Rain ಮುಗಿಯದ ಮಳೆಯ ಹೊಡೆತ: ಇನ್ನೂ 3 ದಿನಗಳ ಕಾಲ ಉತ್ತರದಲ್ಲಿ ವರುಣಾಘಾತ ಮುಂದುವರಿಕೆ

23 ರಾಜ್ಯಗಳಿಗೆ ವಿಪರೀತ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Team Udayavani, Jul 12, 2023, 7:15 AM IST

Rain ಮುಗಿಯದ ಮಳೆಯ ಹೊಡೆತ: ಇನ್ನೂ 3 ದಿನಗಳ ಕಾಲ ಉತ್ತರದಲ್ಲಿ ವರುಣಾಘಾತ ಮುಂದುವರಿಕೆ

ಹೊಸದಿಲ್ಲಿ: ಉತ್ತರ ಭಾರತದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಸದ್ಯಕ್ಕಂತೂ ವರ್ಷಧಾರೆ, ಪ್ರವಾಹ, ಭೂಕುಸಿತದಿಂದ ಜನರಿಗೆ ಮುಕ್ತಿ ಸಿಗುವ ಲಕ್ಷಣ ಗೋಚರಿಸುತ್ತಿಲ್ಲ. ಏಕೆಂದರೆ, ದೇಶದ 23 ರಾಜ್ಯಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ವಿಪರೀತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈಗಾಗಲೇ ಭೂಕುಸಿತದಿಂದ ನಲುಗಿ ಹೋಗಿರುವ ಉತ್ತರಾಖಂಡಕ್ಕೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದ್ದು, ಮತ್ತಷ್ಟು ಆತಂಕ ಮೂಡಿಸಿದೆ. ಇನ್ನು, ಪಶ್ಚಿಮ ಬಂಗಾಲ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲೂ ವಿಪರೀತ ಮಳೆಯಾಗಲಿದೆ ಎಂದು ಹೇಳಿದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ, ದಿಲ್ಲಿ, ಉತ್ತರಪ್ರದೇಶ ಮತ್ತು ರಾಜಸ್ಥಾನದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಇಲಾಖೆ ಹೇಳಿದ್ದು, 3 ದಿನಗಳ ಬಳಿಕ ಮಳೆಯ ಪ್ರಮಾಣ ತಗ್ಗಲಿದೆ ಎಂದಿದೆ.

ಅಧಿಕೃತ ಮಾಹಿತಿ ಪ್ರಕಾರ, ಹಿಮಾಚಲ ಪ್ರದೇಶದಲ್ಲಿ ದಿಢೀರ್‌ ಪ್ರವಾಹದಿಂದ ಕೇವಲ 2 ದಿನಗಳಲ್ಲಿ 37 ಮಂದಿ ಮೃತಪಟ್ಟಿದ್ದಾರೆ. ಈ ಸಂಖ್ಯೆ ಇನ್ನೂ ಹೆಚ್ಚಿದೆ ಎಂದು ಅನಧಿಕೃತ ಮೂಲಗಳು ತಿಳಿಸಿವೆ. ಮಂಗಳವಾರ ಮಳೆ ಮತ್ತು ಹಿಮ ವರ್ಷದಿಂದ ಹಿಮಾಚಲ ಪ್ರದೇಶದ ಚಂದೇರ್‌ತಾಲ್‌ನಲ್ಲಿ ಸುಮಾರು 300 ಮಂದಿ ಪ್ರವಾಸಿಗರು ಸಿಲುಕಿಕೊಂಡಿದ್ದು, ಅವರನ್ನು ರಕ್ಷಿಸಲು ವಾಯುಪಡೆಯ ಹೆಲಿಕಾಪ್ಟರ್‌ ಅನ್ನು ನಿಯೋಜಿಸಲಾಗಿದೆ. ಉಸಿರಾಟದ ತೊಂದರೆ ಎದುರಿಸುತ್ತಿದ್ದ ಇಬ್ಬರನ್ನು ಏರ್‌ಲಿಫ್ಟ್ ಮಾಡಲಾಗಿದೆ.

