ಕಾಂಗ್ರೆಸ್‌ ಸರ್ಕಾರ 5 ಗ್ಯಾರಂಟಿಗಳಿಗೆ ಷರತ್ತು: ಬೊಮ್ಮಾಯಿ ಟೀಕೆ

ಸ್ಪಷ್ಟ ನೀತಿ ಇಲ್ಲದ ಕವಲು ದಾರಿಯಲ್ಲಿ ಸರ್ಕಾರ ಸಾಗುತ್ತಿದೆ ಎಂದು ಹರಿಹಾಯ್ದ ಮಾಜಿ ಸಿಎಂ

Team Udayavani, Jul 11, 2023, 6:15 AM IST

ಕಾಂಗ್ರೆಸ್‌ ಸರ್ಕಾರ 5 ಗ್ಯಾರಂಟಿಗಳಿಗೆ ಷರತ್ತು: ಬೊಮ್ಮಾಯಿ ಟೀಕೆ

ವಿಧಾನಸಭೆ: ಕಾಂಗ್ರೆಸ್‌ ಸರ್ಕಾರ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಬದಲು “ದೇತೋ… ದಿಲಾತೋ.. ದೇನೇವಾಲೋ ಕೋ ದಿಖಾತೋ’ ಎನ್ನುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.

ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ ಬೆಂಬಲಿಸಿ ಮಾತನಾಡಿದ ಅವರು, 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಟೀಕಿಸಿದರಲ್ಲದೆ, ಅದರಲ್ಲಿನ ಹುಳುಕುಗಳನ್ನೂ ಎಳೆ ಎಳೆಯಾಗಿ ಬಿಡಿಸಿಟ್ಟರು.

ಚುನಾವಣೆಗೂ ಮೊದಲು ನೀಡಿದ್ದ ಗ್ಯಾರಂಟಿ ಕಾರ್ಡ್‌ಗೂ, ಜಾರಿ ಹಂತದಲ್ಲಿರುವ ಗ್ಯಾರಂಟಿಗಳಿಗೂ, ರಾಜ್ಯಪಾಲರ ಭಾಷಣಕ್ಕೂ, ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ಗೂ ಭೂಮಿ-ಆಕಾಶದಷ್ಟು ಅಂತರವಿದೆ. ನುಡಿದಂತೆ ನಡೆಯದ, ಸ್ಪಷ್ಟ ನೀತಿ ಇಲ್ಲದ ಕವಲು ದಾರಿಯಲ್ಲಿ ಸರ್ಕಾರ ಸಾಗುತ್ತಿದೆ. ಇವರು ಆಡುವುದೊಂದು, ಮಾಡುವುದೊಂದು ಎಂದು ಹರಿಹಾಯ್ದರು.

ಎಷ್ಟು ದಿನ ಈ ನಗದು ಭಾಗ್ಯ?: ಆರಂಭದಲ್ಲಿ 10 ಕೆ.ಜಿ. ಅಕ್ಕಿ ಎಂದಿದ್ದವರು, ಹಣ ತಿನ್ನಲು ಸಾಧ್ಯವೇ ಎಂದೆಲ್ಲಾ ಪ್ರಶ್ನಿಸಿದ್ದವರು ಇದೀಗ 170 ರೂ. ಕೊಡುತ್ತಿದ್ದೀರಿ. ಅನ್ನಭಾಗ್ಯದ ಬದಲು ಇನ್ನೆಷ್ಟು ತಿಂಗಳು ಈ ನಗದು ಭಾಗ್ಯ ಕೊಡುತ್ತೀರಿ? ಕಾಳಸಂತೆ ದಂಧೆಕೋರರಿಗೆ ಕಡಿವಾಣ ಹಾಕದಿದ್ದರೆ, ಅನ್ನಭಾಗ್ಯವು ಕನ್ನಭಾಗ್ಯವಾಗಲಿದೆ ಎಂದು ಎಚ್ಚರಿಸಿದರು.

