Vijayapura: ಸರ್ಕಾರಿ ಜಮೀನಿನ ಶ್ರೀಗಂಧ ಮರ ಕದ್ದವರಿಗೆ ಐದು ವರ್ಷ ಜೈಲು ಶಿಕ್ಷೆ
Team Udayavani, Jul 4, 2023, 5:55 PM IST
ವಿಜಯಪುರ: ಮೂರುವರೆ ವರ್ಷದ ಹಿಂದೆ ಸರ್ಕಾರಿ ಜಮೀನಿನಲ್ಲಿ ಬೆಳೆದಿದ್ದ ಶ್ರೀಗಂಧ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರಿಗೆ ಜಿಲ್ಲಾ ಪ್ರಧಾನ ನ್ಯಾಯಾಲಯ ಇಬ್ಬರಿಗೆ ಐದು ವರ್ಷ ಜೈಲು ಶಿಕ್ಷೆ ಹಾಗೂ ತಲಾ ಒಂದು ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.
2019 ಆಕ್ಟೋಬರ್ 21 ರಂದು ಪೊಲೀಸ್ ಠಾಣೆ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದ ಸೀಮೆಯಲ್ಲಿರುವ ಮಲ್ಲಣ್ಣ ಸಿದ್ದಣ್ಣ ಬಾಗೇವಾಡಿ ಎಂಬವರ ಜಮೀನಿಗೆ ಹೊಂದಿಕೊಂಡಿರುವ ಸರ್ಕಾರಿ ಹಳ್ಳದಲ್ಲಿ ಬೆಳೆದಿದ್ದ ಶ್ರೀಗಂಧ ಮರಗಳ ಕಳ್ಳತನ ಆಗಿತ್ತು. ಈ ಕುರಿತು ಆಲಮೇಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ಆರಂಭಿಸಿ ಆರೋಪಿಗಳಾದ ಕಲಬುರ್ಗಿ ಜಿಲ್ಲೆಯ ಆಫಜಲಪುರ ತಾಲೂಕಿನ ಕರ್ಜಗಿ ಗ್ರಾಮದ ದಸ್ತಗೀರ ಜಾಫರಸಾಬ್ ಚಂದನ್ ಹಾಗೂ ಜಿಲ್ಲೆಯ ಇಂಡಿ ತಾಲೂಕಿನ ಶಾಲೋಟಗಿ ಗ್ರಾಮದ ಹಾಜಿಮಲಂಗ ಮೆಹಬೂಬ್ ವಾಲಿಕಾರ ಎಂಬ ಇಬ್ಬರನ್ನು ಬಂಧಿಸಿದ್ದರು.
ಕಳ್ಳತನ ಮಾಡಿದ್ದ ಶ್ರೀಗಂಧದ ಮರವನ್ನು 11 ತುಂಡುಗಳಾಗಿ ಕತ್ತರಿಸಿ ಬೈಕ್ ಮೇಲೆ ಸಾಗಿಸುವಾಗ ಆಲಮೇಲ್ ಪಿಎಸ್ಐ ನಿಂಗಪ್ಪ ಪೂಜಾರಿ ಇವರ ಕೈಗೆ ಸಿಕ್ಕಿಕೊಂಡಿದ್ದರು. ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಬಳಿಕ ನಡೆದ ವಿಚಾರಣೆಯಲ್ಲಿ ಆರೋಪ ಸಾಬೀತಾಗಿದೆ.
ಪರಿಣಾಮ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಶಿವಾಜಿ ನಾಲವಾಡೆ ಇವರು ಇಬ್ಬರೂ ಆರೋಪಿಗಳಿಗೆ ಐದು ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕರಾದ ಎಸ್.ಎಚ್.ಹಕೀಮ್ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು
Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
Basangouda Patil Yatnal: ಫಸ್ಟ್ ಲೈನ್ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ
Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.