ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವರ್ಗಾವಣೆ ಬಾಂಬ್ ಸಿಡಿಸಿದ ಸಚಿವ ಚೆಲುವರಾಯಸ್ವಾಮಿ
Team Udayavani, Jul 8, 2023, 5:38 PM IST
ಚಿಕ್ಕಮಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಬಾಂಬ್ ಸಿಡಿಸಿದ್ದು, ಚಂದ್ರೇಗೌಡ ಎಂಬುವರನ್ನ 7 ಬಾರಿ ವರ್ಗಾವಣೆ ಮಾಡಿದ್ದರು. ಮೂಡಾ ಕಮಿಷನರ್ ಆಗಿದ್ದ ನಾಗರಾಜ್ ಎಂಬುವರನ್ನ ತಪ್ಪಿಲ್ಲದಿದ್ದರೂ ಅಮಾನತು ಮಾಡಿದ್ದರು. ಇಬ್ಬರೂ ಮಂಡ್ಯದ ಒಕ್ಕಲಿಗ ಸಮುದಾಯದವರು. ಒಕ್ಕಲಿಗ ಎನ್ನುವ ಕಾರಣಕ್ಕೆ ಚೆಲುವರಾಯಸ್ವಾಮಿ ವಿರುದ್ಧ ನಿಂತಿರುವುದು. ಅವರಿಗೆ ಒಕ್ಕಲಿಗರಿಗೆ ಹೆಚ್ಚು ಅವಕಾಶ ಸಿಗಬಾರದು ಎನ್ನವುದಿದೆ ಎಂದರು.
ನನಗೆ ಯಾವುದೇ ಬೇಜಾರಿಲ್ಲ, ಇನ್ನು 10 ಸಲ ಸಿಎಂ ಆದರೂ ಸ್ವಾಗತಿಸುತ್ತೇವೆ. ಆ ಕುಟುಂಬಕ್ಕೆ ಯಾವತ್ತೂ ಯಾವುದೇ ರೀತಿ ಕೆಟ್ಟದಾಗಿ ನಡೆದುಕೊಂಡಿಲ್ಲ, ಮಾತಾಡಿಲ್ಲ. ಅವರಿಗೆ ನಮ್ಮನ್ನು ಸಹಿಸುವ ಶಕ್ತಿ ಇಲ್ಲ, ದೇವರು ಎಲ್ಲರನ್ನೂ ಸಹಿಸುವ ಶಕ್ತಿ ನೀಡಲಿ ಎಂದು ಚೆಲುವರಾಯಸ್ವಾಮಿ ಹೇಳಿದರು.
ಅವರ ಪೆನ್ ಡ್ರೈವ್ ನಡೆ ಹೊಸದಲ್ಲ, ಎಲ್ಲರೂ ನೋಡಿದ್ದಾರೆ. ಅವರಿಗೆ ಎಲ್ಲರ ಬಗ್ಗೆಯೂ ಗೊತ್ತು ಎನ್ನುತ್ತಾರೆ. ಮಾತೆತ್ತಿದರೆ ಎಲ್ಲರ ರಾಜೀನಾಮೆ ಕೇಳುತ್ತಾರೆ. ಯಾರು ಪೆನ್ ಡ್ರೈವ್ ಇದೆ ಎನ್ನುತ್ತಾರೆ, ಅವರೇ ಹೇಳಬೇಕಲ್ವಾ? ಪೆನ್ ಡ್ರೈವ್ ಇದ್ದರೆ ಯಾಕೆ ಇಟ್ಟುಕೊಂಡಿದ್ದಾರೆ ಎನ್ನುವುದು ಅವರಿಗೆ ಬಿಟ್ಟದ್ದು ಎಂದರು.
ಹತ್ತಾರು ವರ್ಷದಿಂದ ನೋಡಿದ್ದೇವೆ, ಎಲ್ಲರನ್ನೂ ಬೆದರಿಸುವುದು, ಹುಷಾರ್ ಎನ್ನವುದು ಸಹಜ. ಅವರ ಈ ಪೆನ್ ಡ್ರೈವ್ ನಡೆ ಹೊಸದೇನಲ್ಲ. ಅದನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳಬೇಕು, ಉದಾಸೀನ ಮಾಡಬೇಕು, ಕೌಂಟರ್ ಕೊಡಬೇಕಾ ಗೊತ್ತಾಗ್ತಿಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ
ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ
Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ
CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.