ಶಾಶ್ವತ ನೆಲೆ ಕಾಣದ ಶ್ರೀ ನಾರಾಯಣ ಗುರು ವಸತಿ ಶಾಲೆ

ತಾತ್ಕಾಲಿಕ ವ್ಯವಸ್ಥೆಯಲ್ಲೂ ಜಾಗದ ಕೊರತೆ ; ಇನ್ನೂ ಸಿಗದ ಸರಿಯಾದ ರೂಪರೇಖೆ

Team Udayavani, Jul 11, 2023, 8:20 AM IST

Sri Narayana Guru ವಸತಿ ಶಾಲೆ ಇನ್ನೂ ಶಾಶ್ವತ ನೆಲೆಯಾಗಿಲ್ಲ; ತಾತ್ಕಾಲಿಕದಲ್ಲೂ ಸಮಸ್ಯೆ

ಕುಂದಾಪುರ: ರಾಜ್ಯ ಸರಕಾರ ಕಳೆದ ವರ್ಷದಿಂದ ಉಡುಪಿ, ದ.ಕ. ಸಹಿತ 4 ಜಿಲ್ಲೆಗಳಲ್ಲಿ ಆರಂಭಿಸಿದ ಶ್ರೀ ನಾರಾಯಣ ಗುರು ವಸತಿ ಶಾಲೆಗಳಿಗೆ ಇನ್ನೂ ಶಾಶ್ವತ ನೆಲೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. 2 ಕಡೆ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದ್ದು, ಇನ್ನೆರಡು ಕಡೆಗಳಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ನಡೆಯುತ್ತಿದ್ದು, ಅಲ್ಲಿ ಈಗ ಮಕ್ಕಳ ಸಂಖ್ಯೆ ಜಾಸ್ತಿ ಆಗುತ್ತಿರುವುದರಿಂದ ಸೂಕ್ತ ಸೌಕರ್ಯ ಕಲ್ಪಿಸುವುದೇ ಸವಾಲಾಗಿ ಪರಿಣಮಿಸಿದೆ.

ಕಳೆದ ವರ್ಷ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ 4 ಕಡೆ ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಆರಂಭಿಸಿತ್ತು. 6 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಲಾಗುತ್ತಿದೆ. ಆಗ ಇದಕ್ಕೆ ಬಜೆಟ್‌ನಲ್ಲಿ ಪ್ರತೀ ಶಾಲೆಗೆ 18 ಕೋ.ರೂ. ಅನುದಾನ ಘೋಷಿಸಿತ್ತು.

ಕಳೆದ ವರ್ಷ ತರಾತುರಿಯಲ್ಲಿ ಆರಂಭಗೊಂಡು, ತಾತ್ಕಾಲಿಕ ವ್ಯವಸ್ಥೆಯಲ್ಲಿಯೇ ತರಗತಿಗಳ ಪಠ್ಯ ಚಟುವಟಿಕೆಗಳು ನಡೆದಿದ್ದವು. ಆದರೆ ಆರಂಭಗೊಂಡು ವರ್ಷವಾದರೂ, ಇನ್ನೂ ಅದಕ್ಕೆ ಸರಿಯಾದ ರೂಪುರೇಷೆಯನ್ನು ಕೊಡುವಲ್ಲಿ ಸರಕಾರ ವಿಫಲವಾಗಿದೆ. ದ.ಕ. ದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಿದ್ದು, ಶಾಲೆ ಹೆಸರಿಗೆ ಕಟ್ಟಡ ನೋಂದಣಿಯೂ ಆಗಿದೆ. ಉಡುಪಿಯಲ್ಲಿ ಜಾಗ ಗುರುತಿಸಿದ್ದು, ಆದರೆ ಜಾಗದ ನೋಂದಣಿ ಆಗಬೇಕಾಗಿದೆ.

ಎಲ್ಲೆಲ್ಲಿ ಶಾಲೆಗಳು?
ಉಡುಪಿ ಜಿಲ್ಲೆಯ ಶಾಲೆಯನ್ನು ಕುಂದಾಪುರ ತಾಲೂಕಿನ ಯಡಾಡಿ- ಮತ್ಯಾಡಿಯ (ಶಾಶ್ವತ ಕಟ್ಟಡ ಬೇಳೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಆಗಲಿದೆ) ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದಿಗೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಾಲೆಯನ್ನು ಭಟ್ಕಳದ (ಶಾಶ್ವತ ಕಟ್ಟಡ ಜಾಲಿ ಪ.ಪಂ.ವ್ಯಾಪ್ತಿಯಲ್ಲಿ ಆಗಲಿದೆ) ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದಿಗೆ ತಾತ್ಕಾಲಿಕವಾಗಿ ಜಂಟಿಯಾಗಿ ನಡೆಸಲು ವ್ಯವಸ್ಥೆ ಮಾಡಲಾಗಿದೆ. ದ.ಕ. ಜಿಲ್ಲೆಯ ಶಾಲೆಯನ್ನು ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಹಾಗೂ ಶಿವಮೊಗ್ಗ ಜಿಲ್ಲೆಯ ಶಾಲೆಯನ್ನು ಸೊರಬ ತಾಲೂಕಿನಲ್ಲಿ ಬಾಡಿಗೆ ಕಟ್ಟಡವೊಂದರಲ್ಲಿ ಆರಂಭಿಸಿದೆ.

