ಮರಳು ದಂಧೆ ವಿರುದ್ಧ ಗ್ರಾಮಸ್ಥರ ಆಕ್ರೋಶ


Team Udayavani, Jul 6, 2023, 3:01 PM IST

ಮರಳು ದಂಧೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೆ.ಆರ್‌.ಪೇಟೆ: ತಾಲೂಕಿನ ಬೂಕನಕೆರೆ ಹೋಬಳಿಯ ಕಟ್ಟಹಳ್ಳಿ-ಕಟ್ಟೆಕ್ಯಾತನಹಳ್ಳಿ ಸೇತುವೆ ಪಿಲ್ಲರ್‌ಗಳ ಬಳಿ ಹಮಾವತಿ ನದಿ ಒಡಲಿನಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿದೆ. ಅಕ್ರಮ ತಡೆಯಬೇಕಾದ ಅಧಿಕಾರಿಗಳೇ ಈ ದಂಧೆಯಲ್ಲಿ ಶಾಮೀಲಾಗಿದ್ದಾರೆ ಎಂದು ಸುತ್ತಮುತ್ತಲ ಗ್ರಾಮಸ್ಥರು ಆರೋಪಿಸಿದ್ದಾರೆ.

ತಾಲೂಕಿನ ಬೂಕನಕೆರೆ ಹಾಗೂ ಅಕ್ಕಿಹೆಬ್ಟಾಳು ಹೋಬಳಿ ಮೂಲಕ ಮೈಸೂರು-ಹಾಸನ ಜಿಲ್ಲೆಗಳಿಗೆ ನೇರ ಸಂಪರ್ಕ ನೀಡುತ್ತಿರುವ ಹೇಮಾವತಿ ನದಿ ಸೇತುವೆ ಪಕ್ಕದಲ್ಲೇ ಅಕ್ರಮ ಮರಳು ದಂಧೆ ನಡೆಸುತ್ತಿರುವುದರಿಂದ ಸೇತುವೆ ಪಿಲ್ಲರ್‌ಗಳು ಶಿಥಿಲಗೊಳ್ಳುತ್ತಿದ್ದು, ಸೇತುವೆ ಕುಸಿಯುವ ಭೀತಿ ಕಾಡುತ್ತಿವೆ. ಕೆ.ಆರ್‌.ಪೇಟೆ ಗ್ರಾಮಾಂತರ ಠಾಣೆ ವ್ಯಾಪ್ತಿಗೆ ಒಳಪಡುವ ಈ ಪ್ರದೇಶವು ಕೃಷ್ಣರಾಜಸಾಗರ ಜಲಾಶಯದ ಹಿನ್ನೀರು ನಿಲ್ಲುವ ಪ್ರದೇಶವಾಗಿದೆ. ಲಕ್ಷಾಂತರ ಟನ್‌ ಸಮೃದ್ಧವಾದ ಮರಳಿರುವ ಜಾಗವಾಗಿರುವುದರಿಂದ ದಂಧೆಕೋರರು ಕೊಪ್ಪರಿಕೆಗಳು, ಎತ್ತಿನಗಾಡಿಗಳು ಹಾಗೂ ಟ್ರ್ಯಾಕ್ಟರ್‌ ಮೂಲಕ ಮರಳನ್ನು ಒಂದೆಡೆ ಸಂಗ್ರಹಿಸಿ, ಮಧ್ಯರಾತ್ರಿ ವೇಳೆಯಲ್ಲಿ ಟಿಪ್ಪರ್‌ ಮೂಲಕ ಮರಳು ದಂಧೆ ನಡೆಸುತ್ತಿದ್ದು, ಒಂದು ಲೋಡ್‌ ಮರಳು ಕನಿಷ್ಠ 40ರಿಂದ 50ಸಾವಿರ ರೂ. ಮಾರಾಟವಾಗುತ್ತಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ರಾತ್ರಿಯೇ ಮರಳು ಸಾಗಾಟ: ರಾತ್ರಿ ಮರಳು ಸಂಗ್ರಹ ಕಾರ್ಯವು ಯಂತ್ರೋಪಕರಣಗಳ ಮೂಲಕ ನಡೆಯುತ್ತಿದೆ. ಕಟ್ಟಹಳ್ಳಿ, ಕಟ್ಟೆಕ್ಯಾತನಹಳ್ಳಿ ಸೇರಿದಂತೆ ಹೇಮಾವತಿ ನದಿ ಪಾತ್ರದ ಗ್ರಾಮಗಳ ಜನರು ಹೈರಾಣಾಗಿದ್ದಾರೆ. ಅಕ್ಕಿಹೆಬ್ಟಾಳು ಹೋಬಳಿಯ ಕಟ್ಟೆಕ್ಯಾತನಹಳ್ಳಿ ಕಡೆಯಿಂದ ಹೇಮಾವತಿ ನದಿಯೊಳಗೆ ಇಳಿಯಲು ಕಚ್ಚಾ ರಸ್ತೆ ನಿರ್ಮಿಸಿಕೊಂಡಿರುವ ದಂಧೆಕೋರರು, ರಾತ್ರಿ 10ಗಂಟೆಯಿಂದ ಆರಂಭಿಸಿ, ಬೆಳಗಿನ ಜಾವ 6ಗಂಟೆಯವರೆಗೂ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸಿ, ರಾತ್ರಿಯೇ ಟಿಪ್ಪರ್‌ ಮೂಲಕ ಮರಳನ್ನು ಮೈಸೂರು, ಮಂಡ್ಯ, ಕೆ.ಆರ್‌ .ಪೇಟೆ, ಕೆ.ಆರ್‌.ನಗರ, ಪಾಂಡವಪುರ ಪಟ್ಟಣಗಳಿಗೆ ಸಾಗಾಟ ಮಾಡುತ್ತಿದ್ದಾರೆ ಎಂದು ಜನರು ದೂರಿದ್ದಾರೆ.

