ಕಲಘಟಗಿಯ ಮಾಜಿ ಶಾಸಕ ಸಿ.ಎಂ.ನಿಂಬಣ್ಣನವರ ನಿಧನ
Team Udayavani, Jul 9, 2023, 2:34 PM IST
ಹುಬ್ಬಳ್ಳಿ: ಕಲಘಟಗಿಯ ಮಾಜಿ ಶಾಸಕ ಸಿ.ಎಂ. ನಿಂಬಣ್ಣನವರ ರವಿವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಮಾಜಿ ಶಾಸಕ ಸಿ.ಎಂ. ನಿಂಬಣ್ಣನವರ ಅನಾರೋಗ್ಯ ಪೀಡಿತರಾಗಿದ್ದು ಕೆಲದಿನಗಳಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮಧ್ಯಾಹ್ನ ನಿಧನರಾಗಿದ್ದಾರೆ.
ಸಿ.ಎಂ. ನಿಂಬಣ್ಣವರ ಹಲವು ವರ್ಷಗಳಿಂದ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದು, 2018ರಲ್ಲಿ ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.
2023ರ ಚುನಾವಣೆಯಲ್ಲಿ ಬಿಜೆಪಿ ಅವರಿಗೆ ಟಿಕೆಟ್ ನಿರಾಕರಿಸಿ ಕಾಂಗ್ರೆಸ್ ನಿಂದ ಆಗಮಿಸಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಚಬ್ಬಿ ಅವರಿಗೆ ಟಿಕೆಟ್ ನೀಡಿತ್ತು.
ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಯಿಂದ ಹೊರಬಂದು ಕೆಜೆಪಿ ಪಕ್ಷ ಸ್ಥಾಪಿಸಿದಾಗ ಅವರೊಂದಿಗೆ ಗುರುತಿಸಿಕೊಂಡಿದ್ದರು.
2023ರ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿದರಿಂದ ತೀವ್ರವಾಗಿ ಅಸಮಾಧಾನಗೊಂಡಿದ್ದ ನಿಮ್ಮ ಪಕ್ಷೇತರರಾಗಿ ಸ್ಪರ್ಧೆ ಇಳಿಯುವುದಾಗಿ ಘೋಷಿಸಿದ್ದರಾದರೂ ನಂತರ ಪಕ್ಷದ ಹಿರಿಯರ ಸೂಚನೆ ಮೇರೆಗೆ ಸ್ಪರ್ಧೆಗಿಳಿಯದೆ ಪಕ್ಷದಲ್ಲಿಯೇ ಮುಂದುವರೆದಿದ್ದರು.
ಮೂಲತಃ ಶಿಕ್ಷಕ ವೃತ್ತಿಯವರಾಗಿದ್ದ ನಿಂಬಣ್ಣನವರ ರಾಜಕೀಯಕ್ಕೆ ಸೇರ್ಪಡೆಗೊಂಡು ಹಲವು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದರು.
ಸಿಎಂ ನಿಂಬಣ್ಣವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ 3 ಗಂಟೆಗೆ ಕಲಘಟಗಿಯಲ್ಲಿ ನೆರವೇರಲಿದೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
MUDA Case: ಸಿದ್ದರಾಮಯ್ಯ ಅಧಿಕಾರದಲ್ಲಿದ್ರೆ ತನಿಖೆ ಮೇಲೆ ಪ್ರಭಾವ ಖಚಿತ: ಶಾಸಕ ಯತ್ನಾಳ್
Hubli; ಕೋರ್ಟ್ ಆದೇಶಕ್ಕೆ ತಲೆಬಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಪ್ರಮೋದ ಮುತಾಲಿಕ್
Hubli: ಗೌರವ ಉಳಿಯಬೇಕೆಂದರೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಬಸವರಾಜ ಬೊಮ್ಮಾಯಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.