ನಕಲಿ ಡಿಪ್ಲೊಮಾ ಪ್ರಮಾಣಪತ್ರ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪದವಿ, ಡಿಪ್ಲೊಮಾ ಪಡೆದು ಉದ್ಯೋಗ ಸಿಗದವರಿಗೆ ಯುವನಿಧಿ ಎಂದಿದ್ದೀರಿ. ಅನೇಕರು ನಕಲಿ ಡಿಪ್ಲೊಮಾ ಪ್ರಮಾಣಪತ್ರ ಪಡೆಯುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಗಮನ ಹರಿಸಿದೆಯೇ? ನಿಜವಾದ ನಿರುದ್ಯೋಗಿಗಳಿಗೆ ಈ ಹಣ ತಲುಪುವ ಬದಲು ನಕಲಿ ಪ್ರಮಾಣಪತ್ರ ಹೊಂದಿರುವವರಿಗೆ ತಲುಪುವ ಅಪಾಯವಿದೆ. ಯುವಕರ ದಾರಿ ತಪ್ಪಿಸುವ ನಿಧಿ ಇದಾಗಲಿದೆ.

ಬಡವರ ಬದುಕಿಗೆ ಮಿತಿ ಹೇರಿದ ಗೃಹಜ್ಯೋತಿ: ಎಲ್ಲರಿಗೂ 200 ಯುನಿಟ್‌ ಉಚಿತ ವಿದ್ಯುತ್‌ ಎಂದಿದ್ದ ಸರ್ಕಾರ, ವಾರ್ಷಿಕ ಸರಾಸರಿ ಬಳಕೆಯ ಮೇಲೆ ಹೆಚ್ಚುವರಿಯಾಗಿ 10 ಯುನಿಟ್‌ಗಳನ್ನಷ್ಟೇ ಬಳಸಲು ಮಿತಿ ಹೇರಿದೆ. ಈ ಮೂಲಕ ಜನರನ್ನು ಯಾಮಾರಿಸಿದೆ. ಬಡವರ ಆಸೆಗೆ ಮಿತಿ ಹೇರಿದೆ. ಹೀಗೇ ಆದರೆ, ಬಡತನದಿಂದ ಮೇಲೆ ಬರಲು ಅಗತ್ಯ ಮೂಲಸೌಕರ್ಯಗಳನ್ನು ಪಡೆಯುವುದು ಹೇಗೆ ಎಂದು ಪ್ರಶ್ನಿಸಿದರು.

ಗೃಹಲಕ್ಷ್ಮೀಗೆ ಗ್ರಹಣ, ಶಕ್ತಿಗೆ ಗರ: ಗೃಹಲಕ್ಷ್ಮೀ ಯೋಜನೆ ಇದುವರೆಗೆ ಬಾಲಗ್ರಹದಿಂದ ಹೊರಬರಲಾಗಿಲ್ಲ. ದುಡಿಯುವ ಶಕ್ತಿ ಇರುವ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯದಂತಹ ಯೋಜನೆಗಳಡಿ ನೆರವು ನೀಡುವ ಬದಲು ಅತ್ತೆ-ಸೊಸೆ ನಡುವೆ ಜಗಳ ಹಚ್ಚುವ ಯೋಜನೆ ಇದಾಗಿದೆ. ಇನ್ನು ಪುರುಷರಿಗೂ ಮಹಿಳೆಯರ ಹೆಸರಿನಲ್ಲಿ ಶಕ್ತಿ ಯೋಜನೆ ಟಿಕೆಟ್‌ ಸಿಗುತ್ತಿವೆ. ಇದೆಲ್ಲದರ ಬಗ್ಗೆ ಸರ್ಕಾರ ಲಕ್ಷ್ಯ ವಹಿಸಬೇಕಿದೆ.

