ಲಿಂಗಾಯತ ಧರ್ಮ ಬೇಡಿಕೆ: ಸಮಚಿತ್ತದ ನಡೆ ಸರಕಾರದ್ದಾಗಲಿ


Team Udayavani, Jul 10, 2023, 5:59 AM IST

vidhana soudha

ರಾಜ್ಯದಲ್ಲಿ ಮತ್ತೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಮುನ್ನೆಲೆಗೆ ಬಂದಿದ್ದು ರಾಜ್ಯದ ಲಿಂಗಾಯತ ಸಮುದಾಯಕ್ಕೆ ಸೇರಿದ ವಿವಿಧ ಮಠಗಳ ಸ್ವಾಮೀಜಿಗಳು ಈ ಸಂಬಂಧ ರಾಜ್ಯ ಸರಕಾರದ ಗಮನ ಸೆಳೆದಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರವಾಗಿ ಸ್ವಾಮೀಜಿಗಳು ಮುಂದಿಟ್ಟಿರುವ ಬೇಡಿಕೆ, ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕೆ ಅತ್ತ ಉಗುಳಲೂ ಆಗದ, ಇತ್ತ ನುಂಗಲೂ ಆಗದ ನಾಲಗೆ ಮೇಲಣ ಬಿಸಿ ತುಪ್ಪದಂತಾಗುವ ಎಲ್ಲ ಸಾಧ್ಯತೆಗಳಿವೆ.

2018ರ ವಿಧಾನಸಭೆ ಚುನಾವಣೆಗೂ ಮುನ್ನ ಲಿಂಗಾಯತ ಸಮುದಾಯವನ್ನು ಪ್ರತ್ಯೇಕ ಧರ್ಮವಾಗಿ ಘೋಷಿಸುವಂತೆ ಆಗ್ರಹಿಸಿ ಭಾರೀ ಹೋರಾಟಗಳು ನಡೆದಿದ್ದವು. ಈ ವೇಳೆ ಆಗಿನ ಕಾಂಗ್ರೆಸ್‌ ಸರಕಾರ ಈ ಬಗ್ಗೆ ಪರಿಶೀಲನೆ ನಡೆಸಲು ನ್ಯಾ| ಎಚ್‌.ಎನ್‌.ನಾಗಮೋಹನದಾಸ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಸಮಿತಿಯು ನೀಡಿದ ವರದಿಯನ್ನು ರಾಜ್ಯ ಸಚಿವ ಸಂಪುಟದಲ್ಲಿ ಮಂಡಿಸಿ, ಹಿಂದುಳಿದ ವರ್ಗಗಳ ಇಲಾಖೆಯ ಅಭಿಪ್ರಾಯದಂತೆ ಕೇಂದ್ರ ಸರಕಾರಕ್ಕೆ ಕಳುಹಿಸಿಕೊಟ್ಟಿತ್ತು.

ಆದರೆ ಕೇಂದ್ರ ಸರಕಾರ ಈ ಪ್ರಸ್ತಾವನೆಯನ್ನು ವಾಪಸು ಕಳುಹಿಸುವ ಮೂಲಕ ಪ್ರತ್ಯೇಕ ಲಿಂಗಾಯತ ಧರ್ಮ ಘೋಷಣೆಯ ಪರವಾಗಿನ ರಾಜ್ಯ ಸರಕಾರದ ನಿಲುವಿಗೆ ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸಿತ್ತು. 2018ರ ವಿಧಾನಸಭೆ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ರಚನೆಯ ವಿಷಯವನ್ನು ಬಿಜೆಪಿ ಪ್ರಬಲ ಅಸ್ತ್ರವನ್ನಾಗಿ ಬಳಸಿಕೊಂಡು ಕಾಂಗ್ರೆಸ್‌ ಧರ್ಮ ವಿಭಜನೆಗೆ ಮುಂದಾಗಿದೆ ಎಂದು ನೇರವಾಗಿ ಆರೋಪಿಸಿತ್ತು. ಇದು ಚುನಾವಣ ಫ‌ಲಿತಾಂಶದ ಮೇಲೂ ಪರಿಣಾಮ ಬೀರಿ ಕಾಂಗ್ರೆಸ್‌ಗೆ ಹಿನ್ನಡೆಯನ್ನುಂಟು ಮಾಡಿತ್ತು. ಬಳಿಕ ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಮತ್ತು ಬಿಜೆಪಿ ಈ ವಿಚಾರದಲ್ಲಿ ತಟಸ್ಥ ಧೋರಣೆಯನ್ನು ಅನುಸರಿಸಿದ್ದರಿಂದ ಈ ವಿಚಾರ ಹಿನ್ನೆಲೆಗೆ ಸರಿದಿತ್ತು.

