Maharashtra ರಾಜಕೀಯ ಬೆಳವಣಿಗೆ ಹಿಂದಿನ ಮಾಸ್ಟರ್ ಮೈಂಡ್ ಶರದ್ ಪವಾರ್! ರಾಜ್ ಠಾಕ್ರೆ
ರಾಜ್ಯದಲ್ಲಿ ನಡೆದಿರುವುದು ಅಸಹ್ಯಕರ ಬೆಳವಣಿಗೆ.
Team Udayavani, Jul 5, 2023, 12:35 PM IST
ಪುಣೆ: ಎನ್ ಸಿಪಿ ವರಿಷ್ಠ ಶರದ್ ಪವಾರ್ ಅವರ ಕೃಪಾಕಟಾಕ್ಷದಿಂದಲೇ ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆ ನಡೆದಿರುವುದಾಗಿ ಮಹಾರಾಷ್ಟ್ರ ನವನಿರ್ಮಾಣ್ ಸೇನಾ(MNS) ಮುಖ್ಯಸ್ಥ ರಾಜ್ ಠಾಕ್ರೆ ಆರೋಪಿಸಿದ್ದಾರೆ.
ಇದನ್ನೂ ಓದಿ:Missing Case: ಮುಸ್ಲಿಂ ಶಿಕ್ಷಕಿಯೊಂದಿಗೆ ಓಡಿಹೋದ ಅಪ್ರಾಪ್ತೆ; ಮತಾಂತರ ಆರೋಪ
ಭಾನುವಾರ ಶರದ್ ಪವಾರ್ ನೇತೃತ್ವದ ಎನ್ ಸಿಪಿಯ ಮುಖಂಡ ಅಜಿತ್ ಪವಾರ್ ಮತ್ತು ಇತರ 8 ಮಂದಿ ಶಾಸಕರು ಶಿಂಧೆ ನಾಯಕತ್ವದ ಶಿವಸೇನಾ-ಬಿಜೆಪಿ ಸರ್ಕಾರದ ಜೊತೆ ಕೈಜೋಡಿಸಿರುವ ಘಟನೆ ಕುರಿತು ಠಾಕ್ರೆ ಸುದ್ದಿಗಾರರ ಜತೆ ಮಾತನಾಡಿದರು.
ರಾಜ್ಯದಲ್ಲಿ ನಡೆದಿರುವುದು ಅಸಹ್ಯಕರ ಬೆಳವಣಿಗೆ. ಇದು ರಾಜ್ಯದ ಮತದಾರರಿಗೆ ಮಾಡಿದ ಘೋರ ಅಪಮಾನವಾಗಿದೆ ಎಂದು ರಾಜ್ ಠಾಕ್ರೆ ವಾಗ್ದಾಳಿ ನಡೆಸಿದರು.
ಮಹಾರಾಷ್ಟ್ರ ರಾಜಕೀಯದಲ್ಲಿ ಈ ಎಲ್ಲಾ ಅಸಹ್ಯ ಬೆಳವಣಿಗೆಯನ್ನು ಮೊದಲು ಆರಂಭಿಸಿದವರು ಶರದ್ ಪವಾರ್. 1978ರಲ್ಲಿ ಕಾಂಗ್ರೆಸ್ ನ 38 ಶಾಸಕರೊಂದಿಗೆ ಪಕ್ಷ ಬಿಟ್ಟು ಜನತಾ ಪಕ್ಷದ ಜೊತೆ ಕೈಜೋಡಿಸಿ ಮುಖ್ಯಮಂತ್ರಿಗಾದಿಗೆ ಏರಿದ್ದರು. ಮಹಾರಾಷ್ಟ್ರ ರಾಜಕೀಯ ಇಂತಹ ಸ್ಥಿತಿಯನ್ನು ಯಾವತ್ತೂ ಕಂಡಿರಲಿಲ್ಲವಾಗಿತ್ತು. ಈ ಎಲ್ಲಾ ಅಸಹ್ಯ ಪ್ರಾರಂಭಿಸಿದವರು ಪವಾರ್, ಅದನ್ನು ಕೊನೆಗೊಳಿಸಿದವರು ಕೂಡಾ ಪವಾರ್ ಎಂದು ಠಾಕ್ರೆ ವ್ಯಂಗ್ಯವಾಡಿದ್ದಾರೆ.
ಮಹಾರಾಷ್ಟ್ರದಲ್ಲಿನ ಇತ್ತೀಚೆಗಿನ ರಾಜಕೀಯ ಬೆಳವಣಿಗೆ ಹಿಂದಿರುವುದು ಶರದ್ ಪವಾರ್ ಎಂದು ರಾಜ್ ಠಾಕ್ರೆ ದೂರಿದ್ದಾರೆ. ಪ್ರಫುಲ್ ಪಟೇಲ್, ದಿಲೀಪ್ ವಾಲ್ಸೆ ಮತ್ತು ಛಗನ್ ಭುಜ್ ಬಲ್ ಅವರು ಅಜಿತ್ ಪವಾರ್ ಜೊತೆ ಹೋಗಲು ಶರದ್ ಪವಾರ್ ಅವರ ಆಶೀರ್ವಾದವಿಲ್ಲದೇ ಸಾಧ್ಯವಿಲ್ಲ ಎಂದು ಠಾಕ್ರೆ ಪ್ರತಿಪಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!
Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!
Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ
Bhairadevi Review; ಅಘೋರಿ ಹಿಂದೆ ಘೋರ ಕಥನ
Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.