ಉಕ್ಕಿದ ಯಮುನೆ, ದಿಲ್ಲಿಗೂ ನುಗ್ಗಿದ ಪ್ರವಾಹ: ದಿಲ್ಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ (205.33 ಮೀಟರ್‌) ಮೀರಿ ಹರಿಯುತ್ತಿದ್ದು, ಪ್ರವಾಹ ಭೀತಿ ತೀವ್ರಗೊಂಡಿದೆ. ಮುಳುಗಡೆ ಸಾಧ್ಯತೆಯಿರುವ ಪ್ರದೇಶಗಳ ನಿವಾಸಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಜತೆಗೆ ಹಳೆಯ ರೈಲ್ವೇ ಸೇತುವೆಯನ್ನು ಮುಚ್ಚಲಾಗಿದ್ದು, ವಾಹನಗಳು ಮತ್ತು ರೈಲು ಸಂಚಾರಕ್ಕೆ ಅನುಮತಿ ನಿರ್ಬಂಧಿಸಲಾಗಿದೆ. ಹರಿಯಾಣದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಯಮುನಾ ನಗರದ ಹತ್ನಿಕುಂಡ್‌

ಬ್ಯಾರೇಜ್‌ನಿಂದ ನೀರು ಬಿಡುಗಡೆ ಮಾಡಲಾಗಿದೆ. ಇದರ ಪರಿಣಾಮವಾಗಿ ಯಮುನಾ ನದಿಯಲ್ಲಿ ನೀರಿನ ಮಟ್ಟ 206.38ಕ್ಕೇರಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ  ಹಲವಾರು ಮನೆಗಳು ಜಲಾವೃತಗೊಂಡಿವೆ.

ಈ ಹಿಂದೆ 1978ರಲ್ಲಿ  ಯಮುನೆಯ ನೀರಿನ ಮಟ್ಟ 207.49 ಮೀಟರ್‌ಗೆ ತಲುಪಿದ್ದೇ ಸಾರ್ವಕಾಲಿಕ ದಾಖಲೆಯಾಗಿತ್ತು. ಈ ಮಟ್ಟವನ್ನು “ಅತ್ಯಧಿಕ ಪ್ರವಾಹದ ಮಟ್ಟ’ ಎಂದು ಪರಿಗಣಿಸಲಾಗುತ್ತದೆ.

ಇದು ಆರಂಭವಷ್ಟೇ ಎಂದ ವಿಜ್ಞಾನಿಗಳು!
ವಾತಾವರಣದಲ್ಲಿ ಆಗಿರುವ ಎರಡು ಅಪರೂಪದ ವಿದ್ಯಮಾನದಿಂದಾಗಿ ಉತ್ತರ ಭಾರತವಿಡೀ ಮಳೆಯಲ್ಲಿ ತೋಯುವಂತಾಗಿದೆ. ಹಾಗಂತ ಇಂಥ ಪರಿಸ್ಥಿತಿ ಉಂಟಾಗಿರುವುದು ಕೇವಲ ಭಾರತದಲ್ಲಿ ಮಾತ್ರವಲ್ಲ; ಜಗತ್ತಿನ ಇನ್ನೂ ಅನೇಕ ದೇಶಗಳು ಇದೇ ಮಾದರಿಯ ಪ್ರವಾಹದಿಂದ ಸಂಕಷ್ಟಕ್ಕೀಡಾಗಿವೆ. ಜಪಾನ್‌ನಲ್ಲಿ ಧಾರಾಕಾರ ಮಳೆಯಿಂದ ಪ್ರವಾಹ, ಭೂಕುಸಿತ ಉಂಟಾಗಿದ್ದರೆ, ನ್ಯೂಯಾರ್ಕ್‌ನ ಹಡ್ಸನ್‌ ವ್ಯಾಲಿ, ವರ್ಮೋಂಟ್‌ನಲ್ಲಿ ಪ್ರವಾಹದಿಂದ ಜನ ತತ್ತರಿಸಿಹೋಗಿದ್ದಾರೆ. 2011ರ ಚಂಡಮಾರುತಕ್ಕಿಂತಲೂ ಇಂದಿನ ಪರಿಸ್ಥಿತಿ ಭೀಕರವಾಗಿದೆ ಎಂದು ಜನ ಹೇಳಿಕೊಳ್ಳುತ್ತಿದ್ದಾರೆ. ಚೀನದ ಉತ್ತರ, ಕೇಂದ್ರ ಮತ್ತು ಆಗ್ನೇಯ ಭಾಗದಲ್ಲಿ ನೆರೆಯಿಂದಾಗಿ ಸಾವಿರಾರು ಮಂದಿಯನ್ನು ಸ್ಥಳಾಂತರಿಸಲಾಗಿದೆ. ಟರ್ಕಿಯಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ. ಇವೆಲ್ಲದಕ್ಕೂ ಪರಸ್ಪರ ಸಂಬಂಧವಿದೆ ಎನ್ನುತ್ತಾರೆ ವಿಜ್ಞಾನಿಗಳು.

