Birth Anniversary: ಇವರು ಸ್ವತಂತ್ರ ಭಾರತದ ಮೊದಲ ರಕ್ಷಣಾ ಸಚಿವ…ಯಾರೀವರು?

ಮೊದಲ ರಕ್ಷಣಾ ಸಚಿವರಾಗಿ, ದೇಶಕ್ಕೆ ನೀಡಿರುವ ಕೊಡುಗೆಗಳನ್ನು ಇಲ್ಲಿ ನೆನಪಿಸಿಕೊಳ್ಳಲಾಗಿದೆ.

Team Udayavani, Jul 10, 2023, 2:47 PM IST

Birth Anniversary: ಇವರು ಸ್ವತಂತ್ರ ಭಾರತದ ಮೊದಲ ರಕ್ಷಣಾ ಸಚಿವ…ಯಾರೀವರು?

1902 ಜುಲೈ 11ರಂದು ಜನಿಸಿದ್ದ ಸರ್ದಾರ್‌ ಬಲದೇವ್‌ ಸಿಂಗ್‌ ಸ್ವತಂತ್ರ ಭಾರತದ ಮೊದಲ ರಕ್ಷಣಾ ಸಚಿವರಾಗಿದ್ದರು. ಬ್ರಿಟಿಷ್‌ ಆಡಳಿತಾವಧಿಯ ಪಂಜಾಬ್‌ ನ ರೂಪಾರ್‌ ಜಿಲ್ಲೆಯಲ್ಲಿ ಜನಿಸಿದ್ದ ಸಿಂಗ್‌ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇದನ್ನೂ ಓದಿ:Light House ಪಕ್ಕದಲ್ಲಿ ಸಮುದ್ರಕ್ಕೆ ಇಳಿಯುವುದು ಹಾಗೂ ಬಂಡೆ ಮೇಲಿನ ಪ್ರವೇಶಕ್ಕೆ ನಿರ್ಬಂಧ

ಭಾರತದ ಸ್ವಾತಂತ್ರ್ಯ ಮತ್ತು ವಿಭಜನೆಗೆ ಕಾರಣವಾದ ಸಂದರ್ಭದ ಮಾತುಕತೆಯಲ್ಲಿ ಬಲದೇವ್‌ ಸಿಂಗ್‌ ಅವರು ಸಿಖ್‌ ಸಮುದಾಯವನ್ನು ಪ್ರತಿನಿಧಿಸಿದ್ದರು. ಜೇಮ್‌ ಶೆಡ್‌ ಪುರದ ಪ್ರತಿಷ್ಠಿತ ಸ್ಟೀಲ್‌ ಉದ್ಯಮಿ ಇಂದರ್‌ ಸಿಂಗ್‌ ಪುತ್ರ ಬಲದೇವ್‌ ಸಿಂಗ್.‌ ಅಮೃತ್‌ ಸರದ ಖಾಲ್ಸಾ ಕಾಲೇಜಿನಲ್ಲಿ ಪದವಿ ಪಡೆದ ನಂತರ ಸರ್ದಾರ್‌ ಬಲದೇವ್‌ ಸಿಂಗ್‌ ತಂದೆಯ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದರು. 1930ರಲ್ಲಿ ಪಂಜಾಬ್‌ ಗೆ ಮರಳಿದ ಬಲದೇವ್‌ ರಾಜಕೀಯಕ್ಕೆ ಸೇರ್ಪಡೆಗೊಂಡಿದ್ದರು.

ಬಲದೇವ್‌ ಸಿಂಗ್‌ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಭಾರತದ ಮೊದಲ ರಕ್ಷಣಾ ಸಚಿವರಾಗಿ, ದೇಶಕ್ಕೆ ನೀಡಿರುವ ಕೊಡುಗೆಗಳನ್ನು ಇಲ್ಲಿ ನೆನಪಿಸಿಕೊಳ್ಳಲಾಗಿದೆ.