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ ಪ್ರತಿಧ್ವನಿಸಲಾರಂಭಿಸಿದೆ. ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ರವಿವಾರ ಧಾರವಾಡದಲ್ಲಿ ಆಯೋಜಿಸಲಾಗಿದ್ದ ಲಿಂಗಾಯತ ಧರ್ಮ ಚಿಂತನ ಶಿಬಿರದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಘೋಷಣೆಯ ಅಗತ್ಯತೆ ಮತ್ತು ಮಹತ್ವದ ಕುರಿತಂತೆ ಚರ್ಚಿಸಲಾಯಿತಲ್ಲದೆ ಸರಕಾರ ಒಕ್ಕೂಟದ ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ಹೋರಾಟವನ್ನು ಆರಂಭಿಸುವ ಕುರಿತಂತೆ ಸಮಾಲೋಚನೆ ನಡೆಸಲಾಗಿದೆ. ಸಭೆಯ ಅಂತ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಪದಾಧಿಕಾರಿಗಳು ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡುವ ಸಂಬಂಧ ಕೇಂದ್ರ ಸರಕಾರಕ್ಕೆ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸುವಂತೆ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ಅಲ್ಲದೆ ಈ ಸಂಬಂಧ ರಾಜ್ಯದ ಸಂಸದರುಗಳಿಗೂ ಮನವರಿಕೆ ಮಾಡಿ, ಕೇಂದ್ರದ ಮೇಲೆ ಒತ್ತಡ ಹೇರಲು ಹಾಗೂ ಒಂದು ವೇಳೆ ರಾಜ್ಯ ಮತ್ತು ಕೇಂದ್ರ ಸರಕಾರಗಳಿಂದ ಸಕಾರಾತ್ಮಕ ಸ್ಪಂದನೆ ಲಭಿಸದೇ ಹೋದಲ್ಲಿ ಕಾನೂನು ಹೋರಾಟ ನಡೆಸಲೂ ಒಕ್ಕೂಟ ಚಿಂತನೆ ನಡೆಸಿರುವುದಾಗಿಯೂ ತಿಳಿಸಿದ್ದಾರೆ. ಸ್ವಾಮೀಜಿಗಳ ಈ ನಡೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರಕ್ಕೆ ಬಲುದೊಡ್ಡ ಸವಾಲಾಗಲಿದೆ. ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಲಿಂಗಾಯತ ಮಠಾಧಿಪತಿಗಳು ಪ್ರತ್ಯೇಕ ಧರ್ಮಕ್ಕಾಗಿನ ಹೋರಾಟಕ್ಕೆ ಮರುಚಾಲನೆ ನೀಡಲು ಸಜ್ಜಾಗಿರುವುದು ರಾಜ್ಯ ಸರಕಾರವನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡುವ ಸಾಧ್ಯತೆಗಳಿವೆ. ಇದೊಂದು ಅತ್ಯಂತ ಸೂಕ್ಷ್ಮ ಮತ್ತು ಧಾರ್ಮಿಕ ನಂಬಿಕೆಯ ವಿಚಾರವಾಗಿರುವುದರಿಂದ ರಾಜ್ಯ ಸರಕಾರ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಅತ್ಯಂತ ಜಾಣ್ಮೆಯ ಮತ್ತು ಸಮಚಿತ್ತದ ನಡೆಯನ್ನು ಅನುಸರಿಸಬೇಕು.

ದೇಶದ ಸಾರಿಗೆ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಭಾರತೀಯ ರೈಲ್ವೇ ಜನರ ಪಾಲಿಗೆ ಜೀವನಾಡಿಯಾಗಿದೆ. ದೇಶದ ವಾಣಿಜ್ಯ ರಾಜಧಾನಿಯಾದ ಮುಂಬಯಿಯಲ್ಲಂತೂ ರೈಲು ಸೇವೆ ಜನರ ದೈನಂದಿನ ಬದುಕಿನಲ್ಲಿ ಹಾಸುಹೊಕ್ಕಾಗಿದ್ದು ಇಲ್ಲಿನ ಲೋಕಲ್‌ ರೈಲುಗಳಲ್ಲಿ ಪ್ರಯಾಣಿಸುವುದೇ ಒಂದು ಅದ್ಭುತ ಅನುಭವ. ಕಳೆದೊಂದು ದಶಕದ ಅವಧಿಯಲ್ಲಿ ಭಾರತೀಯ ರೈಲ್ವೇ ಸಾಕಷ್ಟು ಸುಧಾರಣೆಗಳನ್ನು ಕಂಡಿದೆ. ರೈಲ್ವೇ ಇಲಾಖೆ ತನ್ನ ಕಾರ್ಯಾಚರಣೆ ಯಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು, ಸುರಕ್ಷೆಗೆ ಹೆಚ್ಚಿನ ಒತ್ತು ನೀಡುತ್ತ ಬಂದಿದೆ. ಅಷ್ಟು ಮಾತ್ರವಲ್ಲದೆ ರೈಲು ಹಳಿಗಳ ವಿಸ್ತರಣೆ, ನಿಲ್ದಾಣಗಳ ಅಭಿವೃದ್ಧಿ, ಹೊಸದಾಗಿ ರೈಲು ಮಾರ್ಗಗಳ ನಿರ್ಮಾಣ, ನಗರಗಳ ನಡುವೆ ಹೊಸ ರೈಲುಗಳ ಓಡಾಟ, ರೈಲು ಸೇವೆಗಳಲ್ಲಿ ಸುಧಾರಣೆ ಮತ್ತಿತರ ಕ್ರಮಗಳ ಮೂಲಕ ಭಾರತೀಯರೈಲ್ವೇ ಮತ್ತಷ್ಟು ಜನಸ್ನೇಹಿ ಯಾಗಿ ಕಾರ್ಯಾಚರಿಸುತ್ತಿದೆ.

ಟಾಪ್ ನ್ಯೂಸ್

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-satya

Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.