ತಾಪ ಹೆಚ್ಚಿರುವಂಥ ವಾತಾವರಣದಲ್ಲಿ ರೂಪುಗೊಳ್ಳುವ ಬಿರುಗಾಳಿಯೇ ಇದಕ್ಕೆ ಕಾರಣ ಎನ್ನುವುದು ಅವರ ವಾದ. ಬೆಚ್ಚಗಿನ ವಾತಾವರಣವು ಹೆಚ್ಚು ತೇವಾಂಶವನ್ನು ಹೊಂದಿರುತ್ತದೆ. ಇವು ಭಾರೀ ಮಳೆಗೆ ಕಾರಣವಾಗುತ್ತವೆ. ಜತೆಗೆ ಇಂಗಾಲದ ಡೈ ಆಕ್ಸೆ„ಡ್‌ ಮತ್ತು ಮೀಥೇನ್‌ನಂತಹ ಮಲಿನಕಾರಕಗಳು ವಾತಾವರಣದ ಬಿಸಿಯನ್ನು ಹೆಚ್ಚಿಸುತ್ತಿವೆ. ಜತೆಗೆ ತಾಪವು ಭೂಮಿಯಿಂದ ಬಾಹ್ಯಾಕಾಶದತ್ತ ಹೊರಸೂಸಲು ಅವಕಾಶ ನೀಡುವ ಬದಲು, ಇವುಗಳು ಆ ತಾಪವನ್ನು ಹಿಡಿದಿಟ್ಟುಕೊಳ್ಳುತ್ತಿವೆ. ತಾಪಮಾನ ಹೆಚ್ಚಳವಾದಂತೆಇಂಥ ಪ್ರಾಕೃತಿಕ ವಿಕೋಪಗಳೂ ಹೆಚ್ಚಳವಾಗುತ್ತಲೇ ಸಾಗುತ್ತವೆ. ಇದು ಆರಂಭವಷ್ಟೇ ಎಂಬ ಎಚ್ಚರಿಕೆಯನ್ನೂ ವಿಜ್ಞಾನಿಗಳು ನೀಡಿದ್ದಾರೆ.

ಕೊಚ್ಚಿಹೋದ ಸೇತುವೆ
ಉತ್ತರಾಖಂಡದ ಚಮೋಲಿ ಜಿಲ್ಲೆಯ ಗಡಿ ಪ್ರದೇಶದಲ್ಲಿರುವ ಜುಮ್ಮಾಗಡ ನದಿಯಲ್ಲಿ ಪ್ರವಾಹ ಉಂಟಾಗಿ ಸೇತುವೆಯೊಂದು ಕೊಚ್ಚಿ ಹೋಗಿದೆ. ಪರಿಣಾಮವಾಗಿ ಇಂಡೋ- ಟಿಬೆಟ್‌ ಗಡಿ ರಸ್ತೆ ಬ್ಲಾಕ್‌ ಆಗಿದ್ದು, ಸುಮಾರು 12ರಷ್ಟು ಗಡಿ ಗ್ರಾಮಗಳೊಂದಿಗಿನ ಸಂಪರ್ಕವೇ ಕಡಿತಗೊಂಡಿದೆ.