ಆರ್ಥಿಕತೆ ಮೇಲೆ ಶಾಶ್ವತ ಭಾರ
ಗ್ಯಾರಂಟಿ ಜಾರಿಗೆ 52 ಸಾವಿರ ಕೋಟಿ ರೂ. ಖರ್ಚಾಗುವ ಅಂದಾಜು ಮಾಡಿದ್ದೀರಿ. ದೇಶ ಹಾಗೂ ರಾಜ್ಯದ ಆಂತರಿಕ ನಿವ್ವಳ ಉತ್ಪನ್ನ (ಜಿಎಸ್‌ಡಿಪಿ) ಹೆಚ್ಚಾಗಿರುವುದರಿಂದ ಹೆಚ್ಚುವರಿ ಸಾಲ ಮಾಡಲು ಸಾಧ್ಯವಾಗಿದೆ. ಪ್ರತಿ ವರ್ಷ ಈ 52 ಸಾವಿರ ಕೋಟಿ ರೂ. ಹೆಚ್ಚಾಗುತ್ತಲೇ ಹೋಗುತ್ತದೆ. ಜನರ ತೆರಿಗೆ ಹಣ ಹೇಗೆ ಬಳಸಬೇಕೆಂಬ ಬಗ್ಗೆ ಸರ್ಕಾರ ಯೋಚಿಸಬೇಕು. ಇದು ರಾಜ್ಯದ ಆರ್ಥಿಕತೆ ಮೇಲೆ, ಬಜೆಟ್‌ ಮೇಲೆ ಶಾಶ್ವತ ಭಾರ ಆಗಲಿದೆ. ಇದಕ್ಕೆ ಹೊಣೆಗಾರರು ಯಾರು ಎಂದು ಬೊಮ್ಮಾಯಿ ಪ್ರಶ್ನಿಸಿದರು.

10 ವರ್ಷದ ಭ್ರಷ್ಟಾಚಾರ ಪ್ರಕರಣಗಳ ತನಿಖೆ
ಲೋಕಾಯುಕ್ತ ಸಂಸ್ಥೆಯನ್ನು ನಿಷ್ಕ್ರಿಯಗೊಳಿಸಿದ ನೀವು ಭ್ರಷ್ಟಾಚಾರ ಹೆಚ್ಚಾಗಿದೆ ಎಂಬುದನ್ನು ರಾಜ್ಯಪಾಲರ ಭಾಷಣದಲ್ಲಿ ಹೇಳಿಸಿದ್ದೀರಿ. ಎಸಿಬಿ ಮೂಲಕ ಉನ್ನತ ಮಟ್ಟದ ಭ್ರಷ್ಟಾಚಾರವನ್ನು ಸಲಹಲಾಗುತ್ತಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು. ನಿಜಕ್ಕೂ ಭ್ರಷ್ಟಾಚಾರವನ್ನು ಕನಿಷ್ಠಗೊಳಿಸಬೇಕಿದ್ದರೆ 2013 ರಿಂದ 2023 ರವರೆಗಿನ 10 ವರ್ಷಗಳ ಭ್ರಷ್ಟಾಚಾರ ಪ್ರಕರಣಗಳನ್ನು ಆಯೋಗವೊಂದರ ಮೂಲಕ ತನಿಖೆಗೊಪ್ಪಿಸಿ ಎಂದು ಸವಾಲು ಹಾಕಿದರು.

ಎಲ್ಲ ಜಾತಿಗಳನ್ನು ಸಮಾನವಾಗಿ ಕಾಣುವುದರ ಜೊತೆಗೆ ಜಾತಿ ಮೀರಿ ಯೋಚಿಸಬೇಕು. ಜಾತಿಗಳ ನಡುವೆ ಸಂಘರ್ಷ ಸೃಷ್ಟಿಸಬಾರದು. ಇದು ನಿಜವಾದ ಜಾತ್ಯತೀತತೆ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು, ಪ್ರತಿಯೊಂದಕ್ಕೂ ರಾಜಕಾರಣ ಮಾಡುವುದು ಪ್ರಗತಿಪರ ಚಿಂತನೆಯೂ ಅಲ್ಲ, ನಾಯಕತ್ವ ಗುಣವೂ ಅಲ್ಲ.
-ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ

ಟಾಪ್ ನ್ಯೂಸ್

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.