ಪಣಜಿ: ಮಹದಾಯಿ- ಚರ್ಚಿಸಿ ಸಮಸ್ಯೆ ಪರಿಹರಿಸಿಕೊಳ್ಳಿ

ನಿರಾಶ್ರಿತ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸಿಕೊಡಲು ಮನವಿ ಮಾಡಲಾಗುವುದು.

Team Udayavani, Jul 3, 2023, 2:32 PM IST

Udayavani Kannada Newspaper

ಪಣಜಿ: ಮಹದಾಯಿ ನದಿ ನೀರಿನ ಸಮಸ್ಯೆ ನ್ಯಾಯಾಧೀಕರಣದ ಹೊರಗೆ ಕರ್ನಾಟಕ ಮತ್ತು ಗೋವಾ ರಾಜ್ಯಗಳ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಚರ್ಚೆ ನಡೆಸಿ ನೀರು ಹಂಚಿಕೆ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ನಿಮಗೆ ನಾವು ಬೇಕು ನಮಗೆ ನೀವು ಬೇಕು ಈ ಭಾವನೆಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಇಂತಹ ಭೌಗೋಳಿಕ ಸಮಸ್ಯೆ ಈ ಹಿಂದಿನಿಂದ ಇದೆ. ಗೋವಾದಲ್ಲಿ ಬೆಳಗಾಯಿತೆಂದರೆ ಚಟುವಟಿಕೆ ನಡೆಯಬೇಕಾದರೆ ಕನ್ನಡಿಗರೇ ಬೇಕು ಎಂದು ಪಂಚಮಸಾಲಿ ಪೀಠಾಧ್ಯಕ್ಷ ಕೂಡಲಸಂಗಮದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ನುಡಿದರು.

ಕಸಾಪ ದಕ್ಷಿಣ ಗೋವಾ ಜಿಲ್ಲಾ ಘಟಕ, ಸಾಲಸೇಟ ತಾಲೂಕು ಘಟಕ ಹಾಗೂ ಸ್ನೇಹ ಯುವ ಸಾಂಸ್ಕೃತಿಕ ಸಂಘ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮಡಗಾಂವ ಲಕ್ಷ್ಮೀ ಎಂಟರ್‌ಪ್ರೈಸಸ್‌ ಹೋಟೆಲ್‌ನಲ್ಲಿ ನಡೆದ ಕಲಾ ಸಂಗಮ ಗೋವಾ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಮಹದಾಯಿ ನದಿಯ ಒಂದು ಕೊಡದ ನೀರಿನಲ್ಲಿ ಕರ್ನಾಟಕ ಕೇಳಿರುವುದು ಕೇವಲ ಒಂದು ಲೋಟ ನೀರು ಮಾತ್ರ. ಒಂದು ಲೋಟ ನೀರನ್ನು ನಮ್ಮ ಬಾಗಲಕೋಟೆ, ಗದಗ ಜಿಲ್ಲೆ, ಬೆಳಗಾವಿ ಜಿಲ್ಲೆ, ಸೇರಿದಂತೆ ಉತ್ತರ ಕರ್ನಾಟಕಕ್ಕೆ ಕುಡಿಯುವ ನೀರು ಪೂರೈಸಬೇಕು ಎಂಬುದು ನಮ್ಮ ಆಶಯ.

3.5 ಟಿಎಂಸಿ ನೀರನ್ನು ಕರ್ನಾಟಕಕ್ಕೆ ನೀಡಬೇಕು ಎಂದು ನ್ಯಾಯಾಧಿಕರಣ ಹೇಳಿದೆ. 40 ವರ್ಷದ ಈ ಪ್ರಕರಣದಲ್ಲಿ ಕೋರ್ಟು ಕಚೇರಿ ಎಂದು ಹೇಳುತ್ತ ರಾಜಕಾರಣ ಮಾಡುವುದಕ್ಕಿಂತ ಕೂಡಲೇ ಎರಡೂ ಸರ್ಕಾರದ ಮುಖ್ಯಮಂತ್ರಿಗಳು ಒಂದು ಸಂಧಾನ ರೀತಿಯಲ್ಲಿ, ನ್ಯಾಯಾಧೀಕರಣದ ಹೊರಗೆ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಎರಡೂ ರಾಜ್ಯಗಳ ಪರಿಸರವಾಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಂಡು ಮಹದಾಯಿ ಸಮಸ್ಯೆ ಬಗೆಹರಿಸಬೇಕು ಎಂದು ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ನುಡಿದರು.

