![ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್](https://www.udayavani.com/wp-content/uploads/2024/07/dev-415x229.jpg)
Film producer: ಹೀರೋಯಿನ್ ಮಾಡುತ್ತೇನೆಂದು 27 ಲಕ್ಷ ರೂ.ಪಡೆದು ವಂಚನೆ; ನಿರ್ಮಾಪಕ ಅರೆಸ್ಟ್
Team Udayavani, Jul 5, 2023, 1:30 PM IST
![tdy-8](https://www.udayavani.com/wp-content/uploads/2023/07/tdy-8-5-620x372.jpg)
ಕೊಚ್ಚಿ: ಸಿನಿಮಾದಲ್ಲಿ ನಾಯಕಿಯ ಪಾತ್ರವನ್ನು ನೀಡುವುದಾಗಿ ನಂಬಿಸಿ ಯುವತಿಯಿಂದ ಲಕ್ಷಾಂತರ ರೂ.ವನ್ನು ವಂಚಿಸಿದ ಆರೋಪದ ಮೇಲೆ ನಿರ್ಮಾಪಕರೊಬ್ಬರನ್ನು ಬಂಧಿಸಿರುವ ಘಟನೆ ಕೇರಳದಲ್ಲಿ ನಡೆದಿದೆ.
ಮಲಪ್ಪುರಂ ಮೂಲದ ಶಕ್ಕೀರ್ ಎಂಕೆ ಎಂಬಾತನನ್ನು ಉತ್ತರ ಕೋಝಿಕ್ಕೋಡ್ನಿಂದ ಪಲರಿವಟ್ಟಂ ಪೊಲೀಸರು ಬಂಧಿಸಿದ್ದಾರೆ.
ಮಾಲಿವುಡ್ ನಲ್ಲಿ ನಿರ್ಮಾಪಕನಾಗಿದ್ದೇನೆ ಎಂದು ಯುವತಿಯೊಬ್ಬರನ್ನು ಪರಿಚಯಿಸಿಕೊಂಡು ಆಕೆಗೆ ತನ್ನ ಸಿನಿಮಾದಲ್ಲಿ ಲೀಡ್ ರೋಲ್ ನಲ್ಲಿ ನಟಿಸಲು ಅವಕಾಶ ನೀಡುವುದಾಗಿ ಶಕ್ಕೀರ್ ಎಂಕೆ ಹೇಳಿದ್ದಾರೆ. ಇದಾದ ಬಳಿಕ ಸಿನಿಮಾ ನಿರ್ಮಾಣಕ್ಕೆ ಸ್ವಲ್ಪ ಹಣದ ಕೊರತೆಯಿದೆ ಎಂದು ಯುವತಿಯಿಂದ ಹಂತ – ಹಂತವಾಗಿ ಹಣವನ್ನು ತೆಗೆದುಕೊಂಡಿದ್ದಾರೆ. ಹಣದ ಕೊರತೆಯಿಂದ ಸಿನಿಮಾದ ಶೂಟಿಂಗ್ ಯಾವ ಕ್ಷಣದಲ್ಲೂ ಬೇಕಾದರೂ ನಿಲ್ಲಬಹುದೆಂದು ಯುವತಿಯಿಂದ ಹಣವನ್ನು ಪಡೆದಿದ್ದಾರೆ.
ಹೀಗೆ ಒಟ್ಟು 27 ಲಕ್ಷ ರೂ.ವನ್ನು ಯುವತಿ ನೀಡಿದ್ದು, ಇದನ್ನು ಆಕೆ ವಾಪಾಸ್ ಕೇಳಿದಾಗ, ನಿರ್ಮಾಪಕ ಆಕೆಗೆ ಬೆದರಿಕೆ ಹಾಕಲು ಆರಂಭಿಸಿದ್ದಾನೆ. ಆಕೆಯ ಮೊಬೈಲ್ ಸಂಖ್ಯೆಗೆ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.
ವಂಚನೆ ಬಗ್ಗೆ ಅರಿತ ಯುವತಿ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಪಲರಿವಟ್ಟಂ ಇನ್ಸ್ಪೆಕ್ಟರ್ ಜೋಸೆಫ್ ಸಾಜನ್ ನೇತೃತ್ವದ ಪೊಲೀಸ್ ತಂಡ ಸೈಬರ್ ಸೆಲ್ ಬೆಂಬಲದೊಂದಿಗೆ ಆರೋಪಿಯನ್ನು ಪತ್ತೆ ಮಾಡಿ, ಆತನನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
![ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್](https://www.udayavani.com/wp-content/uploads/2024/07/dev-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-150x90.jpg)
Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
![Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ](https://www.udayavani.com/wp-content/uploads/2024/07/3-8-150x90.jpg)
Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ
![rahul gandhi](https://www.udayavani.com/wp-content/uploads/2024/07/rahul-8-150x83.jpg)
LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ
![terror attack on Army camp in Jammu and Kashmir’s Rajouri](https://www.udayavani.com/wp-content/uploads/2024/07/rajuori-150x83.jpg)
Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ
![Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!](https://www.udayavani.com/wp-content/uploads/2024/07/himachala-150x91.jpg)
Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!
MUST WATCH
ಹೊಸ ಸೇರ್ಪಡೆ
![ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್](https://www.udayavani.com/wp-content/uploads/2024/07/dev-150x83.jpg)
Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-150x90.jpg)
Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
![7-yellapura](https://www.udayavani.com/wp-content/uploads/2024/07/7-yellapura-150x90.jpg)
Yellapura: ನಿಯಂತ್ರಣ ತಪ್ಪಿದ ಕಂಟೈನರ್ ಲಾರಿ; ತಪ್ಪಿದ ಅನಾಹುತ
![belagavi](https://www.udayavani.com/wp-content/uploads/2024/07/belagavi-150x90.jpg)
Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ
![Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ](https://www.udayavani.com/wp-content/uploads/2024/07/sahitya-150x83.jpg)
Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.