ಅಮರನಾಥ ಯಾತ್ರೆಗೆ ತೆರಳಿದ ಮಹಾಲಿಂಗಪುರದ ಯಾತ್ರಿಕರು ಸುರಕ್ಷಿತ
Team Udayavani, Jul 9, 2023, 7:38 PM IST
ಮಹಾಲಿಂಗಪುರ : ಇದೇ ಜುಲೈ 3 ರಂದು ಮಹಾಲಿಂಗಪುರದಿಂದ ಇದೇ ಮೊದಲ ಬಾರಿಗೆ ಅಮರನಾಥ ಯಾತ್ರೆಗೆ ತೆರಳಿದ ಪಟ್ಟಣದ 6 ಜನ ಯಾತ್ರಿಕರು ಸುರಕ್ಷಿತವಾಗಿದ್ದೇವೆ ಎಂದು ರವಿವಾರ ಸಂಜೆ ಉದಯವಾಣಿಗೆ ಮಾಹಿತಿ ನೀಡಿದ್ದಾರೆ.
ಮಹಾಲಿಂಗಪುರದ ಮಲ್ಲಪ್ಪ ಭಾವಿಕಟ್ಟಿ, ಬಸವರಾಜ ಬಂಡಿವಡ್ಡರ, ಸಂಜು ಜಮಖಂಡಿ, ಶಂಕರ ಪಾತ್ರೋಟ, ಬೆಳಗಾವಿ ಹತ್ತಿರದ ಸುಳೆಭಾಂವಿಯ ಮಹಾಲಿಂಗ ನೀಲನ್ನವರ, ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಯೋಧ ಮಹಾದೇವಪ್ಪ ತಳ್ಳಿ ಸೇರಿದಂತೆ ಒಟ್ಟು 6 ಜನರು ಜುಲೈ 3 ರಂದು ಸಂಜೆ ಕುಡಚಿಯಿಂದ ರೈಲ್ವೆ ಮೂಲಕ ಮುಂಬೈಗೆ ತೆರಳಿದ್ದಾರೆ. ಜುಲೈ 5 ರಂದು ಮುಂಬೈಯಿಂದ ಜಮ್ಮು ಕಾಶ್ಮೀರನ ಶ್ರೀನಗರವರೆಗೆ ವಿಮಾನ ಮೂಲಕ ಅಮರನಾಥ ಯಾತ್ರೆಗೆ ತೆರಳಿದ್ದಾರೆ.
ಭಾರಿ ಮಳೆ ಮತ್ತು ಅಮರನಾಥ ಯಾತ್ರೆಯ ಮಾರ್ಗ ಮಧ್ಯೆ ಭೂಕುಸಿತ ಹಿನ್ನಲೆಯಲ್ಲಿ ಶುಕ್ರವಾರದಿಂದ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಕಾರಣ ಮಹಾಲಿಂಗಪುರದ 6 ಜನರು ಸೇರಿದಂತೆ ಸುಮಾರು 250 ಕ್ಕೂ ಅಧಿಕ ಜನ ಯಾತ್ರಿಕರು ಅಮರನಾಥ ಯಾತ್ರೆಯ ಮಧ್ಯದಲ್ಲಿರುವ ಡೊಮಾಲ್ ದ ವಿಶಾಲ ಭಂಡಾರ ಶಿವ ಆಶ್ರಯದಲ್ಲಿ ವಾಸ್ತವ್ಯ ಇದ್ದೇವೆ. ಆಶ್ರಮದಲ್ಲಿ ದಾನಿಗಳಿಂದ ಚಹಾ, ಉಪವಾರ , ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ. ಸದ್ಯ ನಾವೆಲ್ಲರೂ ಸುರಕ್ಷಿತವಾಗಿದ್ದೇವೆ, ಯಾವುದೇ ತೊಂದರೆ ಇಲ್ಲ ಎಂದು ಯಾತ್ರೆಯ ನೇತೃತ್ವ ವಹಿಸಿರುವ ಯೋಧ ಮಹಾದೇವಪ್ಪ ತಳ್ಳಿ ಮತ್ತು ಮಲ್ಲಪ್ಪ ಭಾಂವಿಕಟ್ಟಿ ಉದಯವಾಣಿಗೆ ತಿಳಿಸಿದ್ದಾರೆ.
ಭೂಕುಸಿತದಿಂದ ಬಂದಾಗಿರುವ ಅಮರನಾಥ ಯಾತ್ರೆಯ ರಸ್ತೆ ದುರಸ್ಥಿ ಕಾರ್ಯವು ಸಿಆರ್ ಪಿಎಫ್ ಮತ್ತು ಸೇನಾಪಡೆಯಿಂದ ನಡೆಯುತ್ತಿದೆ. ನಾವು ಇರುವ ಸ್ಥಳದಿಂದ ಅಮರನಾಥ ದರ್ಶನ ಇನ್ನು ಕೇವಲ 5-6 ಕೀ.ಮಿ ಇದ್ದು, ನಾಳೆಯಿಂದ ಮತ್ತೆ ಯಾತ್ರೆ ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
Bagalkote: ಆನ್ಲೈನ್ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ
ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.