ಯುಸಿಸಿ: ಬುಡಕಟ್ಟು ಜನಾಂಗ ಹೊರಕ್ಕೆ? ಸಂಸದೀಯ ಸಮಿತಿ ಸಭೆಯಲ್ಲಿ ಸುಶೀಲ್ ಮೋದಿ ಆಗ್ರಹ
ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಕೊಂಡು ಈ ಕ್ರಮ: ಕಾಂಗ್ರೆಸ್, ಡಿಎಂಕೆ ಆರೋಪ
Team Udayavani, Jul 4, 2023, 6:50 AM IST
ಹೊಸದಿಲ್ಲಿ: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ)ಯನ್ನು ಜಾರಿ ಮಾಡಲು ಕೇಂದ್ರ ಸರಕಾರ ಉತ್ಸುಕವಾಗಿರುವಂತೆಯೇ, ಸೋಮವಾರ ಸಂಸದೀಯ ಸ್ಥಾಯೀ ಸಮಿತಿಯ ಮಹತ್ವದ ಸಭೆ ನಡೆದಿದೆ. ಯುಸಿಸಿ ಕುರಿತು ಜನಾಭಿಪ್ರಾಯ ಸಂಗ್ರಹಿಸಲು ಕಾನೂನು ಆಯೋಗ ಮುಂದಾದ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ.
ಸಭೆಯಲ್ಲಿ ಸಮಾನ ನಾಗರಿಕ ಸಂಹಿತೆ(ಯುಸಿಸಿ)ಯ ವ್ಯಾಪ್ತಿಯಿಂದ ಈಶಾನ್ಯದಲ್ಲಿರುವವರು ಸೇರಿದಂತೆ ಬುಡಕಟ್ಟು ಜನಾಂಗಗಳನ್ನು ಹೊರಗಿಡುವ ಕುರಿತು ಕಾನೂನಿಗೆ ಸಂಬಂಧಿಸಿದ ಸಂಸದೀಯ ಸಮಿತಿ ಅಧ್ಯಕ್ಷ, ಬಿಜೆಪಿ ಸಂಸದ ಸುಶೀಲ್ ಮೋದಿ ಒಲವು ವ್ಯಕ್ತಪಡಿಸಿದ್ದಾರೆ. ವಿವಾದಾತ್ಮಕ ವಿಚಾರ ದಲ್ಲಿ ಜನಾಭಿಪ್ರಾಯ ಸಂಗ್ರಹಿಸಲು ಕಾನೂನು ಆಯೋಗ ಇದೇ ಸಮಯದಲ್ಲಿ ಮುಂದಾಗಿದ್ದೇಕೆ ಎಂದು ವಿಪಕ್ಷಗಳು ಪ್ರಶ್ನಿಸಿವೆ. ಮುಂಬರುವ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟು ಕೊಂಡೇ ಬಿಜೆಪಿ ಈ ಪ್ರಯತ್ನಕ್ಕೆ ಮುಂದಾ ಗಿದೆ ಎಂದು ಕಾಂಗ್ರೆಸ್, ಡಿಎಂಕೆ ಸೇರಿದಂತೆ ಹಲವು ವಿಪಕ್ಷಗಳ ಸದಸ್ಯರು ನೇರವಾಗಿ ಆರೋಪ ಮಾಡಿದ್ದಾರೆ. ಸಂಸದೀಯ ಸಮಿತಿಯ 31 ಸದಸ್ಯರ ಪೈಕಿ 17 ಮಂದಿ ಸಭೆಯಲ್ಲಿ ಪಾಲ್ಗೊಂಡಿ ದ್ದರು ಎಂದು ಹೇಳಲಾಗಿದೆ.
ಇದೇ ವೇಳೆ ಜುಲೈ 20ರಿಂದ ಆರಂಭವಾಗಲಿರುವ ಸಂಸತ್ನ ಮುಂಗಾರು ಅಧಿವೇಶನದಲ್ಲಿ ಯುಸಿಸಿ ವಿಧೇಯಕ ಮಂಡನೆಯಾಗುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.