Karwar; ಸುಳ್ಳು ಹೇಳಿ ಟೋಲ್ ವಸೂಲಿ: ಸಭೆಯಲ್ಲಿ ಗುಡುಗಿದ ಸಚಿವ ವೈದ್ಯ

ಟೋಲ್ ವಸೂಲಿ ನಿಲ್ಲಿಸುವ ಎಚ್ಚರಿಕೆ..!

Team Udayavani, Jul 8, 2023, 8:10 PM IST

mankalu-vaidya

ಕಾರವಾರ: ಜಿಲ್ಲೆಯಲ್ಲಿ ಕಾರವಾರ ದಿಂದ ಭಟ್ಕಳ ತನಕ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುತ್ತಿರುವ ಇಂಡಿಯನ್ ರೋಡ್ ಬಿಲ್ಡರ್ಸ ಕಂಪನಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಮಾಣ ಮಾಡಿದ ಅಪೂರ್ಣ ಕಾಮಗಾರಿ ರಸ್ತೆಗಳಿಂದ ಇವತ್ತು ಸಾಕಷ್ಟು ತೊಂದರೆಗಳಾಗಿವೆ. ಇನ್ನಾದರೂ ನೀವು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಮೀನುಗಾರಿಕೆ ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳು ವೈದ್ಯ ಐಆರ್ ಬಿ ಕಂಪನಿ , ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಎಚ್ಚರಿಸಿದರು.

ಕಾರವಾರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದ ರಸ್ತೆ ಕಾಮಗಾರಿ ಕೈಕೊಳ್ಳಲಾಗಿದೆ. ಈವರೆಗೆ ರಸ್ತೆ ಪೂರ್ಣಗೊಂಡಿರುವುದಿಲ್ಲ. ಇದು ಹೀಗೆ ಮುಂದುವರೆದರೆ ಇದನ್ನು ಸಹಿಸಲು ಸಾಧ್ಯವಿಲ್ಲ ಎಂದರು. ಸದ್ಯದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳ್ಳದಿದ್ದಲ್ಲಿ ಸಾರ್ವಜನಿಕರಿಗೆ ಹೆರಲಾಗಿರುವ ಟೋಲ್ ಬಂದು ಮಾಡಿ, ಸರ್ಕಾರದ ಅನುದಾನದಲ್ಲಿ ಉಳಿದಿರುವ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದರು.

ಕಂಪನಿಯಿಂದ ವಿವರಣೆ

ಐ ಆರ್ ಬಿ ಅಧಿಕಾರಿಗಳಿಂದ ಜಿಲ್ಲೆಯಲ್ಲಿ ಈ ವರೆಗೂ ರಸ್ತೆ ಕಾಮಗಾರಿ ಪೂರ್ಣಗೊಂಡಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.ಮಾಹಿತಿ ನೀಡಿ ಐ ಆರ್ ಬಿ ಅಧಿಕಾರಿ ಉತ್ತರ ಕನ್ನಡ ಜಿಲ್ಲೆಗೆ 146.30 ಕಿ.ಮೀ . ರಸ್ತೆ ನಿರ್ಮಾಣ ಮಾಡಲು ನಮಗೆ ಟೆಂಡರ್ ನೀಡಿದ್ದು, ಅದರಲ್ಲಿ ನಾವುಗಳು 138.41 ಕಿ.ಮೀ. ವರೆಗೆ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿದ್ದೇವೆ. ಉಳಿದ 8.25 ಕಿ.ಮೀ. ರಸ್ತೆ ಕಾಮಗಾರಿ ವಿವಿಧ ಕಾರಣಗಳಿಂದ ಬಾಕಿ ಉಳಿದಿರುತ್ತದೆ. ಮಳೆಗಾಲ ಮುಗಿದ ಮೇಲೆ ರಸ್ತೆ ಪೂರ್ಣ ಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಟೋಲ್ ವಸೂಲಿ ಮಾಡಲು ತಮಗೆ ಯಾರು ಅನುಮತಿ ನೀಡಿದರು?

