ನಾನು ವರ್ಗಾವಣೆ ದಂಧೆ ನಡೆಸಿದ ದಾಖಲಾತಿ ನೀಡಿದರೆ ರಾಜಕೀಯ ನಿವೃತ್ತಿ: ಕುಮಾರಸ್ವಾಮಿ ಸವಾಲು
Team Udayavani, Jul 6, 2023, 3:42 PM IST
ಬೆಂಗಳೂರು: ನಾನು ಯಾವುದಾದರೂ ವರ್ಗಾವಣೆ ವಿಷಯದಲ್ಲಿ ಭಾಗಿಯಾದ ದಾಖಲಾತಿ ನೀಡಿದರೆ ರಾಜಕೀಯ ನಿವೃತ್ತಿ ಆಗುವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದರು.
ಇಂದು ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈ ಸರಕಾರ ದಿನದ 24 ಗಂಟೆಯೂ ವರ್ಗಾವಣೆ ದಂಧೆಯನ್ನೇ ನಡೆಸುತ್ತಿದೆ. ಅಭಿವೃದ್ಧಿ ಬದಲು ನಗದು ಅಭಿವೃದ್ಧಿಯಲ್ಲಿ ತೊಡಗಿದೆ. ಇದನ್ನು ಹೇಳಿದರೆ ನಮ್ಮ ಮೇಲೆಯೇ ಕೆಸರು ಎರಚುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ನನ್ನಲ್ಲಿ ಈ ಸರಕಾರ ನಡೆಸುತ್ತಿರುವ ವರ್ಗಾವಣೆ ದಂಧೆಗಳಿಗೆ ಸಂಬಂಧಿಸಿ ನನ್ನಲ್ಲಿ ದಾಖಲೆಗಳಿವೆ. ಅದರಲ್ಲಿ ಯಾರಿಗೂ ಅನುಮಾನ ಬೇಡ. ಅದನ್ನು ಬಿಡುಗಡೆ ಮಾಡಬೇಕಾದ ಸಂದರ್ಭದಲ್ಲಿ ಮಾಡುತ್ತೇನೆ. ಯಾವಾಗ, ಎಲ್ಲಿ ಬಿಡುಗಡೆ ಮಾಡುತ್ತೇನೆ ಎಂಬುದು ನನಗೆ ಗೊತ್ತಿದೆ. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಹಲವಾರು ವರ್ಷಗಳು ಕೆಲಸ ಮಾಡಿದ್ದಾರೆ, ಅವರು ಎಂದಾದರೂ ದಾಖಲೆ ಬಿಡುಗಡೆ ಮಾಡಿದ್ದರಾ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನೆ ಮಾಡಿದರು.
ಅವರು ಎಂದೂ ದಾಖಲೆ ಇಟ್ಟು ಮಾತನಾಡಿದನ್ನು ನಾನು ನೋಡಲೇ ಇಲ್ಲ. ಇದ್ದರೆ ತೋರಿಸಲಿ. ಬಹುಮತದ ಸರಕಾರ ತಂದುಕೊಂಡು ಈ ದಂಧೆಯಲ್ಲಿ ತೊಡಗಿದ್ದಾರೆ ಎಂದು ಅವರು ಟೀಕಾಪ್ರಹಾರ ನಡೆಸಿದರು.
ಇದನ್ನೂ ಓದಿ:ಕ್ಷುಲ್ಲಕ ವಿಚಾರಕ್ಕೆ ಪತ್ನಿ ಜತೆ ಜಗಳ ತೆಗೆದು ಕೊಲೆಗೈದವನಿಗೆ ಜೀವಾವಧಿ ಶಿಕ್ಷೆ
ಮೈಸೂರಿನಲ್ಲಿ ವರ್ಗಾವಣೆ ಬಗ್ಗೆ ಚರ್ಚೆ ಆಗುತ್ತಿದೆ. ಮನೆಯಲ್ಲಿ ಸಿಎಂ ಪುತ್ರ ಮಲಗಿರುವ ಸಂದರ್ಭದಲ್ಲಿ ಇಷ್ಟಾಗಿದೆ. ಇನ್ನೂ ಹೊರಗೆ ಬಂದರೆ ಏನಾಗಬಹುದು ಎಂದು ಜನ ಕೇಳುತ್ತಿದ್ದಾರೆ. ನಾನು ದ್ವೇಷದ ರಾಜಕೀಯ ಮಾಡ್ತಿಲ್ಲ, ವಿರೋಧ ಪಕ್ಷದ ಸದಸ್ಯನಾಗಿ ನನ್ನ ಕೆಲಸ ಮಾಡ್ತಿದ್ದೇನೆ. ಸತ್ಯ ಹೇಳುವುದೇ ತಪ್ಪಾ? ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.
ನಾನು ಓಡಿ ಹೋಗಲ್ಲ, ದಾಖಲೆ ಬಿಟ್ಟೇ ಬಿಡುತ್ತೇನೆ: ಪೈನ್ ಡ್ರೈವ್ ಬಿಡುಗಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿಗಳು; ನಾನು ಹೆದರಿ ಓಡಿ ಹೋಗುವ ವ್ಯಕ್ತಿ ಅಲ್ಲ. ಹಿಟ್ ಅಂಡ್ ರನ್ ಮಾಡಲ್ಲ. ಕಾಂಗ್ರೆಸ್ ನಾಯಕರು ಏನು ಮಾತಾಡ್ತಾರೆಂದು ನೋಡೋಣ. ನನ್ನ ಬಳಿ ಇರುವ ಪೆನ್ ಡ್ರೈವ್ ಅಸಲಿ, ಹೈದ್ರಾಬಾದ್ ನಲ್ಲಿ ಮಾಡಿಸಿದ್ದಲ್ಲ. ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಕ್ರಮ ಏನು ಅಂತ ಅವರು ಹೇಳಲಿ. ಆಮೇಲೆ ದಾಖಲೆ ಹೊರ ಬಿಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.