ಕೋವಿ ಅಡಮಾನಿಗೆ ಹಣಪಡೆಯುವಂತಿಲ್ಲ: ಪ್ರಶ್ನೋತ್ತರ ಕಲಾಪದಲ್ಲಿ ವಿಷಯ ಪ್ರಸ್ತಾವಿಸಿದ ಅಶೋಕ್ ರೈ
Team Udayavani, Jul 12, 2023, 7:11 AM IST
ಬೆಂಗಳೂರು: ಚುನಾವಣ ನೀತಿ ಸಂಹಿತೆ ವೇಳೆ ರೈತರ ಬಳಿಯಿರುವ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಯಲ್ಲಿ ಜಮೆ ಮಾಡುವ ವಿಚಾರವಿಂದು ವಿಧಾನ
ಸಭೆಯಲ್ಲಿ ಗಹನವಾದ ಚರ್ಚೆಗೆ ನಾಂದಿ ಹಾಡಿತು.
ಪ್ರಶ್ನೋತ್ತರ ಕಲಾಪದಲ್ಲಿ ವಿಷಯ ಪ್ರಸ್ತಾವಿಸಿದ ಶಾಸಕ ಅಶೋಕ್ ಕುಮಾರ್ ರೈ, ಬೆಳೆದ ಬೆಳೆಗಳನ್ನು ಪ್ರಾಣಿಗಳಿಂದ ರಕ್ಷಿಸಿಕೊಳ್ಳಲು ರೈತರಿಗೆ ಕೋವಿ ನೀಡಲಾಗಿದೆ. ಆದರೆ, ಚುನಾವಣ ನೀತಿ ಸಂಹಿತೆ ವೇಳೆ 200 ರೂ. ಠೇವಣಿ ಇರಿಸಿಕೊಂಡು ಕೋವಿಗಳನ್ನು ಪೊಲೀಸ್ ಠಾಣೆಯಲ್ಲಿ ಇಟ್ಟುಕೊಳ್ಳಲಾಗುತ್ತಿದೆ. ಇದರಿಂದ ರೈತರಿಗೆ ಸಮಸ್ಯೆಗಳಾಗುತ್ತಿವೆ ಎಂದು ಗಮನ ಸೆಳೆದರು.
ಕೋವಿಗೂ ಹೆದರದ ಮಂಗಗಳು
ಉಡುಪಿ, ದ.ಕ. ಜಿಲ್ಲೆಗಳಲ್ಲಿ 11 ಸಾವಿರ ಕೋವಿಗಳಿಗೆ ಪರವಾನಗಿ ಇವೆ. ನ್ಯೂ ಜನರೇಶನ್ ಮಂಗಗಳು ಕೋವಿಗೂ ಹೆದರುತ್ತಿಲ್ಲ. ಪರಿಸ್ಥಿತಿ ಹೀಗಿರುವಾಗ ಪಂಚಾಯತ್, ಸ್ಥಳೀಯ ಸಂಸ್ಥೆ, ವಿಧಾನಸಭೆ, ಲೋಕಸಭೆ ಎನ್ನುತ್ತ ವರ್ಷದಲ್ಲಿ 2-3 ಚುನಾವಣೆಗಳು ಬರುತ್ತವೆ. ಚುನಾವಣೆ ಬಂದಾಗಲೆಲ್ಲ ಇವನ್ನು ಠಾಣೆಯಲ್ಲಿಟ್ಟು 200 ರೂ. ಕಟ್ಟುತ್ತಿದ್ದೇವೆ. ಹೀಗೇ ಆದರೆ ಬೆಳೆ ರಕ್ಷಣೆ ಹೇಗೆ? ಎಂದು ಪ್ರಶ್ನಿಸಿದರು.
200 ರೂ. ಠೇವಣಿ ಇಡುವ ಅಗತ್ಯವಿಲ್ಲ: ಚುನಾವಣೆ ವೇಳೆ ಶಸ್ತ್ರಾಸ್ತ್ರಗಳನ್ನು ಪೊಲೀಸರ ವಶಕ್ಕೆ ನೀಡುವುದು ಹಿಂದಿನಿಂದಲೂ ಇರುವ ನಿಯಮ. ಆದರೆ, 200 ರೂ. ಠೇವಣಿ ಇಡಬೇಕೆಂದು ಇಲ್ಲ. ಹಾಗೇನಾದರೂ ಯಾರಾದರೂ ಪೊಲೀಸರು ಹಣ ಪಡೆದ ಬಗ್ಗೆ
ನಿರ್ದಿಷ್ಟ ಪ್ರಕರಣಗಳಿದ್ದರೆ ಕ್ರಮ ಜರಗಿಸಲಾಗುತ್ತದೆ. ತುರ್ತು ಮತ್ತು ಅನಿವಾರ್ಯ ಇದ್ದಾಗ ಚುನಾವಣೆ ಸಂದರ್ಭದಲ್ಲೂ ಶಸ್ತ್ರಾಸ್ತ್ರಗಳನ್ನು ಪರವಾನಗಿ
ಹೊಂದಿದವರು ತಮ್ಮ ಬಳಿ ಇಟ್ಟುಕೊಳ್ಳಲು ಅವಕಾಶವಿದೆ. ಎಕ್ಷಂಪ್ಸನ್ ಕಮಿಟಿ (ವಿನಾಯಿತಿ ಸಮಿತಿ) ಮುಂದೆ ಅರ್ಜಿ ಸಲ್ಲಿಸಿ, ಶಸ್ತ್ರಾಸ್ತ್ರಗಳನ್ನು ಜಮೆ ಮಾಡುವುದರಿಂದ ವಿನಾಯಿತಿ ಪಡೆಯಬಹುದಾಗಿದೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
MUST WATCH
ಹೊಸ ಸೇರ್ಪಡೆ
Yakshagana: ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ಸಂಸ್ಮರಣ ಪ್ರಶಸ್ತಿ ಗೌರವ
Elephant Corridor: ಅಭಿವೃದ್ಧಿ ಯೋಜನೆಗಳಿಂದ ಆನೆ ಕಾರಿಡಾರ್ಗೆ ಹಾನಿ
Music Programme: ಸಂಗೀತ ರಸಿಕರನ್ನು ರಂಜಿಸಿದ ಮಳೆಗಾಲದ ರಾಗಗಳ ಗಾಯನ
Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್
Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.