ಸರ್ದಾರ್‌ ಬಲದೇವ್‌ ಸಿಂಗ್‌ ರಾಜಕೀಯ ಪಯಣ:

ಬಲದೇವ್‌ ಸಿಂಗ್‌ ಅವರು 1937ರಲ್ಲಿ ಪ್ಯಾಂಥಿಕ್‌ ಪಕ್ಷದ ಅಭ್ಯರ್ಥಿಯಾಗಿ ಪಂಜಾಬ್‌ ಪ್ರಾಂತೀಯ ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ರಾಜಕೀಯ ಜೀವನಕ್ಕೆ ಕಾಲಿಟ್ಟಿದ್ದರು. ನಂತರ ಬಲದೇವ್‌ ಅವರು ಸಿಖ್‌ ಧಾರ್ಮಿಕ ಮುಖಂಡ ಮಾಸ್ಟರ್‌ ತಾರಾ ಸಿಂಗ್‌ ಮತ್ತು ಶಿರೋಮಣಿ ಅಕಾಲಿ ದಳದ ಜೊತೆ ನಿಕಟ ಸಂಪರ್ಕ ಬೆಳೆಸಿಕೊಂಡಿದ್ದರು.

ಹೀಗೆ ಜನಪ್ರಿಯ ರಾಜಕೀಯ ಪಯಣ ಆರಂಭಿಸಿದ್ದ ಸರ್ದಾರ್‌ ಬಲದೇವ್‌ ಸಿಂಗ್‌ ಅವರು 1942ರಿಂದ 1946ರವರೆಗೆ ರಾಜ್ಯದ ಅಭಿವೃದ್ಧಿ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಸ್ವಾತಂತ್ರ್ಯದ ಬಳಿಕ ದೇಶ ಇಬ್ಭಾಗವಾಗುವ ಸಂದರ್ಭದಲ್ಲಿ ಆರಂಭಿಕವಾಗಿ ಬಲದೇವ್‌ ಅವರು ಇಬ್ಭಾಗವನ್ನು ಬಲವಾಗಿ ವಿರೋಧಿಸಿದ್ದರು. ಒಂದು ದೇಶ ಇಬ್ಭಾಗವಾಗುವುದೇ ಅನಿವಾರ್ಯವಾದರೆ, ಆಗ ಸಿಖ್‌ ಸಮುದಾಯಕ್ಕೆ ರಕ್ಷಣೆ ನೀಡಬೇಕು ಹಾಗೂ ಪಂಜಾಬ್‌ ನ ಮುಸ್ಲಿಂ ಬಾಹುಳ್ಯದ ಪ್ರಾಂತ್ಯಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿದ್ದರು.

ದೇಶ ವಿಭಜನೆಯ ನಂತರದ ಪರಿಣಾಮ ಭೀಕರವಾಗಿತ್ತು. ಈ ಸಂದರ್ಭದಲ್ಲಿ ಗೃಹಸಚಿವ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರೊಂದಿಗೆ ಬಲದೇವ್‌ ಸಿಂಗ್‌ ಅವರು ಪರಿಹಾರ ಮತ್ತು ಸೇನಾ ಕಾರ್ಯಾಚರಣೆಯ ನೇತೃತ್ವ ವಹಿಸಿಕೊಂಡಿದ್ದರು.

1947ರಲ್ಲಿ ಭಾರತ- ಪಾಕಿಸ್ತಾನ ನಡುವಿನ ಯುದ್ಧದ ಸಂದರ್ಭದಲ್ಲಿ ರಕ್ಷಣಾ ಸಚಿವಾಲಯವನ್ನು ಬಲದೇವ್‌ ಸಿಂಗ್‌ ಸಮರ್ಥವಾಗಿ ಮುನ್ನಡೆಸಿದ್ದರು. ಅಷ್ಟೇ ಅಲ್ಲ ಜುನಾಗಢ್‌ ಮತ್ತು ಹೈದರಾಬಾದ್‌ ಅನ್ನು ಭಾರತಕ್ಕೆ ಸೇರಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು.

