದ್ದಾರೆ. ಈ ಸಿನಿಮಾ 200 ಕೋಟಿ ರೂ. ಬಜೆಟ್ ನಲ್ಲಿ ನಿರ್ಮಾಣವಾಗಲಿದೆ ಎಂದು ವರದಿಯೊಂದು ತಿಳಿಸಿದೆ.
“ದಿಗ್ಗಜ ನಟ ಮೋಹನ್ಲಾಲ್ ಅವರೊಂದಿಗೆ ಕೆಲಸ ಮಾಡಲು ತುಂಬಾ ಉತ್ಸುಕರಾಗಿದ್ದೇನೆ. ಬಾಲಾಜಿ ಟೆಲಿಫಿಲ್ಮ್ಸ್,ಕನೆಕ್ಟ್ ಮೀಡಿಯಾ ಮತ್ತು ಎವಿಎಸ್ ಸ್ಟುಡಿಯೋಸ್ ʼ ವೃಷಭʼಕ್ಕಾಗಿ ಜೊತೆಯಾಗಲಿದೆ. ಹೆಚ್ಚಿನ ಎಮೋಷನ್ಸ್ ಮತ್ತು ವಿಎಫ್ ಎಕ್ಸ್ ಗಳೊಂದಿಗೆ ಸಿನಿಮಾಆಕ್ಷನ್ ಎಂಟರ್ಟೈನರ್ ಆಗಿರಲಿದೆ. ʼವೃಷಭʼ 2024 ರ ಅತಿದೊಡ್ಡ ಚಲನಚಿತ್ರಗಳಲ್ಲಿ ಹೇಳಲಾಗಿದೆ. ಈ ಸಿನಿಮಾವನ್ನು ನಂದ ಕಿಶೋರ್ ನಿರ್ದೇಶನ ಮಾಡಲಿದ್ದಾರೆ. ಮಲಯಾಳಂ, ತೆಲುಗು, ಕನ್ನಡ, ತಮಿಳು ಮತ್ತು ಹಿಂದಿಯಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ” ಎಂದು ಏಕ್ತಾ ಕಪೂರ್ ಮೋಹನ್ ಲಾಲ್ ಹಾಗೂ ಜಿತೇಂದ್ರ ಅವರೊಂದಿಗೆ ನಿಂತುಕೊಂಡಿರುವ ಫೋಟೋವನು ಹಂಚಿಕೊಂಡು ವಿಚಾರವನ್ನು ಹೇಳಿದ್ದಾರೆ.
ಕನ್ನಡದಲ್ಲಿ ʼಆಧ್ಯಕ್ಷʼ ʼವಿಕ್ಟರಿʼ,ʼ ರನ್ನʼ ಮುಂತಾದ ಸಿನಿಮಾಗಳನ್ನು ಮಾಡಿ ಸೈ ಎನ್ನಿಸಿಕೊಂಡಿರುವ ನಂದ ಕಿಶೋರ್ ಮೊದಲ ಬಾರಿ ಪ್ಯಾನ್ ಇಂಡಿಯಾ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ.
ಏಕ್ತಾ ಕಪೂರ್ ಸದ್ಯ ʼ ದಿ ಕ್ರ್ಯೂʼ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದಲ್ಲಿ ಕೃತಿ ಸನೋನ್, ಕರೀನಾ ಕಪೂರ್ ಖಾನ್ ಮತ್ತು ಟಬು ಅವರು ನಟಿಸಿದ್ದಾರೆ. ರಾಜೇಶ್ ಕೃಷ್ಣನ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.
ಮೋಹನ್ ಲಾಲ್ ʼಲೂಸಿಫರ್ 2ʼ, ʼಮಲೈಕೊಟ್ಟೈ ವಾಲಿಬನ್ʼ ಸಿನಿಮಾಗಳಲ್ಲಿ ಮುಂದೆ ಕಾಣಿಸಿಕೊಳ್ಳಲಿದ್ದಾರೆ.
View this post on Instagram
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.