ಅಮರನಾಥ ಯಾತ್ರೆ ಪುನಾರಂಭ
ಜಮ್ಮು-ಶ್ರೀನಗದ ರಾಷ್ಟ್ರೀಯ ಹೆದ್ದಾರಿ ಮುಚ್ಚಿದ್ದರಿಂದ ಕಳೆದ 3 ದಿನಗಳಿಂದ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನಾರಂಭಗೊಂಡಿದೆ. ಭಾರೀ ಮಳೆಯಿಂದಾಗಿ ಹೆದ್ದಾರಿಯ ಹಲವು ಭಾಗಗಳು ಹಾನಿಗೀಡಾದ ಕಾರಣ ಈ ಮಾರ್ಗದಲ್ಲಿ ಯಾತ್ರಿಕರ ಪ್ರಯಾಣಕ್ಕೆ ಅವಕಾಶ ನಿರಾಕರಿಸಲಾಗಿತ್ತು. ರಸ್ತೆ ದುರಸ್ತಿಯಾದ ಹಿನ್ನೆಲೆ ಮಂಗಳವಾರ ಜಮ್ಮು ಬೇಸ್‌ ಕ್ಯಾಂಪ್‌ನಿಂದ ಯಾತ್ರಿಕರ ತಂಡ ಅಮರನಾಥದತ್ತ ಪ್ರಯಾಣ ಬೆಳೆಸಿದೆ.

ಉತ್ತರಕಾಶಿಯಲ್ಲಿ 4 ಯಾತ್ರಿಕರ ಸಾವು
ಉತ್ತರಾಖಂಡದ ಉತ್ತರಕಾಶಿಯಲ್ಲಿ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಗನಾನಿ ಸೇತುವೆ­ಯಲ್ಲಿ ಸಂಚರಿಸುತ್ತಿದ್ದ ಮೂರು ವಾಹನಗಳು ಭೂಕುಸಿತಕ್ಕೆ ಸಿಲುಕಿದ ಪರಿಣಾಮ ನಾಲ್ವರು ಯಾತ್ರಿಕರು ಮೃತಪಟ್ಟಿದ್ದಾರೆ. 7 ಮಂದಿ ಗಾಯಗೊಂಡಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ಸಂಭವಿಸಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೂರು ವಾಹನಗಳಲ್ಲಿ ಒಟ್ಟಾರೆ 30 ಮಂದಿಯಿದ್ದರು. ಗುಡ್ಡ ಕುಸಿತದ ವೇಳೆ ದೊಡ್ಡ ಬಂಡೆಕಲ್ಲುಗಳು ಈ ವಾಹನಗಳ ಮೇಲೆ ಉರುಳಿ ಬಿದ್ದು ಅವಘಡ ಸಂಭವಿಸಿದೆ. ಇದೇ ವೇಳೆ ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಿಂದ ಒಂದು ಅಂತಸ್ತಿನ ಮನೆ ಕುಸಿದು ಬಿದ್ದು, ವ್ಯಕ್ತಿಯೊಬ್ಬ ಮೃತಪಟ್ಟು, ಪತ್ನಿ ಮತ್ತು ಮಗ ಗಾಯಗೊಂಡಿದ್ದಾರೆ.

ರಾಜಸ್ಥಾನದಲ್ಲಿ 7 ಬಲಿ
ರಾಜಸ್ಥಾನದ 14 ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವ­ರಿ­ದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆಗಳು, ರೈಲ್ವೇ ಹಳಿಗಳು ಮುಳುಗಡೆಯಾಗಿವೆ. ರವಿವಾರ ರಾತ್ರಿಯಿಂದೀಚೆಗೆ ಒಟ್ಟು 7 ಮಂದಿ ಮಳೆ ಸಂಬಂಧಿ ಅವಘಡಗಳಿಗೆ ಬಲಿಯಾಗಿದ್ದಾರೆ. ಸಿರೋಹಿಯ ಮೌಂಟ್‌ ಅಬುವಿನಲ್ಲಿ ಕೇವಲ 24 ಗಂಟೆಗಳ ಅವಧಿಯಲ್ಲಿ ಅತ್ಯಧಿಕ ಅಂದರೆ 231 ಮಿ.ಮೀ. ಮಳೆ ದಾಖಲಾಗಿದೆ.

ಟಾಪ್ ನ್ಯೂಸ್

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.