1948ರ ಸೆಪ್ಟೆಂಬರ್‌ ನಲ್ಲಿ ಗೃಹ ಸಚಿವ ವಲ್ಲಭಭಾಯಿ ಪಟೇಲ್‌ ಅವರ ಸೂಚನೆಯಂತೆ ಬಲದೇವ್‌ ಸಿಂಗ್‌ ಅವರು ಹೈದರಬಾದ್‌ ನಿಜಾಮ್‌ ವಿರುದ್ಧದ ಆಪರೇಶನ್‌ ಪೋಲೊ ಕಾರ್ಯಾಚರಣೆಗೆ ಯೋಜನೆ ರೂಪಿಸಿದ್ದರು. ಅಷ್ಟೇ ಅಲ್ಲ ಭಾರತೀಯ ರಾಜಕೀಯ ಏಕೀಕರಣಗಳ ಸಮಸ್ಯೆ ಮತ್ತು ಕಾಶ್ಮೀರ ಸಂಘರ್ಷದ ನಿರ್ವಹಣೆ ಕುರಿತು ಬಲದೇವ್‌ ಅವರು ಪಟೇಲ್‌ ಅವರಿಗೆ ನಿಕಟ ಸಲಹೆಗಾರರಾಗಿದ್ದರು. ಆದರೆ ರಾಜಕೀಯ ದೃಢನಿಷ್ಠೆಯಲ್ಲಿ ನೆಹರು ವಿಶ್ವಾಸ ಕಳೆದುಕೊಂಡ ಪರಿಣಾಮ ಬಲದೇವ್‌ ಸಿಂಗ್‌ ಅವರನ್ನು ರಕ್ಷಣಾ ಸಚಿವ ಹುದ್ದೆಯಿಂದ ತೆಗೆದುಹಾಕಲಾಗಿತ್ತು.!

ಭಾರತ ಸ್ವತಂತ್ರಗೊಂಡ ನಂತರ 1952ರಲ್ಲಿ ನಡೆದ ಮೊದಲ ಪ್ರಜಾಸತ್ತಾತ್ಮಕ ಚುನಾವಣೆಯಲ್ಲಿ ಬಲದೇವ್‌ ಸಿಂಗ್‌ ಸಂಸತ್‌(Indian National Congress) ಸದಸ್ಯರಾಗಿ ಆಯ್ಕೆಗೊಂಡಿದ್ದರು. 1957ರಲ್ಲಿ ನಡೆದ ಚುನಾವಣೆಯಲ್ಲಿಯೂ ಸಿಂಗ್‌ ಸಂಸತ್ತಿಗೆ ಪುನರಾಯ್ಕೆಗೊಂಡಿದ್ದರು.

ಭಾರತೀಯ ರಾಜಕೀಯ ಇತಿಹಾಸದಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದ ಸರ್ದಾರ್‌ ಬಲದೇವ್‌ ಸಿಂಗ್‌ ಅವರು ದೀರ್ಘಕಾಲದ ಅನಾರೋಗ್ಯದಿಂದಾಗಿ 1961ರಲ್ಲಿ ಇಹಲೋಕ ತ್ಯಜಿಸಿದ್ದರು. ಬಲದೇವ್‌ ಅವರು ಹರ್ ದೇವ್‌ ಕೌರ್‌ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಪುತ್ರರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harmanpreet Singh: ಹಾರ್ಮೋನಿಯಂ ಹುಚ್ಚಿದ್ದ ಹಳ್ಳಿಯ ಹುಡುಗ ಇದೀಗ ಹಾಕಿ ಸೂಪರ್‌ ಸ್ಟಾರ್‌

Harmanpreet Singh: ಹಾರ್ಮೋನಿಯಂ ಹುಚ್ಚಿದ್ದ ಹಳ್ಳಿಯ ಹುಡುಗ ಇದೀಗ ಹಾಕಿ ಸೂಪರ್‌ ಸ್ಟಾರ್‌

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

smi irani

Smriti Irani ದೆಹಲಿ ಬಿಜೆಪಿಯಲ್ಲಿ ಸಕ್ರಿಯ: ”ಸಿಎಂ ಫೇಸ್” ಆಗಿ ಕೇಳಿ ಬರುತ್ತಿರುವ ಹೆಸರು!

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.