ಮಾಹಿತಿ ಪಡೆದ ನಂತರ ಸಚಿವ ವೈದ್ಯ ಮಾತನಾಡಿ, 2014 ರಲ್ಲಿ ರಸ್ತೆ ನಿರ್ಮಾಣ ಮಾಡಲು ಸರ್ಕಾರ 30 ತಿಂಗಳ ಸಮಯ ನೀಡಿತ್ತು. ಆದರೆ ನಿಗದಿತ ಅವಧಿಯೊಳಗೆ ರಸ್ತೆ ನಿರ್ಮಾಣ ಪೂರ್ಣಗೊಂಡಿರುವುದಿಲ್ಲ. ಮತ್ತೆ 2020 ಕ್ಕೆ ಮತ್ತೊಂದು ಒಪ್ಪಂದ ಮಾಡಿಕೊಂಡು ಪ್ರತಿಶತ 80 ರಷ್ಟು ಕಾಮಗಾರಿ ಮುಗಿದಿದೆ ಎಂದು ತಿಳಿಸಿ ಟೋಲ್ ವಸೂಲಿ ಮಾಡಲು ಪ್ರಾರಂಭ ಮಾಡಿದ್ದೀರಿ . ಆದರೆ ಈವರೆಗೂ ತಾವುಗಳು 75 ರಷ್ಟು ರಸ್ತೆ ಕಾಮಗಾರಿ ಸಹ ಪೂರ್ಣ ಗೊಳಿಸಿರುವುದು ಕಂಡು ಬಂದಿರುವುದಿಲ್ಲ. ಅದಾಗಿಯೂ ಟೋಲ್ ವಸೂಲಿ ಮಾಡುತ್ತಿದ್ದೀರಿ. ಟೋಲ್ ವಸೂಲಿ ಮಾಡಲು ತಮಗೆ ಯಾರು ಅನುಮತಿ ನೀಡಿದರು ? ಒಂದು ವೇಳೆ ಸರ್ಕಾರ ತಮಗೆ ಟೋಲ್ ವಸೂಲಿ ಮಾಡಲು ಅನುಮತಿ ನೀಡಿದ್ದರೆ , ಅದನ್ನು ಈ ಕೂಡಲೇ ತಮ್ಮ ಗಮನಕ್ಕೆ ತರಲು ಐ ಆರ್ ಬಿ ಅಧಿಕಾರಿಗಳಿಗೆ ಸೂಚಿಸಿದರು.

ಕೇವಲ ರಸ್ತೆ ಮಾತ್ರ ನಿರ್ಮಾಣ ಮಾಡುವುದಲ್ಲದೆ, ರಸ್ತೆ ಪಕ್ಕಾ ಮೊದಲು ಬಸ್ ನಿಲ್ದಾಣಗಳು ಇದ್ದವು . ಈಗ ಯಾವುದೇ ಬಸ್ ನಿಲ್ದಾಣಗಳು ನಿರ್ಮಾಣವಾಗಿಲ್ಲ . ಶೀಘ್ರದಲ್ಲಿ ಹಳೆ ಬಸ್ ನಿಲ್ದಾಣಗಳು ಇರುವ ಸ್ಥಳಗಳಲ್ಲಿ , ಹೊಸ ಬಸ್ ನಿಲ್ದಾಣಗಳು ತುರ್ತಾಗಿ ನಿರ್ಮಾಣವಾಗಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

ಸಮರ್ಪಕ ಕಾರ್ಯನಿರ್ವಹಣೆ ಮಾಡಲು ಸಾಧ್ಯವಿಲ್ಲದಿದ್ದಲ್ಲಿ, ಕೂಡಲೇ ಎಲ್ಲವನ್ನು ಸ್ಥಗಿತಗೊಳಿಸುವಂತೆ ನೇರವಾಗಿ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದೂ, ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಪ್ರೊಬೆಷನರ್ ಐ ಎ ಎಸ್ ಅಧಿಕಾರಿ ಜುಬಿನ್ ಮಹೋಪಾತ್ರ ಹಾಗೂ ಜಿಲ್ಲಾ ಮಟ್ಟದ ಮತ್ತು ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

4-sirsi

Sirsi: ಗುಂಡಿಗದ್ದೆ ಬಳಿ ರಸ್ತೆ ದಾಟಿದ ಚಿರತೆ! : ಸ್ಥಳೀಯರಲ್ಲಿ ಆತಂಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ಕೈಗೊಳ್ಳುತ್ತಾರೆ: ಭೀಮಣ್ಣ ನಾಯ್ಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ: ಭೀಮಣ್ಣ ನಾಯ್ಕ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.