ಗೋವಾ ಕನ್ನಡಿಗರ ಮನೆ ತೆರವುಗೊಳಿಸಿದ್ದ ಸಂದರ್ಭದಲ್ಲಿ ಕರ್ನಾಟಕದ ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಈ ನಿರಾಶ್ರಿತ ಕನ್ನಡಿಗರಿಗೆ ಮನವಿ ಮಾಡಿದ್ದೆವು. ಇಷ್ಟೇ ಅಲ್ಲದೆಯೇ ಗೋವಾದ ಅಂದಿನ ಮುಖ್ಯಮಂತ್ರಿ ಮನೋಹರ್‌ ಪರೀಕ್ಕರ್‌ ಅವರನ್ನು ಕೂಡ ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಅಂದು ಕರ್ನಾಟಕ ಸರ್ಕಾರ ಇಲ್ಲಿನ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಿಕೊಡಲು ಮುಂದಾಗಿತ್ತು, ಆದರೆ ಕಾರಣಾಂತರಗಳಿಂದ ಅಂದು ನಂತರ ಅದು ಸಾಧ್ಯವಾಗಿಲ್ಲ. ಆದರೆ ಇಂದು ಸಿದ್ಧರಾಮಯ್ಯ ಅವರೇ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದಾರೆ. ಇದರಿಂದಾಗಿ ಇದೀಗ ಮತ್ತೆ ಇಲ್ಲಿನ ನಿರಾಶ್ರಿತ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸಿಕೊಡಲು ಮನವಿ ಮಾಡಲಾಗುವುದು.

ಗೋವಾದಲ್ಲಿ ಕಡಿನಾಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಗಡಿನಾಡಲ್ಲಿ ಬಂದು ಇಲ್ಲಿಯೇ ಕನ್ನಡಿಗರ ಪರ ಹೋರಾಟ ನಡೆಸುತ್ತಿರುವ ಸಿದ್ಧಣ್ಣ ಮೇಟಿ ಅವರನ್ನು ಗಡಿನಾಡ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಕರ್ನಾಟಕ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು ಎಂದು ಸ್ವಾಮೀಜಿ ನುಡಿದರು.

ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್‌ ಕಾಮತ್‌, ಕಸಾಪ ಗೋವಾ ರಾಜ್ಯಾಧ್ಯಕ್ಷ ಡಾ| ಸಿದ್ಧಣ್ಣ ಮೇಟಿ, ಕರ್ನಾಟಕದ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶಕುಮಾರ ಹೊಸ್ಮನಿ, ಕಸಾಪ ಗೋವಾ ರಾಜ್ಯ ಗೌರವ ಕಾರ್ಯದರ್ಶಿ ನಾಗರಾಜ ಗೋಂದಕರ್‌, ಕಸಾಪ ದಕ್ಷಿಣ ಗೋವಾ ಜಿಲ್ಲಾಧ್ಯಕ್ಷ ಪರಶುರಾಮ ಕಲಿವಾಳ, ಸಾಲಸೇಟ ತಾಲೂಕು ಅಧ್ಯಕ್ಷ ಬಸವರಾಜ ಬನ್ನಿಕೊಪ್ಪ, ಚಿತ್ರನಟಿ ಮೀನಾ, ಹಿರಿಯ ಪತ್ರಕರ್ತ ರಹಮತ್‌ ಕಂಚಗಾರ, ಜುವಾರಿನಗರ ಕನ್ನಡ ಸಂಘದ ಅಧ್ಯಕ್ಷ ಶಿವಾನಂದ ಬಿಂಗಿ, ಹಿರಿಯ ಪತ್ರಕರ್ತ ಮಾರುತಿ ಬಡಿಗೇರ, ಸ್ನೇಹಯುವ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಎಂ.ರಂಜಿತಕುಮಾರ್‌, ಮತ್ತಿತರರು ಉಪಸ್ಥಿತರಿದ್ದರು.

ರಾಗಿಣಿ ಸಂಗೀತ ನೃತ್ಯಾಲಯ ಬೆಂಗಳೂರು ತಂಡ, ಪಿ ಆ್ಯಂಡ್‌ ಪಿ ಡಾನ್ಸ್‌ ಅಕಾಡಮಿ ಮಡಗಾಂವ ಗೋವಾ, ಮಧುರ ಮಧುರವಿ ಮಂಜುಳಗಾನ ತಂಡದಿಂದ ಗಾಯನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ಪತ್ರಕರ್ತ ಮಾರುತಿ ಬಡಿಗೇರ ಸ್ವಾಗತಿಸಿದರು. ಶೀಲಾ ಮೇಸ್ತ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.