Explainer;Mumbai ಸರಣಿ ರೈಲು ಸ್ಫೋಟಕ್ಕೆ 17 ವರ್ಷ;ಹೈಕೋರ್ಟ್ ನಲ್ಲಿ ಇನ್ನೂ ವಿಚಾರಣೆ ಬಾಕಿ!


Team Udayavani, Jul 11, 2023, 4:00 PM IST

Explainer;Mumbai ಸರಣಿ ರೈಲು ಸ್ಫೋಟಕ್ಕೆ 17 ವರ್ಷ;ಹೈಕೋರ್ಟ್ ನಲ್ಲಿ ಇನ್ನೂ ವಿಚಾರಣೆ ಬಾಕಿ!

ಮುಂಬೈ: ವಾಣಿಜ್ಯ ನಗರಿ ಮುಂಬೈನ ಸ್ಥಳೀಯ ರೈಲುಗಳಲ್ಲಿ ಸಂಭವಿಸಿದ್ದ ಸರಣಿ ಬಾಂಬ್‌ ಸ್ಫೋಟ ಘಟನೆ ನಡೆದು ಬರೋಬ್ಬರಿ 17 ವರ್ಷಗಳು ಕಳೆದಿದೆ. ಆದರೆ ನಾಲ್ವರು ಆರೋಪಿಗಳ ಮರಣದಂಡನೆ ಶಿಕ್ಷೆ ದೃಢಪಡಿಸುವ ವಿಚಾರಣೆ ಇನ್ನೂ ಬಾಂಬೆ ಹೈಕೋರ್ಟ್‌ ನಲ್ಲಿ ಆರಂಭವಾಗಿಲ್ಲ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಚಿಕ್ಕಮಗಳೂರು : ನಾಯಿ ನುಂಗಿ ನರಳುತ್ತಿದ್ದ 15 ಅಡಿ ಉದ್ದದ ಬೃಹತ್ ಹೆಬ್ಬಾವು ರಕ್ಷಣೆ

2006ರ ಜುಲೈ 11ರಂದು ಮುಂಬೈಯ ಪಶ್ಚಿಮ ರೈಲುಗಳಲ್ಲಿ 15 ನಿಮಿಷಗಳ ಅಂತರದಲ್ಲಿ ಸರಣಿ ಬಾಂಬ್‌ ಸ್ಫೋಟ ನಡೆದಿದ್ದು, ಘಟನೆಯಲ್ಲಿ ಒಟ್ಟು 180 ಮಂದಿ ಕೊನೆಯುಸಿರೆಳೆದಿದ್ದರು. ಚರ್ಚ್‌ ಗೇಟ್‌ ಬೊರಿವಲಿ ರೈಲಿನಲ್ಲಿ 6.20ಕ್ಕೆ ಮೊದಲ ಸ್ಫೋಟ ಸಂಭವಿಸಿತ್ತು. ನಂತರ ಅದೇ ಸಮಯಕ್ಕೆ ಬಾಂದ್ರಾ- ಖಾರ್‌ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಸ್ಫೋಟವಾಗಿದ್ದು, ಇನ್ನುಳಿದಂತೆ ಜೋಗೇಶ್ವರಿ, ಮಾಹೀಂ, ಮೀರಾ ರೋಡ್-ಭಯಾಂದರ್‌, ಮಾಟುಂಗಾ-ಮಾಹೀಮ್‌ ಮತ್ತು ಬೊರಿವಲಿ ರೈಲುಗಳಲ್ಲಿ ಸ್ಫೋಟ ಸಂಭವಿಸಿತು.

ಪ್ರಕರಣದ ತನಿಖೆಯನ್ನು ಭಯೋತ್ಪಾದಕ ನಿಗ್ರಹ ದಳಕ್ಕೆ (ATS) ಹಸ್ತಾಂತರಿಸಿದ ಮೇಲೆ ಎಟಿಎಸ್‌ ಇಂಡಿಯನ್‌ ಮುಜಾಹಿದೀನ್‌ ಗೆ ಸೇರಿದ 13 ಜನರನ್ನು ಬಂಧಿಸಿತ್ತು.

ಐವರಿಗೆ ಗಲ್ಲುಶಿಕ್ಷೆ ವಿಧಿಸಿದ ಮೋಕಾ ಕೋರ್ಟ್:‌

2015ರ ಸೆಪ್ಟೆಂಬರ್‌ ನಲ್ಲಿ ವಿಶೇಷ MCOCA ಕೋರ್ಟ್‌ ಐವರು ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ಹಾಊ ಉಳಿದ ಏಳು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ತೀರ್ಪು ಘೋಷಿಸಿತ್ತು. ವಿಚಾರಣಾ ಕೋರ್ಟ್‌ ವಿಧಿಸಿರುವ ಗಲ್ಲುಶಿಕ್ಷೆಯನ್ನು ಹೈಕೋರ್ಟ್‌ ಇನ್ನಷ್ಟೇ ಕಾಯಂಗೊಳಿಸಬೇಕಾಗಿದೆ.

ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೊಳಗಾದ ನಾಲ್ವರು ಆರೋಪಿಗಳಾದ ಮೊಹಮ್ಮದ್‌ ಫೈಸಲ್‌ ಶೇಕ್‌, ಎಹ್ತೇಶಾಮ್‌ ಸಿದ್ದಿಖಿ, ನವೀದ್‌ ಹುಸೈನ್‌ ಖಾನ್‌ ಅಸೀಫ್‌ ಖಾನ್‌ ಗೆ ಗಲ್ಲುಶಿಕ್ಷೆ ಕಾಯಂಗೊಳಿಸುವಂತೆ ಮಹಾರಾಷ್ಟ್ರ ಸರ್ಕಾರ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಒಬ್ಬ ಆರೋಪಿ ಸಾವನ್ನಪ್ಪಿದ್ದ:

ಬಾಂಬ್‌ ಸ್ಪೋಟ ಪ್ರಕರಣದಲ್ಲಿ ಮೋಕಾ ಕೋರ್ಟ್‌ ನಲ್ಲಿ ಮರಣದಂಡನೆ ಶಿಕ್ಷೆಗೊಳಗಾಗಿದ್ದ ಆರೋಪಿಗಳಲ್ಲಿ ಒಬ್ಬನಾದ ಕಮಲ್‌ ಅಹ್ಮದ್‌ ಅನ್ಸಾರಿ 2022ರಲ್ಲಿ ನಾಗ್ಪುರ್‌ ಜೈಲಿನಲ್ಲಿ ಕೋವಿಡ್‌ ನಿಂದ ಕೊನೆಯುಸಿರೆಳೆದಿದ್ದು, ಈ ಹಿನ್ನೆಲೆಯಲ್ಲಿ ಅನ್ಸಾರಿ ವಿರುದ್ಧದ ಪ್ರಕರಣ ರದ್ದುಗೊಂಡಿರುವುದಾಗಿ ವರದಿ ವಿವರಿಸಿದೆ.

ಇನ್ನುಳಿದ ಏಳು ಆರೋಪಿಗಳಾದ ತನ್ವೀರ್‌ ಅಹ್ಮದ್‌ ಅನ್ಸಾರಿ, ಮೊಹಮ್ಮದ್‌ ಮಜೀದ್‌ ಶಫಿ, ಶೇಕ್‌ ಅಲಾಮ್‌ ಶೇಕ್‌, ಮೊಹಮ್ಮದ್‌ ಸಾಜಿದ್‌ ಅನ್ಸಾರಿ, ಮುಝಾಮ್ಮಿಲ್‌ ಶೇಕ್‌, ಸೊಹೈಲ್‌ ಮೆಹಮೂದ್‌ ಶೇಕ್‌ ಮತ್ತು ಜಮೀರ್‌ ಅಹ್ಮದ್‌ ಶೇಕ್‌ ಕೂಡಾ ಜೀವಾವಧಿ ಶಿಕ್ಷೆಯ ತೀರ್ಪಿನ ವಿರುದ್ಧ ಹೈಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

2015ರಿಂದ ಶಿಕ್ಷೆಯ ಕಾಯಂಮಾತಿ ಮತ್ತು ಆರೋಪಿಗಳ ಮೇಲ್ಮನವಿ ಹೈಕೋರ್ಟ್‌ ನ 9 ವಿವಿಧ ಪೀಠಗಳ ಮುಂದೆ ಬಂದಿತ್ತಾದರೂ..ಯಾವ ಪೀಠವೂ ವಿಚಾರಣೆ ನಡೆಸಿಲ್ಲವಾಗಿತ್ತು. ಜಸ್ಟೀಸ್‌ ಅಜೆಯ್‌ ಗಡ್ಕರಿ ಮತ್ತು ಪಿಡಿ ನಾಯ್ಕ್‌ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತಾದರೂ ಈ ಪೀಠವೂ ವಿಚಾರಣೆ ನಡೆಸಲು ನಿರಾಕರಿಸಿತ್ತು ಎಂದು ವರದಿ ವಿವರಿಸಿದೆ.

ಹೈಕೋರ್ಟ್‌ ನಲ್ಲಿ ಆರೋಪಿಗಳ ಹಾಗೂ ಸರ್ಕಾರದ ಮೇಲ್ಮನವಿಯ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡುವ ಮೊದಲು ಪ್ರಾಸಿಕ್ಯೂಷನ್‌ ಮತ್ತು ಆರೋಪಿಗಳ ಪರ ವಕೀಲರ ವಾದವನ್ನು ಆಲಿಸಿ, ವಿಶೇಷ ಕೋರ್ಟ್‌ ನೀಡಿರುವ ತೀರ್ಪನ್ನು ಮರು ಓದುವ ಮೂಲಕ ತೀರ್ಪನ್ನು ನೀಡಬೇಕಾಗಿದೆ.

ಪ್ರಾಸಿಕ್ಯೂಷನ್‌ ಮತ್ತು ಆರೋಪಿಗಳ ಪರ ವಕೀಲರು ಬಾಂಬೆ ಹೈಕೋರ್ಟ್‌ ನ ಚೀಫ್‌ ಜಸ್ಟೀಸ್‌ ದೀಪಂಕರ್‌ ದತ್ತಾ ಅವರನ್ನು ಭೇಟಿಯಾಗಿ 7/11 ರೈಲು ಸ್ಫೋಟ ಪ್ರಕರಣದ ವಿಚಾರಣೆ ನಡೆಸಲು ವಿಶೇಷ ಪೀಠ ರಚಿಸುವಂತೆ ಮನವಿ ಸಲ್ಲಿಸಿದ್ದರು. ಆದರೆ ಈವರೆಗೂ ವಿಶೇಷ ಪೀಠ ರಚನೆಯಾಗಿಲ್ಲ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.