ಮರಳು ದಂಧೆಗೆ ಕಡಿವಾಣ ಹಾಕಿ: ಅಪಾಯ ಸಂಭವಿಸುವ ಮುನ್ನ ತಾಲೂಕು ಆಡಳಿತ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಪೊಲೀಸರು ಎಚ್ಚೆತ್ತುಕೊಂಡು ಹೇಮಾವತಿ ನದಿ ಒಡಲಿನಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮರಳು ದಂಧೆಗೆ ಕಡಿವಾಣ ಹಾಕಬೇಕಿದೆ. ಬರಿದಾಗುತ್ತಿರುವ ಹೇಮಾವತಿ ನದಿ ಒಡಲನ್ನು ಸಂರಕ್ಷಣೆ ಜೊತೆಗೆ, ಕುಸಿಯುವ ಭೀತಿ ಎದುರಿಸುತ್ತಿರುವ ಹೇಮಾವತಿ ನದಿ ಸೇತುವೆ ಕಾಪಾಡಬೇಕು. ಅಕ್ರಮ ದಂಧೆಕೋರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ ಕೆ.ಆರ್‌.ಪೇಟೆ ತಾಲೂಕು ಆಡಳಿತ ಕಾರ್ಯಸೌಧದ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಕಟ್ಟಹಳ್ಳಿ ಹಾಗೂ ಕಟ್ಟೇಕ್ಯಾತನಹಳ್ಳಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.

 

 

ಟಾಪ್ ನ್ಯೂಸ್

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

BIO-METRIC

Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್‌ ಬಯೋಮೆಟ್ರಿಕ್‌!

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

2

Theft Case: ಬ್ಯಾಂಕಿನಿಂದ ಹಣದ ಬ್ಯಾಗ್‌ ಕಳವು ಪ್ರಕರಣ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.