ಸಮಸ್ಯೆಗಳೇನು?
ಬಂಟ್ವಾಳ ಹಾಗೂ ಸೊರಬದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಮಕ್ಕಳಿಗೆ ತರಗತಿ ಹಾಗೂ ಹಾಸ್ಟೆಲ್‌ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಸರಕಾರ ಅದರ ಬಾಡಿಗೆ ವೆಚ್ಚವನ್ನು ಭರಿಸುತ್ತಿದೆ. ಆದರೆ ಕುಂದಾಪುರ ಹಾಗೂ ಭಟ್ಕಳದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ನಾರಾಯಣ ಗುರು ವಸತಿ ಶಾಲೆಯ ಮಕ್ಕಳಿಗೂ ಜಂಟಿಯಾಗಿ ವ್ಯವಸ್ಥೆ ಮಾಡಲಾಗಿದ್ದು, ಕಳೆದ ವರ್ಷ ಮಕ್ಕಳ ಸಂಖ್ಯೆ ಕಡಿಮೆ ಇದ್ದುದರಿಂದ ಅಂತಹ ಸಮಸ್ಯೆಯೇನು ಆಗಿಲ್ಲ. ಆದರೆ ಈ ಬಾರಿ ಮೊರಾರ್ಜಿ ಶಾಲೆಗಳ ಮಕ್ಕಳ ಸಂಖ್ಯೆ ಹಾಗೂ ನಾರಾಯಣ ಗುರು ಶಾಲೆಗಳ ಮಕ್ಕಳ ಸಂಖ್ಯೆ ಎರಡೂ ಜಾಸ್ತಿ ಆಗಿದ್ದು, ಈ ಸಂಖ್ಯೆ ಇನ್ನೂ ಹೆಚ್ಚಾಗಲಿದೆ. ಇದರಿಂದ ಮೊರಾರ್ಜಿ ಶಾಲೆಗಳಲ್ಲಿ ಇವರಿಗೆ ಉಳಿದುಕೊಳ್ಳಲು ವಸತಿ ಹಾಗೂ ಪಾಠ- ಪ್ರವಚನಕ್ಕೆ ತರಗತಿಗಳ ಕೋಣೆಗಳ ಕೊರತೆಯಾಗಲಿದೆ. ಇದಿಷ್ಟೇ ಅಲ್ಲದೆ ಎಲ್ಲ 4 ಕಡೆಗಳಲ್ಲೂ ನಾರಾಯಣ ಗುರು ಶಾಲೆಗೆಂದು ಪ್ರತ್ಯೇಕ ಶಿಕ್ಷಕರನ್ನಾಗಲಿ, ಹಾಸ್ಟೆಲ್‌ ವಾರ್ಡನ್‌ಗಳು, ಸಿಬಂದಿಯನ್ನು ಸಹ ನೇಮಿಸಿಲ್ಲ. ಅತಿಥಿ ಶಿಕ್ಷಕರು ಪಾಠ ಮಾಡುತ್ತಿದ್ದಾರೆ.

ಪರ್ಯಾಯ ವ್ಯವಸ್ಥೆ ಕಲ್ಪಿಸಲಿ
ಕುಂದಾಪುರದ ಯಡಾಡಿ- ಮತ್ಯಾಡಿಯ ನಾರಾಯಣ ಗುರು ವಸತಿ ಶಾಲೆಯೊಂದಿಗೆ ಜಂಟಿಯಾಗಿ ನಡೆಸಲಾಗುತ್ತಿದೆ. ಇಲ್ಲಿ ಕಳೆದ ವರ್ಷ ನಾರಾಯಣ ಗುರು ಶಾಲೆಗೆ 47 ಮಕ್ಕಳಿದ್ದರು. ಆದರೆ ಈ ಬಾರಿ ಈವರೆಗೆ 70 ಮಕ್ಕಳಾಗಿದ್ದು, ಇನ್ನೂ ಜಾಸ್ತಿಯಾಗಬಹುದು. ಮೊರಾರ್ಜಿ ದೇಸಾಯಿ ಶಾಲೆಯಲ್ಲಿ 190 ಮಕ್ಕಳಿದ್ದಾರೆ. ಅದು ಜಾಸ್ತಿಯಾಗಬಹುದು. ಅಲ್ಲಿನ ಗರಿಷ್ಠ ಸಾಮರ್ಥ್ಯ 250. ಈಗಿರುವ ಮಕ್ಕಳ ಸಂಖ್ಯೆಗೆ ಇದು ಸಾಲದು. ಹಾಗಾಗಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಪರ್ಯಯ ವ್ಯವಸ್ಥೆ ಮಾಡಬೇಕಾಗಿದೆ.
– ಸತೀಶ್‌ ಕುಂದಾಪುರ, ಶ್ರೀ ನಾರಾಯಣ ಗುರು ವಸತಿ ಶಾಲಾ ಪೋಷಕರ ಸಮಿತಿ ಸದಸ್ಯ

ಪರಿಶೀಲಿಸಿ, ಕ್ರಮ
ನಾನು ಹೊಸದಾಗಿ ಜವಾಬ್ದಾರಿ ವಹಿಸಿಕೊಂಡಿದ್ದು, ಈ ಬಗ್ಗೆ ಆದಷ್ಟು ಶೀಘ್ರ ತಿಳಿದುಕೊಂಡು, ಏನೆಲ್ಲ ಪ್ರಗತಿ ಆಗಿವೆ, ಆಗಬೇಕಾಗಿದೆ ಅನ್ನುವುದನ್ನು ಪರಿಶೀಲಿಸಿ, ಕ್ರಮ ವಹಿಸಿಕೊಳ್ಳುತ್ತೇನೆ.
– ನವೀನ್‌ ಕುಮಾರ್‌, ಕಾರ್ಯನಿರ್ವಾಹಕ ನಿರ್ದೇಶಕ, ರಾಜ್ಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್‌)

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.